ಸರ್ಕಾರದ ವಿರುದ್ಧ 29 ಅಂಶಗಳ ಆರೋಪಪಟ್ಟಿ


Team Udayavani, May 12, 2017, 10:11 AM IST

11BNP-(7).jpg

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ತನ್ನ 4 ವರ್ಷದ ಸಾಧನೆಗಳನ್ನು ಹೇಳಿಕೊಳ್ಳುತ್ತಿದ್ದರೆ, ಇನ್ನೊಂದೆಡೆ ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್‌ ಸರ್ಕಾರದ 4 ವರ್ಷಗಳ ವೈಫ‌ಲ್ಯ ಕುರಿತು “ತೋರಿಸಿದ್ದು ಭರವಸೆಯ ಬೆಟ್ಟ- ಜನರಿಗೆದಕ್ಕಿದ್ದು ಬರೀ ಕಷ್ಟ’ ಕೈಪಿಡಿ ಪ್ರಕಟಿಸಿದೆ. ಆ ಮೂಲಕ ಸರ್ಕಾರದ ವಿರುದ್ಧ 29 ಅಂಶಗಳ ಆರೋಪಪಟ್ಟಿ ಬಿಡುಗಡೆ ಮಾಡಿದೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಹೊರತಂದಿರುವ ಸರ್ಕಾರದ ವಿರುದ್ಧದ ಆರೋಪಪಟ್ಟಿಯನ್ನೊಳಗೊಂಡ ಈ ಕೈಪಿಡಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಬಿಡುಗಡೆ ಮಾಡಿದರು.

ವಿವಿಧ ಇಲಾಖೆಗಳ ವೈಫ‌ಲ್ಯ, ಹೆಚ್ಚಿದ ಸರ್ಕಾರದ ಸಾಲ ಮೊತ್ತ, ಸರ್ಕಾರದ ಪೊಳ್ಳು ಭರವಸೆಗಳು, ಕುಡಿಯುವ ನೀರಿನ ಸಮಸ್ಯೆ, ವಿವಿಧ ಸಮುದಾಯಗಳ ನಿರ್ಲಕ್ಷ್ಯ ಹೀಗೆ 29 ಅಂಶಗಳ ಮೂಲಕ ಸರ್ಕಾರದ ವೈಫ‌ಲ್ಯವನ್ನು ಕೈಪಿಡಿಯಲ್ಲಿ ಹೇಳಲಾಗಿದೆ.

ಕೈಪಿಡಿ ಕುರಿತು ವಿವರಣೆ ನೀಡಿದ ಮಾಜಿ ಜಗದೀಶ್‌ ಶೆಟ್ಟರ್‌, ಸಿದ್ದರಾಮಯ್ಯ ಅವರ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಇದುವರೆಗೆ
91,269.78 ಕೋಟಿ ರೂ. ಸಾಲ ಮಾಡುವ ಮೂಲಕ ರಾಜ್ಯದ ಜನರಿಗೆ ಸಾಲಭಾಗ್ಯದ ಹೊರೆ ಹೊರಿಸಿದೆ ಎಂದು ಆರೋಪಿಸಿದರು.

ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಒಳ್ಳೆಯ ಆಡಳಿತನ ನಡೆಸಲು ವಿಫ‌ಲವಾಗಿರುವ ಸರ್ಕಾರ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನೂ ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಕರಂದ್ಲಾಜೆ, ಎನ್‌.ರವಿಕುಮಾರ್‌, ಸಂಸದ ಪಿ.ಸಿ.ಮೋಹನ್‌, ಶಾಸಕರಾದ ಆರ್‌. ಅಶೋಕ್‌. ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತಿತರರು ಪಾಲ್ಗೊಂಡಿದ್ದರು.

ಈಶ್ವರಪ್ಪ ಗೈರು
ಬಿಜೆಪಿ ಆರೋಪಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೆ.ಎಸ್‌.ಈಶ್ವರಪ್ಪ ಗೈರು ಹಾಜರಾಗಿದ್ದುದು ಎದ್ದುಕಂಡಿತು. ಈ ಮೂಲಕ
ಬಿಜೆಪಿಯಲ್ಲಿ ಇನ್ನೂ ಎಲ್ಲವೂ ಸರಿಹೋಗಿಲ್ಲ ಎಂಬ ಅಂಶ ಸಾಬೀತಾಯಿತು. ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ
ನೀಡಿದ ಜಗದೀಶ್‌ ಶೆಟ್ಟರ್‌, ಹಿಂದಿನ 3 ವರ್ಷವೂ ನಾನು ಇದೇ ರೀತಿ ಸರ್ಕಾರದ ವಿರುದ್ಧ ಆರೋಪಪಟ್ಟಿ ಬಿಡುಗಡೆ ಮಾಡಿದ್ದು, ಈಶ್ವರಪ್ಪ ಅವರನ್ನು ಕರೆದಿರಲಿಲ್ಲ ಮತ್ತು ಬಂದಿರಲಿಲ್ಲ. ಆಗ ಅದನ್ನು ಯಾರೂ ಪ್ರಶ್ನಿಸಿಲ್ಲ. ಹೀಗಿರುವಾಗ ಈಗೇಕೆ ಪ್ರಶ್ನಿಸುತ್ತೀರಿ ಎಂದು ಹೇಳಿದರು. 

ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿ, ಈಶ್ವರಪ್ಪ ಅವರು ಬಾರದಿರುವುದರಲ್ಲಿ ವಿಶೇಷವೇನೂ ಇಲ್ಲ. ಆದರೂ ಅವರು ಬಂದಿದ್ದರೆ ಒಂದು ಒಳ್ಳೆಯ ಸಂದೇಶ ಹೋಗುತ್ತಿತ್ತು ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.