ನಂಜುಂಡಿ ಬಿಜೆಪಿಗೆ
Team Udayavani, Jun 23, 2017, 11:39 AM IST
ಬೆಂಗಳೂರು: ಕಾಂಗ್ರೆಸ್ನಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ವಿಶ್ವಕರ್ಮ ಸಮುದಾಯದ ನಾಯಕ ಕೆ.ಪಿ. ನಂಜುಂಡಿ ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ತೊರೆದಿರುವ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು, ಪಕ್ಷ ಸೇರಿಕೊಳ್ಳುವಂತೆ ಆಹ್ವಾನ ನೀಡಿದರು. ಇದಕ್ಕೆ ಕೆ.ಪಿ. ನಂಜುಂಡಿ ಅವರು ಒಪ್ಪಿಗೆ ನೀಡಿದ್ದಾರೆ. ಯಡಿಯೂರಪ್ಪ ಅವರ ಭೇಟಿ ಅನಂತರ ಪತ್ರಕರ್ತರೊಂದಿಗೆ ಮಾತನಾಡಿದ ನಂಜುಂಡಿ, ನಾನು ಬಿಜೆಪಿ ಸೇರಿದ್ದೇನೆ. ಶೀಘ್ರವೇ ಸಮಾರಂಭ ಏರ್ಪಡಿಸಿ ಅಧಿಕೃತವಾಗಿ ಬಿಜೆಪಿ ಸೇರುತ್ತೇನೆ ಎಂದು ಹೇಳಿದರು.