ಜಾತಿ ಗಣತಿ ವರದಿ ಬಿಡುಗಡೆಗೊಳಿಸಿದ್ರೆ ಕಾಂಗ್ರೆಸ್ ಸರ್ವನಾಶ
Team Udayavani, Jun 12, 2017, 2:46 PM IST
ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ನ ಸ್ಯಾಂಪಲ್ ಎಂಬಂತೆ ಕರ್ನಾಟಕದಲ್ಲಿ ಉಳಿದಿದೆ. ಜಾತಿ ಗಣತಿ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಿದರೆ ಬದುಕುವ ಸಾಧ್ಯತೆ ಇದೆ. ಚುನಾವಣೆ ಸಂದರ್ಭದಲ್ಲಿ ಗಣತಿ ವರದಿ ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ವನಾಶ ಖಚಿತ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಕಾಂಗ್ರೆಸ್ನಲ್ಲಿ ಬೆಂಕಿ ಹೊತ್ತಿ ಉರಿಯಲಿದೆ. ಹೀಗಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ.
ಕಾಂಗ್ರೆಸ್ನಲ್ಲಿರುವ ಆಂತರಿಕ ಗೊಂದಲ ಹಾಗೂ ಗುಂಪುಗಾರಿಕೆ ಪರಿಣಾಮ ವರದಿ ಬಿಡುಗಡೆ ವಿಳಂಬವಾಗುತ್ತಿದೆ ಎಂದು ದೂರಿದರು.
ಶಾ ಸೂಚನೆಯಂತೆ ಬ್ರಿಗೇಡ್ ಚಟುವಟಿಕೆಯಲ್ಲಿ ಪಾಲ್ಗೊಂಡಿಲ್ಲ: ಬಿಜೆಪಿ
ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದೇನೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ