24 ಕೋಟಿ ಮೌಲ್ಯದ ಡ‹ಗ್ಸ್ ವಶ: ಕೊತ್ತನೂರಿನ ಗೋದಾಮಿನ ಮೇಲೂ ದಾಳಿ
Team Udayavani, Jun 25, 2017, 3:45 AM IST
ಬೆಂಗಳೂರು: ಮಲೇಷ್ಯಾಕ್ಕೆ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಏರ್ ಕಾರ್ಗೋ ಅಧಿಕಾರಿ ಗಳು ಪತ್ತೆಹಚ್ಚಿದ್ದು, 24 ಕೋಟಿ ರೂ. ಮೌಲ್ಯದ 475 ಕೆ.ಜಿ. ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜೂ. 23ರಂದು ವಿಮಾನ ನಿಲ್ದಾಣದ ಕಾರ್ಗೋ ಸಮುಚ್ಚಯದ ರಫ್ತು ಘಟಕದಲ್ಲಿ 81 ಅಮೋನಿಯಂ ಕ್ಲೋರೈಡ್ ಬ್ಯಾಗ್ಗಳ ಪೈಕಿ 2 ಬ್ಯಾಗ್ಗಳಲ್ಲಿ ಮಾದಕ ವಸ್ತುಗಳನ್ನಿಟ್ಟು ಮಲೇಷ್ಯಾಕ್ಕೆ ಕಳ್ಳ ಸಾಗಣೆ ಮಾಡಲು ಯತ್ನಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ರಫ್ತು ಘಟಕವನ್ನು ಪರಿಶೀಲನೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದ್ದು, 2.5 ಕೋಟಿ ರೂ. ಮೌಲ್ಯದ 50 ಕೆ.ಜಿ. ಮಾದಕ ವಸ್ತು ತುಂಬಿದ್ದ ಎರಡು ಚೀಲಗಳನ್ನು ವಶಕ್ಕೆ ಪಡೆಯಲಾಯಿತು.
ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಕಸ್ಟಮ್ಸ್ ಅಧಿಕಾರಿ ಗಳು ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿ ಡಿ. ಅನಿಲ್ಕುಮಾರ್ ತಿಳಿಸಿದ್ದಾರೆ.
ರಫ್ತು ಘಟಕದಲ್ಲಿ ಚೀಲದ ಮಾಲಕರ ಬಗ್ಗೆ ಮಾಹಿತಿ ಸಂಗ್ರಹಿಸಿ, ಮಲೇಷ್ಯಾಕ್ಕೆ ಅಕ್ರಮವಾಗಿ ರಫು ಮಾಡಲು ಮುಂದಾಗಿದ್ದ ಕೆಲವು ವ್ಯಕ್ತಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಕೊತ್ತನೂರಿ ನಲ್ಲಿನ ಗೋದಾಮಿನ ವಿಷಯ ಗೊತ್ತಾಗಿದೆ. ಈ ಮಾಹಿತಿ ಆಧರಿಸಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾ ಚರಣೆ ನಡೆಸಿ ಗೋದಾಮಿನ ಮೇಲೆ ದಾಳಿ ನಡೆಸಿದಾಗ 24 ಕೋ. ರೂ. ಮೌಲ್ಯದ 475 ಕೆ.ಜಿ. ಅಮೋನಿಯಂ ಕ್ಲೋರೈಡ್, ಎಪಿಡ್ರೈನ್ ಮಾದಕ ವಸ್ತು ಪತ್ತೆಯಾಗಿದೆ ಎಂದು ಹೇಳಿದರು.
ಎನ್ಸಿಬಿ ಕಾಯ್ದೆ 1985ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ಗುಪ್ತಚರ ವಿಭಾಗ ಮತ್ತು ವಿಶೇಷ ಗುಪ್ತಚರ ಮತ್ತು ಕಸ್ಟಮ್ ಏರ್ ಕಾರ್ಗೋ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ