ನಾನು ಡೋಂಗಿತನವುಳ್ಳ ಆಸ್ತಿಕನಲ್ಲ; ದೇವರಿಗೆ ಸಂಸ್ಕೃತ,ಮಂತ್ರ ಬೇಕಿಲ್ಲ


Team Udayavani, Apr 21, 2017, 2:38 PM IST

6.jpg

ಉಡುಪಿ: ನಾನು ನಾಸ್ತಿಕನಲ್ಲ, ಆದರೆ ನಾನು ಡೋಂಗಿ ತನವುಳ್ಳ ಆಸ್ತಿಕನಲ್ಲ .ದೇವರನ್ನು ಒಲಿಸಿಕೊಳ್ಳಲು ಸಂಸ್ಕೃತ ಬೇಕಿಲ್ಲ,ಮಂತ್ರ ಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿಕೆ ನೀಡಿದ್ದಾರೆ. 

 ಶ್ರೀ ಬಾರ್ಕೂರು ಮಹಾ ಸಂಸ್ಥಾನದಲ್ಲಿ ಶ್ರೀ ವಿಶ್ವ ಸಂತೋಷ ಭಾರತಿ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಶ್ರೀ ನಾಗದೇವರ ಮತ್ತು ಮೂಲ ದೈವಗಳ ಪುನಃ ಪ್ರತಿಷ್ಠಾಪನೆ ಮತ್ತು ನಾಗಮಂಡಲೋತ್ಸವ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಸಹಿಷ್ಣುತೆ ಹಿಂದೂ ಧರ್ಮದ ಮೂಲ ತತ್ವ ಇದನ್ನು ಅರ್ಥ ಮಾಡಿಕೊಂಡರೆ ನಾವು ಮನುಷ್ಯರಾಗಿ ಬಾಳಲು ಸಾಧ್ಯ ಎಂದರು. 

ಇರುವುದು ಒಂದೇ ದೇವರು ಭಕ್ತಿ ಶುದ್ಧವಾಗಿದ್ದರೆ ಸಾಕು. ಮನುಷ್ಯರ ಪರವಾಗಿ ಇದ್ದರೆ ಸಾಕು. ಕೆಲವರು ಹೇಳ್ತಾರೆ ನಾಸ್ತಿಕ ಅಂತ. ನಾನು ನಮ್ಮೂರಿನ ದೇಸ್ಥಾನಕ್ಕೆ ಹೋಗುತ್ತೇನೆ ಹೊರತು ದೇವರನ್ನು ಹುಡುಕಿಕೊಂಡು ಹೋಗುವುದಿಲ್ಲ,ಸಿದ್ದರಾಮ ದೇವಾಲಯಕ್ಕೆ, ಚಾಮುಂಡೇಶ್ವರಿ ದೇವಾಲಯಕ್ಕೆ , ತಿರುಪತಿಗೆ ಹೋಗಿದ್ದೇನೆ ಎಂದರು. 

ದೇವನೊಬ್ಬ ನಾಮ ಹಲವು. ಎಲ್ಲಾ ದೇವಸ್ಥಾನಗಳಿಗೆ ಹೋಗಬೇಕೆಂದು ದೇವರು ಹೇಳಿಲ್ಲ.ಕಷ್ಟ ಬಂದಾಗ ನಮ್ಮೂರ ದೇವರು ಸಾಕು. ಆತ್ಮಶುದ್ಧಿ ,ಮಾನವೀಯತೆ ಇಲ್ಲದಿದ್ದರೆ ಯಾವ ದೇವರು ಕೂಡ ನಿಮ್ಮ ಕಷ್ಟ  ಪರಿಹರಿಸುವುದಿಲ್ಲ ಎಂದರು. 

ಆತ್ಮದೊಳಗೆ ಒಂದು ಇಟ್ಟುಕೊಂಡು ಇನ್ನೊಂದು ಮನಸ್ಸಿನಲ್ಲಿ ಮಂತ್ರ ಹೇಳಿದ್ರೆ ಪ್ರಯೋಜನವಿಲ್ಲ. ದೇವರ ಅನುಗ್ರಹ ಪಡೆಯಲು ಮಂತ್ರ ಕಲೀಬೇಕಾ? ಸಂಸ್ಕೃತ ಬೇಕಾ ? ಯಾವುದೂ ಬೇಡ ಎಂದರು. 

ನಾನು ಯಾವುದೇ ದೇವಸ್ಥಾನಕ್ಕೆ ,ಧಾರ್ಮಿಕ ಕೇಂದ್ರಕ್ಕೆ ಯಾರಿಗೂ ವಿರುದ್ಧ ಇಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇಟ್ಟುಕೊಂಡವ. ಬಸವಣ್ಣ ಹೇಳಿದಂತೆ ಇವ ನಮ್ಮವ ,ನಮ್ಮವ ,ನಮ್ಮವ ಎನ್ನುವವ. ಕೆಲವರು ಇದನ್ನು ಹೇಳ್ತಾರೆ ಆ ಬಳಿಕ ಬದಿಗೆ ಕರೆದು ಇವ ಯಾವ ಜಾತಿ ಎಂದು ಕೇಳ್ತಾರೆ ಎಂದರು. 

ಇವತ್ತು ನಾವು ಸಂಸತ್‌, ವಿಧಾನಸಭೆ ,ವಿಧಾನ ಪರಿಷತ್‌ ಎಂದು ಕರೆಯುತ್ತೇವೆಯೋ ಅದಕ್ಕೆಲ್ಲಾ ಮೂಲ ಬಸವಣ್ಣನ ಅನುಭವ ಮಂಟಪ ಎಂದರು. 

ಎಲ್ಲಾ ಪದ್ದತಿಗಳನ್ನು ನಾವು ನಿರ್ಮಾಣ ಮಾಡಿಕೊಂಡಿರುವುದು. ದೇವರಿಗೂ ನಮಗೂ ನಡುವೆ ಒಂದು ಕಂದಕ ನಿರ್ಮಾಣ ಮಾಡಿರುವುದು,ಅದಕ್ಕೂ ಮಧ್ಯವರ್ತಿಗಳು.ಕೆಲವು ದೇವಸ್ಥಾನಗಳಿಗೆ ಕೆಲ ಜಾತಿಗಳಿಗೆ ಪ್ರವೇಶವಿಲ್ಲ. ಇನ್ನು ಕೆಲ ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ ,ಅದು ಏಕೆ ಎಂದು ಪ್ರಶ್ನಿಸಿದರು. 

ಎಲ್ಲಾ ಧರ್ಮಗಳು ಸಮಾನ. ದಯವೇ ಧರ್ಮದ ಮೂಲ ಹೊರತು ಬೇರೆನು ಅಲ್ಲ. ಧರ್ಮವನ್ನು ಜನರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು ,ದಾಸರು ,ಸಂತರು ಶರಣರು ,ಸೂಫಿಗಳು ಸರಳವಾದ ಭಾಷೆಯಲ್ಲಿ ಮನುಷ್ಯರನ್ನು ತಲುಪಿ ಎಲ್ಲರಿಗೂ ಅರ್ಥವಾದರು ಎಂದರು. 

ಬಂಟ ಸಮಾಜವನ್ನು ಹೊಗಳಿದ ಸಿಎಂ ನಿಮ್ಮ ಸಮಾಜದಲ್ಲಿ ಪುರುಷ ಮಹಿಳೆ ಎಂಬ ಭೇದ ಇಲ್ಲ , ಸಾಹಸ ಪ್ರವೃತ್ತಿ ಇರುವವರು. ಹಾಗಾಗಿ ಯಾವುದೇ ಕ್ಷೇತ್ರದಲ್ಲಿ ಬದುಕಲು ಸಾಧ್ಯವಾಗಿದೆ ಎಂದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.