ರಾಮನಗರದಿಂದಲೇ ಕಣಕ್ಕೆ: ಕುಮಾರಸ್ವಾಮಿ
Team Udayavani, May 29, 2017, 2:23 PM IST
ಮಂಡ್ಯ: “ಮುಂದಿನ ಚುನಾವಣೆಯಲ್ಲಿ ನಾನು ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ರಾಮನಗರದಿಂದಲೇ ನನ್ನ ಸ್ಪರ್ಧೆ ಖಚಿತ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ರಾಮನಗರದಲ್ಲಿ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿಯುವುದಿಲ್ಲ. ಉತ್ತರ ಕರ್ನಾಟಕದಿಂದಲೂ ಸ್ಪರ್ಧೆ
ಮಾಡುವಂತೆ ಒತ್ತಡವಿದೆ. ಈ ವಿಷಯವಾಗಿ ಸಮಯ ಬಂದಾಗ ಸೂಕ್ತ ನಿರ್ಧಾರ ಪ್ರಕಟಿಸುತ್ತೇನೆ ಎಂದು
ಸುದ್ದಿಗಾರರಿಗೆ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಮ್ಮ ಪಕ್ಷದಲ್ಲಿ ಅಭ್ಯರ್ಥಿಯಾಗಲು ಎಲ್ಲಾ ಕಡೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಎಲ್ಲರಿಗೂ ಟಿಕೆಟ್ ಕೊಡಲಾಗುವುದಿಲ್ಲ. ಆದರೆ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಭಿನ್ನಾಭಿಪ್ರಾಯಗಳನ್ನು ದೂರಸರಿಸಿ ಸಮಾಧಾನಪಡಿಸುವ ಕಾರ್ಯದಲ್ಲಿ ತೊಡಗಿದ್ದೇನೆ. ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲವಿದೆಯಷ್ಟೇ ಬಂಡಾಯಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ. ಪಕ್ಷದೊಳಗೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅವೆಲ್ಲವೂ ಬಗೆಹರಿಸಲಾಗದಷ್ಟು ಕ್ಲಿಷ್ಟಕರವೇನಲ್ಲ. ಸದ್ಯದಲ್ಲೇ ಅದೆಲ್ಲವನ್ನೂ ತೀರ್ಮಾನ ಮಾಡಲಾಗುವುದು. ಜಿ.ಟಿ.ದೇವೇಗೌಡರು ಪಕ್ಷದಲ್ಲಿ ಸರಿಯಾಗೇ ಇದ್ದಾರೆ. ಮುಂದೆ ಅವರು ಸರಿಹೋಗುತ್ತಾರೆ ಎಂದು ಚುಟುಕಾಗಿ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ