ಅಗ್ಗದ ವಿಮಾನಯಾನ ಉಡಾನ್‌ ಯೋಜನೆಗೆ ಒಪ್ಪಂದ


Team Udayavani, Apr 21, 2017, 3:45 AM IST

Ban21041706Medn.jpg

ಬೆಂಗಳೂರು: ದೇಶದ ಸಾಮಾನ್ಯ ನಾಗರಿಕನೂ ವಿಮಾನದಲ್ಲಿ ಪ್ರಯಾಣಿಸುವಂತಾಗಬೇಕು ಎಂಬ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಪ್ರಾದೇಶಿಕ ಸಂಪರ್ಕ ಯೋಜನೆಯಾದ (ಆರ್‌ಸಿಎಸ್‌) “ಉಡಾನ್‌’ನಲ್ಲಿ ಪಾಲ್ಗೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ಕೇಂದ್ರ ವಿಮಾನಯಾನ ಸಚಿವಾಲಯ ಹಾಗೂ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತು.

ಪ್ರಾದೇಶಿಕ ಮಟ್ಟದಲ್ಲಿ ಒಂದೇ ರಾಜ್ಯದ ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ಮತ್ತು ನೆರೆಯ ರಾಜ್ಯದ ಗಡಿ ಭಾಗದ ಪ್ರದೇಶಗಳಿಗೆ ವಿಮಾನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ಈ “ಉಡಾನ್‌’ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ದೇಶಾದ್ಯಂತ 400 ವಿಮಾನ ನಿಲ್ದಾಣಗಳ ಪೈಕಿ ಮೊದಲ ಹಂತದಲ್ಲಿ 45 ವಿಮಾನ ನಿಲ್ದಾಣಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಅದರಲ್ಲಿ ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳಿಗೆ ಮೊದಲ ಹಂತದಲ್ಲಿ ವಿಮಾನಯಾನ ಸಂಸ್ಥೆಗಳಿಂದ ಬಿಡ್‌ ಮೂಲಕ ಪ್ರಸ್ತಾವನೆಗಳು ಬಂದಿವೆ.

ವಿಧಾನಸೌಧದಲ್ಲಿ ಗುರುವಾರ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ಹಾಗೂ ಕೇಂದ್ರ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ ನಾರಾಯಣ ಚೌಬೆ ಸಮ್ಮುಖದಲ್ಲಿ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಶ್ರೀವಿಧ್ಯಾ ಮತ್ತು ಕೇಂದ್ರ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಾಟೀಲ್‌ ಇವರಿಬ್ಬರು “ಉಡಾನ್‌’ ಯೋಜನೆಯ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷಚಂದ್ರ್ ಖುಂಟಿಯಾ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಚಿವ ಆರ್‌.ವಿ. ದೇಶಪಾಂಡೆ, ಪ್ರಾದೇಶಿಕ ಸಂಪರ್ಕ ಯೋಜನೆ “ಉಡಾನ್‌’ನ ಮೊದಲ ಹಂತದಲ್ಲಿ ಕರ್ನಾಟಕದ ಬೆಂಗಳೂರು, ಮೈಸೂರು, ವಿದ್ಯಾನಗರ (ಬಳ್ಳಾರಿ) ಮತ್ತು ಬೀದರ್‌ ವಿಮಾನ ನಿಲ್ದಾಣಗಳಿಂದ ರಾಜ್ಯದ ಬೇರೆ ಪ್ರದೇಶಗಳಿಗೆ ವಿಮಾನ ಹಾರಾಟ ಆರಂಭಿಸುವ ಕುರಿತು ವಿವಿಧ ವಿಮಾನಯಾನ ಸಂಸ್ಥೆಗಳಿಂದ ಬಿಡ್‌ ಮೂಲಕ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮವಾಗಿ 80:20ರ ಅನುಪಾತದಲ್ಲಿ ಹಣಕಾಸಿನ ನೆರವು ಒದಗಿಸಲಿದೆ ಎಂದರು.

ತೆರಿಗೆ ವಿನಾಯ್ತಿ: ಉಡಾನ್‌ನ ಪ್ರಾದೇಶಿಕ ಸಂಪರ್ಕ ಯೋಜನೆಯ ರಾಜ್ಯದ ವಿಮಾನ ನಿಲ್ದಾಣಗಳಿಂದ ರಾಜ್ಯದ ಇತರ ಪ್ರದೇಶಗಳಿಗೆ ವಿಮಾನ ಸಂಚಾರ ನಿರ್ವಹಿಸುವ ವಿಮಾನಯಾನ ಸಂಸ್ಥೆಗಳಿಗೆ ಮಾರಾಟ ತೆರಿಗೆಯಲ್ಲಿ ಶೇ. 1ರಷ್ಟು ಕಡಿತ ಅಥವಾ ವಿಮಾನಯಾನ ಟರ್ಬೈನ್‌ ಇಂಧನನಲ್ಲಿ ವಿನಾಯ್ತಿ ನೀಡಲಾಗುವುದು. ಅಲ್ಲದೇ ಅವಶಕ್ಯತೆ ಇದ್ದಲ್ಲಿ ಉಚಿತ ಭೂಮಿ, ವಿದ್ಯುತ್‌, ನೀರು ಸೇರಿದಂತೆ ಇತರ ಮೂಲಸೌಕರ್ಯ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ದೇಶಪಾಂಡೆ ತಿಳಿಸಿದರು.

ಏಪ್ರಿಲ್‌ 27ಕ್ಕೆ ಚಾಲನೆ: ಇದೇ ವೇಳೆ ಮಾತನಾಡಿದ ಕೇಂದ್ರ ವಿಮಾನಯಾನ ಕಾರ್ಯದರ್ಶಿ ರಾಜೀವ ನಾರಾಯಣ ಚೌಬೆ, ಉಡಾನ್‌ ಯೋಜನೆಗೆ ಏ.27ರಂದು ಶಿಮ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಈ ವೇಳೆ ಶಿಮ್ಲಾ-ದೆಹಲಿ, ನಾಂದೇಡ-ಹೈದರಬಾದ ಮತ್ತು ಕಡಪ-ಹೈದರಬಾದ ವಿಮಾನಯಾನ ಸಂಚಾರ ಮಾರ್ಗಗಳಿಗೆ ಹಸಿರು ನಿಶಾನೆ ಸಿಗಲಿದೆ. ವಿದ್ಯಾನಗರ-ಮೈಸೂರು ನಡುವೆ ಜುಲೈ ವೇಳೆಗೆ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ. ಎರಡನೇ ಹಂತದ ಬಿಡ್‌ ಇನ್ನೆರಡು ತಿಂಗಳಲ್ಲಿ ಆರಂಭವಾಗಲಿದೆ ಎಂದರು.

“ಅರ್ಥಿಕ ಪ್ರಗತಿಗೆ ರಸ್ತೆ, ರೈಲು ಮತ್ತು ವಿಮಾನ ಸಂಪರ್ಕ ಮುಖ್ಯ. ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಸೇರಿದಂತೆ ಬೆಳಗಾವಿ, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿ ವಿಮಾನ ನಿಲ್ದಾಣಗಳ ತಾಂತ್ರಿಕ ಸಮಸ್ಯೆಗಳ ಕುರಿತು ಕೇಂದ್ರ ವಿಮಾನಯಾನ ಸಚಿವಾಲಯದ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ’.
– ಆರ್‌.ವಿ. ದೇಶಪಾಂಡೆ, ಕೈಗಾರಿಕಾ ಹಾಗೂ ಮೂಲಸೌಕರ್ಯ ಸಚಿವ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.