ಭಟ್ಕಳದಲ್ಲಿ ಭೀಕರ ಅಪಘಾತ : ಮದುಮಗಳು ಸೇರಿ 7 ಮಂದಿ ದಾರುಣ ಸಾವು
Team Udayavani, May 25, 2017, 8:40 AM IST
ಭಟ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಅನಂತವಾಡಿ ಎಂಬಲ್ಲಿ ಗುರುವಾರ ನಸುಕಿನ 1.30 ರ ವೇಳೆಗೆ ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಮಿನಿ ಬಸ್ನಲ್ಲಿದ್ದ ಮದುಮಗಳು ಸೇರಿ 7 ಮಂದಿ ದಾರುಣವಾಗಿ ಸಾವನ್ನಪ್ಪಿ,25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ದುರಂತ ಸಂಭವಿಸಿದೆ.
ಶಿರಸಿಯ ದಾಸನಕೊಪ್ಪದಿಂದ ಧರ್ಮಸ್ಥಳಕ್ಕೆ ದಿಬ್ಬಣ ತೆರಳುತ್ತಿದ್ದ ಮಿನಿ ಬಸ್ಗೆ ಹೊನ್ನಾವರ ಕಡೆ ತೆರಳುತ್ತಿದ್ದ ಬಸ್ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಗಾಯಾಳುಗಳನ್ನು ಕುಂದಾಪುರ, ಮುರ್ಡೇಶ್ವರ ಮತ್ತು ಭಟ್ಕಳದ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಮೃತರು ದಾವಣಗೆರೆಯ ಮೂಲದ ವಧು ದಿವ್ಯಾ ಕುರ್ಡೇಕರ್, ಸುಬ್ರಹ್ಮಣ್ಯ,ಪಾಲಾಕ್ಷಿ (45),ದಿವ್ಯಾ , ಪೂಜಾ ಶೇಟ್ ,ನಾಗಪ್ಪ ಗಣಿಗಾರ್ ಎಂದು ತಿಳಿದು ಬಂದಿದೆ. ವರ ಹರೀಶ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹರೀಶ್ ಮತ್ತು ದಿವ್ಯಾ ಪ್ರೇಮಿಗಳಾಗಿದ್ದು ಎರಡೂ ಮನೆಯವರು ಒಟ್ಟಾಗಿ ಇಂದು ನಡೆಯಬೇಕಿದ್ದ ಮದುವೆಗಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ