ಅಗ್ಗದ ವಿಮಾನಯಾನ ಉಡಾನ್‌ ಯೋಜನೆಗೆ ಒಪ್ಪಂದ


Team Udayavani, Apr 21, 2017, 3:45 AM IST

Ban21041706Medn.jpg

ಬೆಂಗಳೂರು: ದೇಶದ ಸಾಮಾನ್ಯ ನಾಗರಿಕನೂ ವಿಮಾನದಲ್ಲಿ ಪ್ರಯಾಣಿಸುವಂತಾಗಬೇಕು ಎಂಬ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಪ್ರಾದೇಶಿಕ ಸಂಪರ್ಕ ಯೋಜನೆಯಾದ (ಆರ್‌ಸಿಎಸ್‌) “ಉಡಾನ್‌’ನಲ್ಲಿ ಪಾಲ್ಗೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ಕೇಂದ್ರ ವಿಮಾನಯಾನ ಸಚಿವಾಲಯ ಹಾಗೂ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತು.

ಪ್ರಾದೇಶಿಕ ಮಟ್ಟದಲ್ಲಿ ಒಂದೇ ರಾಜ್ಯದ ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ಮತ್ತು ನೆರೆಯ ರಾಜ್ಯದ ಗಡಿ ಭಾಗದ ಪ್ರದೇಶಗಳಿಗೆ ವಿಮಾನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ಈ “ಉಡಾನ್‌’ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ದೇಶಾದ್ಯಂತ 400 ವಿಮಾನ ನಿಲ್ದಾಣಗಳ ಪೈಕಿ ಮೊದಲ ಹಂತದಲ್ಲಿ 45 ವಿಮಾನ ನಿಲ್ದಾಣಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಅದರಲ್ಲಿ ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳಿಗೆ ಮೊದಲ ಹಂತದಲ್ಲಿ ವಿಮಾನಯಾನ ಸಂಸ್ಥೆಗಳಿಂದ ಬಿಡ್‌ ಮೂಲಕ ಪ್ರಸ್ತಾವನೆಗಳು ಬಂದಿವೆ.

ವಿಧಾನಸೌಧದಲ್ಲಿ ಗುರುವಾರ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ಹಾಗೂ ಕೇಂದ್ರ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ ನಾರಾಯಣ ಚೌಬೆ ಸಮ್ಮುಖದಲ್ಲಿ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಶ್ರೀವಿಧ್ಯಾ ಮತ್ತು ಕೇಂದ್ರ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಾಟೀಲ್‌ ಇವರಿಬ್ಬರು “ಉಡಾನ್‌’ ಯೋಜನೆಯ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷಚಂದ್ರ್ ಖುಂಟಿಯಾ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಚಿವ ಆರ್‌.ವಿ. ದೇಶಪಾಂಡೆ, ಪ್ರಾದೇಶಿಕ ಸಂಪರ್ಕ ಯೋಜನೆ “ಉಡಾನ್‌’ನ ಮೊದಲ ಹಂತದಲ್ಲಿ ಕರ್ನಾಟಕದ ಬೆಂಗಳೂರು, ಮೈಸೂರು, ವಿದ್ಯಾನಗರ (ಬಳ್ಳಾರಿ) ಮತ್ತು ಬೀದರ್‌ ವಿಮಾನ ನಿಲ್ದಾಣಗಳಿಂದ ರಾಜ್ಯದ ಬೇರೆ ಪ್ರದೇಶಗಳಿಗೆ ವಿಮಾನ ಹಾರಾಟ ಆರಂಭಿಸುವ ಕುರಿತು ವಿವಿಧ ವಿಮಾನಯಾನ ಸಂಸ್ಥೆಗಳಿಂದ ಬಿಡ್‌ ಮೂಲಕ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮವಾಗಿ 80:20ರ ಅನುಪಾತದಲ್ಲಿ ಹಣಕಾಸಿನ ನೆರವು ಒದಗಿಸಲಿದೆ ಎಂದರು.

ತೆರಿಗೆ ವಿನಾಯ್ತಿ: ಉಡಾನ್‌ನ ಪ್ರಾದೇಶಿಕ ಸಂಪರ್ಕ ಯೋಜನೆಯ ರಾಜ್ಯದ ವಿಮಾನ ನಿಲ್ದಾಣಗಳಿಂದ ರಾಜ್ಯದ ಇತರ ಪ್ರದೇಶಗಳಿಗೆ ವಿಮಾನ ಸಂಚಾರ ನಿರ್ವಹಿಸುವ ವಿಮಾನಯಾನ ಸಂಸ್ಥೆಗಳಿಗೆ ಮಾರಾಟ ತೆರಿಗೆಯಲ್ಲಿ ಶೇ. 1ರಷ್ಟು ಕಡಿತ ಅಥವಾ ವಿಮಾನಯಾನ ಟರ್ಬೈನ್‌ ಇಂಧನನಲ್ಲಿ ವಿನಾಯ್ತಿ ನೀಡಲಾಗುವುದು. ಅಲ್ಲದೇ ಅವಶಕ್ಯತೆ ಇದ್ದಲ್ಲಿ ಉಚಿತ ಭೂಮಿ, ವಿದ್ಯುತ್‌, ನೀರು ಸೇರಿದಂತೆ ಇತರ ಮೂಲಸೌಕರ್ಯ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ದೇಶಪಾಂಡೆ ತಿಳಿಸಿದರು.

ಏಪ್ರಿಲ್‌ 27ಕ್ಕೆ ಚಾಲನೆ: ಇದೇ ವೇಳೆ ಮಾತನಾಡಿದ ಕೇಂದ್ರ ವಿಮಾನಯಾನ ಕಾರ್ಯದರ್ಶಿ ರಾಜೀವ ನಾರಾಯಣ ಚೌಬೆ, ಉಡಾನ್‌ ಯೋಜನೆಗೆ ಏ.27ರಂದು ಶಿಮ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಈ ವೇಳೆ ಶಿಮ್ಲಾ-ದೆಹಲಿ, ನಾಂದೇಡ-ಹೈದರಬಾದ ಮತ್ತು ಕಡಪ-ಹೈದರಬಾದ ವಿಮಾನಯಾನ ಸಂಚಾರ ಮಾರ್ಗಗಳಿಗೆ ಹಸಿರು ನಿಶಾನೆ ಸಿಗಲಿದೆ. ವಿದ್ಯಾನಗರ-ಮೈಸೂರು ನಡುವೆ ಜುಲೈ ವೇಳೆಗೆ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ. ಎರಡನೇ ಹಂತದ ಬಿಡ್‌ ಇನ್ನೆರಡು ತಿಂಗಳಲ್ಲಿ ಆರಂಭವಾಗಲಿದೆ ಎಂದರು.

“ಅರ್ಥಿಕ ಪ್ರಗತಿಗೆ ರಸ್ತೆ, ರೈಲು ಮತ್ತು ವಿಮಾನ ಸಂಪರ್ಕ ಮುಖ್ಯ. ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಸೇರಿದಂತೆ ಬೆಳಗಾವಿ, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿ ವಿಮಾನ ನಿಲ್ದಾಣಗಳ ತಾಂತ್ರಿಕ ಸಮಸ್ಯೆಗಳ ಕುರಿತು ಕೇಂದ್ರ ವಿಮಾನಯಾನ ಸಚಿವಾಲಯದ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ’.
– ಆರ್‌.ವಿ. ದೇಶಪಾಂಡೆ, ಕೈಗಾರಿಕಾ ಹಾಗೂ ಮೂಲಸೌಕರ್ಯ ಸಚಿವ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.