ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ : ಬೀದಿಗೆ ಬಿದ್ದ 72 ಕುಟುಂಬಗಳು
Team Udayavani, Apr 30, 2017, 12:27 PM IST
ಬೆಳಗಾವಿ: ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶನಿವಾರ ರಾತ್ರಿ ಭೀಕರ ಅವಘಡ ಸಂಭವಿಸಿದ್ದು , 72 ಮನೆಗಳು ಬೆಂಕಿಗೆ ಆಹುತಿಯಾಗಿದ್ದು ,73 ಹುಲ್ಲಿನ ಬಣವೆ, 3 ಜಾನುವಾರುಗಳು ಸಜೀವ ದಹನಗೊಂಡಿವೆ.
72 ಕುಟುಂಬಗಳು ಮನೆ ಮಾರು ಕಳೆದುಕೊಂಡಿದ್ದು, ಅವರಿಗೆ ಸರ್ಕಾರಿ ಶಾಲೆಗಳಲ್ಲಿ ಆಶ್ರಯ ನೀಡಲಾಗಿದ್ದು , ಜಿಲ್ಲಾಡಳಿತದ ವತಿಯಿಂದ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಸ್ಥಳಕ್ಕಾಗಮಿಸಿ ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಮನೆ ಕಳೆದುಕೊಂಡಿರುವವರಿಗೆ ಸರ್ಕಾರದ ವತಿಯಿಂದ ಬಸವ ವಸತಿ ಯೋಜನೆ ಅಡಿ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದು, 2 ದಿನಗಳಲ್ಲೇ ಮನೆ ನಿರ್ಮಾಣ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ತಾತ್ಕಾಲಿಕ ಪರಿಹಾರವನ್ನು ವಿತರಿಸಿದರು.
ಶನಿವಾರ ಸಂಜೆ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕದಳದ 70ಕ್ಕೂ ಅಧಿಕ ಸಿಬಂದಿಗಳು ಹರಸಾಹಸ ಪಡಬೇಕಾಯಿತು. ಜಾನುವಾರಗಳ ಮೇವಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?