ರೈತರ ಸಾಲ ಮನ್ನಾಕ್ಕೆ ಸಿದ್ದು ಷರತ್ತು


Team Udayavani, Jun 25, 2017, 3:45 AM IST

CM-24-2017.jpg

ಬೆಂಗಳೂರು: ರೈತರ ಸಾಲ ಮನ್ನಾ ಘೋಷಣೆ ಮಾಡಿ ಅಧಿಕೃತ ಆದೇಶವನ್ನೂ ಹೊರಡಿಸಿರುವ ಕರ್ನಾಟಕ ಸರಕಾರ, ಸಾಲ ಮನ್ನಾದ ಪ್ರಯೋಜನ ಸಿಗಬೇಕಾದರೆ ಕೆಲವು ಷರತ್ತುಗಳಿಗೆ ಬದ್ಧವಾಗಿರಬೇಕು ಎಂದು ಖಡಕ್ಕಾಗಿ ಸೂಚನೆ ನೀಡಿದೆ. 

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಲ್ಯಾಂಪ್ಸ್‌ , ಡಿಸಿಸಿ ಬ್ಯಾಂಕ್‌ಗಳು ಮತ್ತು ಪಿಕಾರ್ಡ್‌ ಬ್ಯಾಂಕ್‌ಗಳು ವಿತರಿಸಿದ ಅಲ್ಪಾವಧಿ ಬೆಳೆ ಸಾಲದ ಪೈಕಿ 2017ರ ಜೂನ್‌ 20ರ ವರೆಗೆ ಹೊಂದಿರುವ ಹೊರಬಾಕಿ ಸಾಲಕ್ಕೆ ಮಾತ್ರ ಸಾಲ ಮನ್ನಾ ಅನ್ವಯವಾಗುತ್ತದೆ. ಆದರೆ, ಕೃಷಿಯೇತರ ಸಾಲ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ, ಪಶುಭಾಗ್ಯ ಯೋಜನೆಯಡಿ ಪಡೆದ ಸಾಲಗಳಿಗೆ ಇದು ಅನ್ವಯವಾಗುವುದಿಲ್ಲ. ಹೊರಬಾಕಿ ಇರುವ ಅಲ್ಪಾವಧಿ ಸಾಲದ ಪೈಕಿ 50 ಸಾವಿರ ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಆಗುತ್ತದೆ.

ರೈತರಿಗೆ ಷರತ್ತುಗಳು
1. ಸಂಪೂರ್ಣ ಸಾಲ ಚುಕ್ತಾವಾದರೂ 
ನಿಮ್ಮ ಸಾಲದ ಮರುಪಾವತಿ ಅವಧಿ ಮುಗಿಯು ವವರೆಗೆ ಹೊಸ ಸಾಲ ಅಸಾಧ್ಯ
(ಅಂದರೆ ಕಳೆದ ಮಾರ್ಚ್‌ ಅಥವಾ ಎಪ್ರಿಲ್‌ನಲ್ಲಿ ಸಾಲ ಪಡೆದಿದ್ದು, ಅದು ಮನ್ನಾ ಆದರೂ, ಈಗಲೇ ಹೊಸ ಸಾಲ ಸಿಕ್ಕಲ್ಲ. ಏನಿದ್ದರೂ ಮುಂದಿನ ಮಾರ್ಚ್‌ ಅಥವಾ ಎಪ್ರಿಲ್‌ಗೆ ಸಿಗೋದು.)

2. ರೂ. 50 ಸಾವಿರಕ್ಕಿಂತ ಹೆಚ್ಚು ಸಾಲ ಪಡೆದವರು,ಮರು ಪಾವತಿಯ ಅವಧಿಯೊಳಗೆ 50 ಸಾವಿರ ಕ್ಕಿಂತ ಹೆಚ್ಚು ಅಸಲು ಪಾವತಿಸಿರಬೇಕು.(ಅಂದರೆ 2017ರ ಜೂನ್‌ 20ಕ್ಕೆ ಹೊರಬಾಕಿ ಇರುವ ಸಾಲ ಚಾಲ್ತಿಯಲ್ಲಿದ್ದರೆ ಸಾಲ ಪಡೆದ ರೈತರು 2017ರ ಜೂ. 20 ಅಥವಾ ಸಾಲ ಮರುಪಾವತಿಗೆ ಇರುವ ಅಂತಿಮ ಗಡುವಿನೊಳಗೆ ಈ ಮೊತ್ತ ಪಾವತಿಸಿರಬೇಕು)

3. 20-06-2017ಕ್ಕೆ ಹೊರಬಾಕಿ ಇರುವ ಸಾಲ ಸುಸ್ತಿಯಾಗಿದ್ದಲ್ಲಿ, ಈ ಅವಧಿಗೆ ಬಾಕಿ ಇರುವ ಅಸಲು ಮತ್ತು ಬಡ್ಡಿ ಸೇರಿ ರೂ. 50 ಸಾವಿರವನ್ನು ಈ ವರ್ಷಾಂತ್ಯದೊಳಗೆ ಪಾವತಿಸಬೇಕು. 

4. ಯಾವುದೇ ಸದಸ್ಯರು ಒಂದಕ್ಕಿಂತ ಹೆಚ್ಚು ಸಹಕಾರ ಸಂಸ್ಥೆಗಳಲ್ಲಿ ಸಾಲ ಪಡೆದಿದ್ದರೆ ಒಂದು ಸಂಸ್ಥೆಯ ಸಾಲಕ್ಕೆ ಮಾತ್ರ ಈ ಯೋಜನೆ ಅನ್ವಯ.

5. ಒಂದು ವೇಳೆ ಸಾಲ ಪಡೆದ ರೈತರು ಮೃತರಾಗಿದ್ದಲ್ಲಿ ಅವರ ವಾರಸುದಾರರು ಸಾಲ ಮರುಪಾವತಿಸಿದರೆ ಅವರಿಗೂ ಸಾಲ ಮನ್ನಾ ಸೌಲಭ್ಯ ಅನ್ವಯ.

6. ಸಾಲ ಮನ್ನಾಕ್ಕೆ ಅರ್ಹವಿರುವ 50 ಸಾವಿರ ರೂ. ಅಸಲು ಮತ್ತು ಬಡ್ಡಿಯೊಂದಿಗೆ ಜಾರಿಯಲ್ಲಿರುವ ಬಡ್ಡಿ ಸಹಾಯಧನ ಯೋಜನೆಯ ಕ್ಲೈಮ್‌ ಬಿಲ್‌ಗ‌ಳನ್ನು ಸಾಲ ಮರುಪಾವತಿಸಲು ನಿಗದಿಪಡಿಸಿದ ತಿಂಗಳಿನ 30 ದಿನಗಳೊಳಗೆ ಸಲ್ಲಿಸಬೇಕು. 

ಸಹಕಾರ ಸಂಘಗಳಿಗೆ ಷರತ್ತುಗಳು
1. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳಿಗೆ ಸಂಯೋಜನೆಯಾಗಿರುವ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್‌ಗಳು, ಡಿಸಿಸಿ ಬ್ಯಾಂಕ್‌ಗಳು ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದ ಕ್ಲೈಮ್‌ ಬಿಲ್‌ಗ‌ಳನ್ನು ತಯಾರಿಸಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಮತ್ತು ಕರ್ನಾಟಕ ರಾಜ್ಯ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

2. ವಾಣಿಜ್ಯ ಬ್ಯಾಂಕ್‌ಗಳಿಗೆ ಸಂಯೋಜನೆಯಾಗಿರುವ ಅಥವಾ ಸ್ವತಂತ್ರ ಕೃಷಿ ಪತ್ತಿನ ಸಹಕಾರ ಸಂಘಗಳ ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದ ಕ್ಲೈಮ್‌ ಬಿಲ್‌ಗ‌ಳನ್ನು ತಯಾರಿಸಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

3.ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್‌) ಬ್ಯಾಂಕ್‌ಗಳು ಕ್ಲೆ „ಮ್‌ ಬಿಲ್‌ಗ‌ಳನ್ನು ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಕಸ್ಕಾರ್ಡ್‌) ಬ್ಯಾಂಕ್‌ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸಬೇಕು.

4. ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಸಹಕಾರ ಸಂಘಗಳ ನಿಬಂಧಕರು ಆಡಳಿತಾತ್ಮಕ ಮಾರ್ಗಸೂಚಿಗಳನ್ನು ಹೊರಡಿಸಿ ಯೋಜನೆ ಪರಿಣಾಕಾರಿಯಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. 

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.