ಕೊನೆಗೂ ಲಿಷಾಗೆ ಸಿಗಲಿದೆ ಸರಕಾರಿ ಉದ್ಯೋಗ
Team Udayavani, Jun 23, 2017, 12:55 AM IST
ಬೆಂಗಳೂರು: ಮಲ್ಲೇಶ್ವದರ ರಾಜ್ಯ ಬಿಜೆಪಿ ಕಚೇರಿ ಬಳಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಅಂಗವಿಕಲೆಯಾಗಿದ್ದ ಲಿಷಾಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಲಿಷಾ ಪಿಯುಸಿ ಓದುತ್ತಿದ್ದಾಗ ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದು, ಒಂದು ಕಾಲು ಮುರಿದುಹೋಗಿತ್ತು. ಚಿಕಿತ್ಸೆಗಾಗಿ ಲಕ್ಷಾಂತರ ರೂ. ವೆಚ್ಚ ಮಾಡಿದ್ದರೂ ಆಕೆಯ ಕಾಲು ಇನ್ನೂ ಪೂರ್ಣ ಸ್ವಾಧೀನಕ್ಕೆ ಬಂದಿಲ್ಲ. ಇದೀಗ ಪದವೀಧರೆಯಾಗಿರುವ ಆಕೆಗೆ ಅನುಕಂಪದ ಆಧಾರದಲ್ಲಿ ಗ್ರೂಪ್ ಸಿ ಹುದ್ದೆ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಅದೇ ರೀತಿ ಕಳೆದ ಫೆಬ್ರವರಿಯಲ್ಲಿ ಅಪಘಾತದಲ್ಲಿ ಮೃತಪಟ್ಟ ಲೋಕಾಯುಕ್ತ ಎಸ್ಪಿ ಆಗಿದ್ದ ಎಸ್. ರವಿಕುಮಾರ್ ಅವರ ಪತ್ನಿ ಐ.ಎಸ್. ಅನಿತಾ ಅವರಿಗೂ ಅನುಕಂಪದ ಆಧಾರದ ಮೇಲೆ ಸರಕಾರದಲ್ಲಿ ಸಿ ಗ್ರೂಪ್ ಹುದ್ದೆ ನೀಡಲು ತೀರ್ಮಾನಿಸಲಾಗಿದೆ. ಎಂ.ಟೆಕ್ ಪದವೀಧರೆಯಾಗಿರುವ ಅನಿತಾ ಕುಟುಂಬ ಈಗಲೂ ಗುಡಿಸಲಿನಲ್ಲಿ ವಾಸವಾಗಿದೆ ಎಂದು ಸಚಿವ ಜಯಚಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ