ಮುಂಗಾರು ಕೈಕೊಟ್ಟರೆ ಮೋಡ ಬಿತ್ತನೆ
Team Udayavani, Jun 25, 2017, 3:45 AM IST
ಮೈಸೂರು: ಸತತವಾಗಿ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಈ ಬಾರಿಯೂ ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜೂನ್ ತಿಂಗಳ ಆರಂಭದಲ್ಲಿ ಸಾಮಾನ್ಯವಾಗಿ ಮುಂಗಾರು ಆರಂಭವಾಗುವುದು ವಾಡಿಕೆ. ಆದರೆ, ಈ ವರ್ಷ ಜೂನ್ ತಿಂಗಳ ಅಂತ್ಯ ಸಮೀಪಿಸಿದರೂ ಮುಂಗಾರು ಮಳೆ ಉತ್ತಮವಾಗಿ ಆಗಿಲ್ಲ. ಮುಂಬರುವ ದಿನಗಳಲ್ಲಿ ಮಳೆ ಬರುವ ನಿರೀಕ್ಷೆ ಇದೆ. ಒಂದು ವೇಳೆ ಮಳೆ ಬರಲಿಲ್ಲ ಎಂದರೆ ಮೋಡ ಬಿತ್ತನೆ ಮಾಡಿಸಲು ಸರಕಾರ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಟೆಂಡರ್ ಕರೆಯಲಾಗಿದೆ. ಶೀಘ್ರ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
ಇದೇ ವೇಳೆ, ಸಾಲ ಮನ್ನಾ ವಿಚಾರದಲ್ಲಿ ಯಾರಿಗೂ ತಾರ ತಮ್ಯ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾಲ ಮನ್ನಾ ಘೋಷಣೆ ಮಾಡಲಾದರೂ ಇನ್ನೂ ಅಧಿಕೃತ ಆದೇಶ ಬಿದ್ದಿಲ್ಲ. ಆದರೆ ಕರ್ನಾಟಕದಲ್ಲಿ ಮನ್ನಾ ಬಗ್ಗೆ ಘೋಷಣೆ ಮಾಡಿದ ಮಾರನೇ ದಿನವೇ ಅಧಿಕೃತ ಆದೇಶವನ್ನೂ ಹೊರಡಿಸಲಾಗಿದೆ. ಅವರು ಬಹು ಕಾಲದಿಂದ ಹಾಗೆಯೇ ಉಳಿದಿದ್ದ ಸಾಲ ಮನ್ನಾ ಮಾಡಿರಬಹುದು. ಆದರೆ ನಾವು 2017ರ ಜೂನ್ 20ರ ವರೆಗಿನ ಅಲ್ಪಾವಧಿ ಸಾಲ ಮನ್ನಾ ಮಾಡುವ ಮೂಲಕ ಎಲ್ಲರಿಗೆ ಉಪಯೋಗವಾಗುವಂತೆ ಮಾಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?