ಕೊಳವೆ ಬಾವಿ ಪ್ರಕರಣ: ಕಠಿಣ ಶಿಕ್ಷೆಗೆ ಕಾನೂನು; ಎಚ್.ಕೆ. ಪಾಟೀಲ್
Team Udayavani, Apr 24, 2017, 3:45 AM IST
ಬೆಂಗಳೂರು: ಕೊಳವೆ ಬಾವಿಗಳನ್ನು ಕೊರೆದು ನೀರು ಬಾರದಿದ್ದರೆ, ಅವುಗಳನ್ನು ಸರಿಯಾಗಿ ಮುಚ್ಚದಿದ್ದರೆ, ಸಂಬಂಧ ಪಟ್ಟ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನು ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಬೆಳಗಾವಿಯ ಝುಂಜರವಾಡ ಗ್ರಾಮದಲ್ಲಿ ಆರು ವರ್ಷದ ಬಾಲಕಿ ಕಾವೇರಿ ಕೊಳವೆ ಬಾವಿಗೆ ಬಿದ್ದ ಪ್ರಕರಣದ ಕುರಿತು ಬೆಂಗಳೂರಿಲ್ಲಿ ಮಾತನಾಡಿದ ಅವರು, ಕಾವೇರಿಯನ್ನು ಮೇಲೆತ್ತಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ. ಎರಡು ದಿನದಿಂದ ನಿರಂತರ ಕಾರ್ಯಾಚರಣೆ ನಡೆಸಲಾಗಿದ್ದು, ಹೈದರಾಬಾದ್ನಿಂದಲೂ ನುರಿತ ತಜ್ಞರನ್ನು ಕರೆಸಲಾಗಿದೆ.
ಕೊಳವೆ ಬಾವಿಗಳಲ್ಲಿ ಮಕ್ಕಳು ಬೀಳುವ ಪ್ರಕರಣ ಹೆಚ್ಚಾಗುತ್ತಿವೆ. ಸರ್ಕಾರ ಕೊರೆದ ಬೋರ್ವೆಲ್ಗಳಲ್ಲಿ ಮಕ್ಕಳು ಬಿದ್ದರೆ, ಅದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಬಹುದು. ಆದರೆ, ಖಾಸಗಿಯವರು ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆದು, ನೀರು ಬಾರದಿದ್ದಾಗ ಮಾಲೀಕರು ಪಂಚಾಯತಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಮಾಹಿತಿ ಕೊಟ್ಟ ನಂತರ ಅಧಿಕಾರಿಗಳು ಕೊಳವೆ ಬಾವಿ ಮುಚ್ಚದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೊರೆದ ಕೊಳವೆ ಬಾವಿ ಮುಚ್ಚಬೇಕು ಎಂದು ಈ ಹಿಂದೆಯೇ ಸರ್ಕಾರ ಸುತ್ತೋಲೆ ಹೊರಡಿಸಿದೆ. ಬೆಳಗಾವಿಯ ಕಾವೇರಿ ಪ್ರಕರಣದಲ್ಲಿ ಮಾಲೀಕನೇ ಹೊಣೆಗಾರನಾಗುತ್ತಾನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು