ನೆರೆ ಬರುವ ಮುನ್ನವೇ ಸಿಗುತ್ತೆ ಮುನ್ಸೂಚನೆ!


Team Udayavani, Apr 23, 2017, 3:45 AM IST

sadc.jpg

ಬೆಂಗಳೂರು: ಮಳೆ ಮುನ್ಸೂಚನೆ ಮಾತ್ರವಲ್ಲ, ಇನ್ನು ಮುಂದೆ ನಗರದಲ್ಲಿ  ಮಳೆಯಿಂದ ಉಂಟಾಗುವ ದಿಢೀರ್‌ ನೆರೆ ಬಗ್ಗೆಯೂ ಮುಂಚಿತವಾಗಿಯೇ ಮಾಹಿತಿ ಸಿಗಲಿದೆ.

ದಿಢೀರ್‌ ನೆರೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ನಗರದಲ್ಲಿನ ಮಳೆ ನೀರುಗಾಲುವೆಗಳಲ್ಲಿಯೇ ಸೆನ್ಸರ್‌ ಆಧಾರಿತ ನೆರೆ ಮುನ್ಸೂಚನ ಯಂತ್ರಗಳನ್ನು ಅಳವಡಿಸುತ್ತಿದೆ.

ಈ ನೂತನ ಸೆನ್ಸರ್‌ ಆಧಾರಿತ ಯಂತ್ರಗಳ ಅಳವಡಿಕೆಯಿಂದ ಕನಿಷ್ಠ 15 ನಿಮಿಷ ಮುಂಚಿತ ವಾಗಿಯೇ ಬಿಬಿಎಂಪಿ ಆಯುಕ್ತರು, ಪೊಲೀಸ್‌ ಅಧಿಕಾರಿಗಳು ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ಮುನ್ಸೂಚನೆ ಹೋಗುತ್ತದೆ. ಇದರಿಂದ ಆಗಬಹು ದಾದ ಹಾನಿಯನ್ನು ಸಾಕಷ್ಟು ಪ್ರಮಾಣದಲ್ಲಿ ತಗ್ಗಿಸಬಹುದು. ಜತೆಗೆ ಆ ಪ್ರದೇಶಗಳಲ್ಲಿರುವ ನೀರುಗಾಲುವೆಗಳನ್ನು ಮರುವಿನ್ಯಾಸಗೊಳಿಸಿ ನೆರೆ ಯನ್ನು ಶಾಶ್ವತವಾಗಿ ತಡೆಗಟ್ಟಬಹುದು ಎಂದು ಕೆಎಸ್‌ಎನ್‌ಡಿಎಂಸಿ ಪ್ರಾಜೆಕ್ಟ್ ವಿಜ್ಞಾನಿ (ಜಲವಿಜ್ಞಾನ ವಿಭಾಗ) ಶುಭಾ ಅವಿನಾಶ್‌ ತಿಳಿಸಿದ್ದಾರೆ.

ಕೆಎಸ್‌ಎನ್‌ಡಿಎಂಸಿ ಆವರಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಹವಾಮಾನ ಮಾಹಿತಿ ಸಂವಹನ – ಮಾಧ್ಯಮದ ಪಾತ್ರ’ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ನಗರದ ಗೊಟ್ಟಿಗೆರೆ, ಹುಳಿಮಾವು, ಮಡಿವಾಳ ಮತ್ತು ಅರಕೆರೆಯ ಕೆರೆಗಳಿಗೆ ಕೂಡುವ ಮಳೆ ನೀರುಗಾಲುವೆಗಳಲ್ಲಿ 6 ಸೆನ್ಸರ್‌ ಆಧಾರಿತ ನೀರಿನಮಟ್ಟ ಅಳೆಯುವ ಮಾಪನಗಳನ್ನು ಅಳವಡಿಸಲಾಗಿದೆ. ಇದರ ಮಾಹಿತಿ ಸ್ವೀಕೃತಿ ಯಂತ್ರಗಳನ್ನು ಹತ್ತಿರದ ಕಟ್ಟಡದಲ್ಲಿ ಅಳವಡಿಸಲಾಗುವುದು ಎಂದರು. 

ಮಳೆ ನೀರುಗಾಲುವೆಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿ ದ್ದಂತೆ ತತ್‌ಕ್ಷಣ ರಿಸೀವರ್‌ಗೆ ರವಾನೆಯಾಗುತ್ತದೆ. ಅಲ್ಲಿಂದ ಕೆಎಸ್‌ಎನ್‌ಡಿಎಂಸಿಗೆ ಹೋಗುತ್ತದೆ. ಆ ಮೂಲಕ ಉಳಿದೆಲ್ಲ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಹೋಗುತ್ತದೆ. ಇವೆಲ್ಲವೂ ಕೆಲವೇ ಸೆಕೆಂಡುಗಳಲ್ಲಿ ಆಗುತ್ತದೆ. 15 ನಿಮಿಷಗಳಲ್ಲಿ ಈ ಮುನ್ಸೂಚನೆ ದೊರೆಯುತ್ತದೆ ಎಂದು ಹೇಳಿದರು.

ಪ್ರತ್ಯೇಕ ಮಳೆ ಮುನ್ಸೂಚನೆ  ವ್ಯವಸ್ಥೆಗೆ ಚಿಂತನೆ
ಮುಂದಿನ ವರ್ಷದಿಂದ ರಾಜ್ಯದಲ್ಲಿ ಪ್ರತ್ಯೇಕ ಮಳೆ ಮುನ್ಸೂಚನ ವ್ಯವಸ್ಥೆಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಚಿಂತನೆ ನಡೆಸಿದೆ. ಪ್ರಸ್ತುತ ಇಡೀ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡುತ್ತದೆ. ಆದರೆ, ಈ ಮುನ್ಸೂಚನೆಯು ಪ್ರಾದೇಶಿಕವಾರು ಇರುವುದ ರಿಂದ ನಿಖರವಾಗಿ ಮಾಹಿತಿ ಲಭ್ಯವಾಗುವುದಿಲ್ಲ ಎಂಬ ಕೊರಗು ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವರ್ಷದ ಮುಂಗಾರು ಮಳೆಯ ಮುನ್ಸೂಚನೆಯನ್ನು ಕೆಎಸ್‌ಎನ್‌ಡಿಎಂಸಿಯೇ ನೀಡಲು ಸಿದ್ಧತೆ ನಡೆದಿದೆ ಎಂದು ಕೇಂದ್ರದ ನಿರ್ದೇಶಕ ಡಾ| ಜಿ.ಎಸ್‌. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರತ್ಯೇಕ ಮಳೆ ಮುನ್ಸೂಚನ ವಿಭಾಗ ಆರಂಭಿಸುವ ಸಂಬಂಧ ಕೇಂದ್ರ ಸರಕಾರದ ಸಿ-ಮ್ಯಾಕ್ಸ್‌  ಜತೆ ಒಡಂಬಡಿಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಕೆಎಸ್‌ಎನ್‌ಡಿಎಂಸಿಯು ಈ ಸಂಸ್ಥೆಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಕೊಡಲಿದೆ. ಇದರಿಂದ ರಾಜ್ಯದ ಜನರಿಗೆ ಮುಂಗಾರು ಪ್ರವೇಶ‌, ಹಿಂಗಾರು ಪ್ರವೇಶ ಸಹಿತ ಸೀಜನ್‌ವಾರು ಮಳೆ ಮಾಹಿತಿ ನೀಡಲು ಸಾಧ್ಯವಾಗಲಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ, ಮುಂದಿನ ವರ್ಷದಿಂದಲೇ ಈ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.