ಸದನಕ್ಕೆ ಚಕ್ಕರ್: ಕಡ್ಡಾಯ ಹಾಜರಾತಿಗೆ ಸೂಚನೆ
Team Udayavani, Jun 12, 2017, 2:40 PM IST
ಬೆಂಗಳೂರು: ಕಳೆದ ವಾರವಿಡೀ ಶಾಸಕರು ವಿಧಾನಸಭೆ ಕಲಾಪಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಇರಸುಮುರಸಿಗೆ ಒಳಗಾಗಿದ್ದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಈ ವಾರವಾದರೂ ತನ್ನ ಸದಸ್ಯರಿಗೆ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗಳಲ್ಲೂ ಸದಸ್ಯರ ಗೈರು ಹಾಜರಿ ಚರ್ಚೆಯಾಗಿ ಕಲಾಪದಲ್ಲಿ ಎಲ್ಲಾ ಸದಸ್ಯರು ಪಾಲ್ಗೊಳ್ಳಬೇಕು ಎಂದು ಸೂಚನೆ ಹೊರಡಿಸಲಾಗಿದೆ.
ಕಳೆದ ಸೋಮವಾರ ಆರಂಭವಾದ ಅಧಿವೇಶನದಲ್ಲಿ ಮೊದಲ ದಿನವೇ ಕಾಣಿಸಿಕೊಂಡ ಶಾಸಕರ ಗೈರು ಹಾಜರಿ ವಾರಾಂತ್ಯದವರೆಗೂ ಮುಂದುವರಿದಿತ್ತು. ಶಾಸಕರ ಹಾಜರಾತಿ ಪುಸ್ತಕದಲ್ಲಿ ಪ್ರತಿನಿತ್ಯ ಸರಾಸರಿ 119ರಿಂದ 171 ಶಾಸಕರು ಸಹಿ ಹಾಕಿದ್ದರಾದರೂ ಕಲಾಪದಲ್ಲಿ ಅದರ ಅರ್ಧದಷ್ಟು ಸದಸ್ಯರೂ ಕಾಣಿಸಿಕೊಳ್ಳುತ್ತಿರಲಿಲ್ಲ. ಈ ಮಧ್ಯೆ, ಕಲಾಪದಲ್ಲಿ ಸಚಿವರು ಪಾಲ್ಗೊಳ್ಳದೇ ಇರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಇಲಾಖಾ ಅನುದಾನಗಳ nಬೇಡಿಕೆ ಮೇಲೆ ಚರ್ಚೆ ನಡೆಯುತ್ತಿರುವಾಗ ಸದನದಲ್ಲಿ ಒಬ್ಬಿಬ್ಬರು ಸಚಿವರು ಮಾತ್ರ ಇರುತ್ತಾರೆ. ಕಳೆದ ಗುರುವಾರ ಸಚಿವರು ಇಲ್ಲ ಎಂಬ ಕಾರಣಕ್ಕೇ ಕಲಾಪ ಮುಂದೂಡಿದ ಪ್ರಸಂಗವೂ ನಡೆದಿದೆ. ಹೀಗಾಗಿ ಸಚಿವರ ಹಾಜರಿ ಬಗ್ಗೆಯೂ ಗಮನಹರಿಸುವಂತೆ ಸರ್ಕಾರದ ಮುಖ್ಯ ಸಚೇತಕರಿಗೆ ಸ್ಪೀಕರ್ ಸೂಚನೆ ನೀಡಿದ್ದಾರೆ. ಅದು ಎಷ್ಟರ ಮಟ್ಟಿಗೆ ಪಾಲನೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ