ಕೆಲ ರೈತರಿಗೆ ಶಾಕ್‌;ರಾಗ ಬದಲಿಸಿದ ಸರ್ಕಾರ:ಸಾಲ ಮನ್ನಾಕ್ಕೆ14 ಷರತ್ತು!


Team Udayavani, Jun 24, 2017, 4:27 PM IST

7.jpg

ಬೆಂಗಳೂರು : ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಅಧಿಕೃತ ಆದೇಶವನ್ನು  ಸಿಎಂ ಸಿದ್ಧರಾಮಯ್ಯ 3 ದಿನಗಳ ಬಳಿಕ ಶನಿವಾರ ಹೊರಡಿಸಿದ್ದು ಇದೇ ವೇಳೆ 14 ಷರತ್ತುಗಳನ್ನು ವಿಧಿಸಿ ಕೆಲ ರೈತರಿಗೆ ಶಾಕ್‌ ನೀಡಿದ್ದಾರೆ.

ಜೂನ್‌ 21 ರಂದು ವಿಧಾನಸಭೆಯಲ್ಲಿ ಸಾಲಮನ್ನಾ ಘೋಷಿಸುವ ವೇಳೆ ಯಾವುದೇ ಷರತ್ತು ವಿಧಿಸದೆ ರೈತರಲ್ಲಿ ಖುಷಿ ಮೂಡಿಸಿದ್ದ ಸಿದ್ದರಾಮಯ್ಯ ಇದೀಗ ಷರತ್ತುಗಳನ್ನು ವಿಧಿಸುವ ಮೂಲಕ ಕೆಲ ರೈತರು ಭ್ರಮನಿರಸನಗೊಳ್ಳುವಂತೆ ಮಾಡಿದ್ದಾರೆ. 

ಷರತ್ತುಗಳು ಇಲ್ಲಿವೆ

ರೈತರಿಗೆ ಷರತ್ತುಗಳು
1. ಸಂಪೂರ್ಣ ಸಾಲ ಚುಕ್ತಾವಾದರೂ ನಿಮ್ಮ ಸಾಲದ ಮರುಪಾವತಿ ಅವಧಿ ಮುಗಿಯು ವವರೆಗೆ ಹೊಸ ಸಾಲ ಅಸಾಧ್ಯ(ಅಂದರೆ ಕಳೆದ ಮಾರ್ಚ್‌ ಅಥವಾ ಎಪ್ರಿಲ್‌ನಲ್ಲಿ ಸಾಲ ಪಡೆದಿದ್ದು, ಅದು ಮನ್ನಾ ಆದರೂ, ಈಗಲೇ ಹೊಸ ಸಾಲ ಸಿಕ್ಕಲ್ಲ. ಏನಿದ್ದರೂ ಮುಂದಿನ ಮಾರ್ಚ್‌ ಅಥವಾ ಎಪ್ರಿಲ್‌ಗೆ ಸಿಗೋದು.)

2. ರೂ. 50 ಸಾವಿರಕ್ಕಿಂತ ಹೆಚ್ಚು ಸಾಲ ಪಡೆದವರು,ಮರು ಪಾವತಿಯ ಅವಧಿಯೊಳಗೆ 50 ಸಾವಿರ ಕ್ಕಿಂತ ಹೆಚ್ಚು ಅಸಲು ಪಾವತಿಸಿರಬೇಕು.(ಅಂದರೆ 2017ರ ಜೂನ್‌ 20ಕ್ಕೆ ಹೊರಬಾಕಿ ಇರುವ ಸಾಲ ಚಾಲ್ತಿಯಲ್ಲಿದ್ದರೆ ಸಾಲ ಪಡೆದ ರೈತರು 2017ರ ಜೂ. 20 ಅಥವಾ ಸಾಲ ಮರುಪಾವತಿಗೆ ಇರುವ ಅಂತಿಮ ಗಡುವಿನೊಳಗೆ ಈ ಮೊತ್ತ ಪಾವತಿಸಿರಬೇಕು)

3. 20-06-2017ಕ್ಕೆ ಹೊರಬಾಕಿ ಇರುವ ಸಾಲ ಸುಸ್ತಿಯಾಗಿದ್ದಲ್ಲಿ, ಈ ಅವಧಿಗೆ ಬಾಕಿ ಇರುವ ಅಸಲು ಮತ್ತು ಬಡ್ಡಿ ಸೇರಿ ರೂ. 50 ಸಾವಿರವನ್ನು ಈ ವರ್ಷಾಂತ್ಯದೊಳಗೆ ಪಾವತಿಸಬೇಕು. 

4. ಯಾವುದೇ ಸದಸ್ಯರು ಒಂದಕ್ಕಿಂತ ಹೆಚ್ಚು ಸಹಕಾರ ಸಂಸ್ಥೆಗಳಲ್ಲಿ ಸಾಲ ಪಡೆದಿದ್ದರೆ ಒಂದು ಸಂಸ್ಥೆಯ ಸಾಲಕ್ಕೆ ಮಾತ್ರ ಈ ಯೋಜನೆ ಅನ್ವಯ.

5. ಒಂದು ವೇಳೆ ಸಾಲ ಪಡೆದ ರೈತರು ಮೃತರಾಗಿದ್ದಲ್ಲಿ ಅವರ ವಾರಸುದಾರರು ಸಾಲ ಮರುಪಾವತಿಸಿದರೆ ಅವರಿಗೂ ಸಾಲ ಮನ್ನಾ ಸೌಲಭ್ಯ ಅನ್ವಯ.

6. ಸಾಲ ಮನ್ನಾಕ್ಕೆ ಅರ್ಹವಿರುವ 50 ಸಾವಿರ ರೂ. ಅಸಲು ಮತ್ತು ಬಡ್ಡಿಯೊಂದಿಗೆ ಜಾರಿಯಲ್ಲಿರುವ ಬಡ್ಡಿ ಸಹಾಯಧನ ಯೋಜನೆಯ ಕ್ಲೈಮ್‌ ಬಿಲ್‌ಗ‌ಳನ್ನು ಸಾಲ ಮರುಪಾವತಿಸಲು ನಿಗದಿಪಡಿಸಿದ ತಿಂಗಳಿನ 30 ದಿನಗಳೊಳಗೆ ಸಲ್ಲಿಸಬೇಕು. 

ಸಹಕಾರ ಸಂಘಗಳಿಗೆ ಷರತ್ತುಗಳು
1. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳಿಗೆ ಸಂಯೋಜನೆಯಾಗಿರುವ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್‌ಗಳು, ಡಿಸಿಸಿ ಬ್ಯಾಂಕ್‌ಗಳು ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದ ಕ್ಲೈಮ್‌ ಬಿಲ್‌ಗ‌ಳನ್ನು ತಯಾರಿಸಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಮತ್ತು ಕರ್ನಾಟಕ ರಾಜ್ಯ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

2. ವಾಣಿಜ್ಯ ಬ್ಯಾಂಕ್‌ಗಳಿಗೆ ಸಂಯೋಜನೆಯಾಗಿರುವ ಅಥವಾ ಸ್ವತಂತ್ರ ಕೃಷಿ ಪತ್ತಿನ ಸಹಕಾರ ಸಂಘಗಳ ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದ ಕ್ಲೈಮ್‌ ಬಿಲ್‌ಗ‌ಳನ್ನು ತಯಾರಿಸಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

3.ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್‌) ಬ್ಯಾಂಕ್‌ಗಳು ಕ್ಲೆ „ಮ್‌ ಬಿಲ್‌ಗ‌ಳನ್ನು ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಕಸ್ಕಾರ್ಡ್‌) ಬ್ಯಾಂಕ್‌ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

4. ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಸಹಕಾರ ಸಂಘಗಳ ನಿಬಂಧಕರು ಆಡಳಿತಾತ್ಮಕ ಮಾರ್ಗಸೂಚಿಗಳನ್ನು ಹೊರಡಿಸಿ ಯೋಜನೆ ಪರಿಣಾಕಾರಿಯಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.