ಪ್ರತ್ಯೇಕ ಅಪಘಾತ: ಆರು ಮಂದಿ ಸಾವು


Team Udayavani, May 8, 2017, 11:54 AM IST

Accident-Symbolic-600.jpg

ಹನೂರು/ ಹೊಸಕೋಟೆ: ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ವಾಹನ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಸಾರಿಗೆ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖೀ ಢಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೌದಳ್ಳಿ – ರಾಮಾಪುರ ಮಾರ್ಗದ ಕೆಂಪಯ್ಯನಹಟ್ಟಿ ಸಮೀಪ ರವಿವಾರ ಸಂಭವಿಸಿದೆ. 

ಕುರಟ್ಟಿ ಹೊಸೂರು ಗ್ರಾಮದ ವೆಂಕಟರಾಮ್‌ಶೆಟ್ಟಿ ಅಲಿಯಾಸ್‌ ಕರಿಯಪ್ಪ, ಆತನ ಮೊಮ್ಮಗ ನಾಗೇಂದ್ರ (13) ಮತ್ತು ಶೆಟ್ಟಳ್ಳಿ ಗ್ರಾಮದ ಮಹದೇವಶೆಟ್ಟಿ ಮೃತರು. ಇವರು ಬೈಕ್‌ನಲ್ಲಿ ಕೌದಳ್ಳಿ ಕಡೆಯಿಂದ ರಾಮಾಪುರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದರು. ಈ ವೇಳೆ ನಂಜನಗೂಡು ಡಿಪೋಗೆ ಸೇರಿದ್ದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ ಹಾಗೂ ಬೈಕ್‌ ಮುಖಾಮುಖೀ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕರಿಯಪ್ಪ ಮತ್ತು ಆತನ ಮೊಮ್ಮಗ ನಾಗೇಂದ್ರ ಸ್ಥಳದಲ್ಲೇ ಅಸುನೀಗಿದ್ದಾರೆ. ಮಹದೇವಶೆಟ್ಟಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾ.ಜಿಲ್ಲೆ ಹೊಸಕೋಟೆ ಸಮೀಪದ ಹುಸ್ಕೂರು ಕೋಡಿ ಬಳಿಯ ಪೆಟ್ರೋಲ್‌ ಬಂಕ್‌ ಮುಂಭಾಗ ಬೈಕ್‌ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ತಾಲೂಕಿನ ಕಟ್ಟಿಗೇನಹಳ್ಳಿಯ ಮುಬೀನ್‌ ತಾಜ್‌ (45), ಅವರ ಮಗ ಎಸ್‌. ತಬ್ರೇಜ್‌ (23), ಅತ್ತಿಗೆ ನಸೀಬಾ (21) ಮೃತಪಟ್ಟಿದ್ದಾರೆ. 

ಒಂದೇ ಕುಟುಂಬದ ಮೂವರೂ ಬೈಕಿನಲ್ಲಿ ಬೆಂಗಳೂರಿನಿಂದ ರವಿವಾರ ಸಂಜೆ ಗ್ರಾಮಕ್ಕೆ ಹಿಂದಿರುಗುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಬೈಕ್‌ಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದ ರಭಸಕ್ಕೆ ಮುಂಭಾಗದಲ್ಲಿ ನಿಂತಿದ್ದ ಖಾಸಗಿ ಬಸ್‌ಗೆ ಅಪ್ಪಳಿಸಿತು. ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನೂ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ತಬ್ರೇಜ್‌ ಮತ್ತು ಮುಬೀನ್‌ ತಾಜ್‌ ಸಾವನ್ನಪ್ಪಿದ್ದು, ನಸೀಬಾ ಬೆಂಗಳೂರಿಗೆ ಕೊಂಡೊಯ್ಯುತ್ತಿದ್ದಾಗ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.