ಉನ್ನತೀಕರಿಸಿದ ಶಾಲೆಗಳಿನ್ನು ಸರ್ಕಾರಿ ಪ್ರೌಢಶಾಲೆಗಳು!


Team Udayavani, Jun 25, 2017, 3:45 AM IST

GOVT-SCHOOL-24.jpg

ಹಾವೇರಿ: ರಾಜ್ಯದಲ್ಲಿರುವ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪ್ರಸಕ್ತ ವರ್ಷದಿಂದ “ಸರ್ಕಾರಿ ಪ್ರೌಢಶಾಲೆ (ಆರ್‌.ಎಂ.ಎಸ್‌.ಎ.)’ ಎಂದು ನಾಮಕರಣ ಮಾಡಲಾಗಿದೆ.

ಶಿಕ್ಷಣ ಇಲಾಖೆ ಈ ಕುರಿತು ಜೂ.12ರಂದೇ ನಿರ್ಣಯ ಕೈಗೊಂಡಿದ್ದು, ಆದೇಶ ಈಗ ಶಾಲೆಗಳಿಗೆ ತಲುಪಿ, ಶಾಲೆಗಳ ಹೆಸರು ಬದಲಾವಣೆ ಕಾರ್ಯ ಶುರುವಾಗಿದೆ. ರಾಜ್ಯದಲ್ಲಿ 2014-15ರಿಂದ 2016-17ವರೆಗೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 462 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲಾಗಿತ್ತು. ಹೀಗೆ ಉನ್ನತೀಕರಿಸಿದ ಬಳಿಕ ಅವುಗಳಿಗೆ “ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು’ ಎಂದು ಹೆಸರಿಸಲಾಗಿತ್ತು. ಈಗ ಇಂತಹ ಶಾಲೆಗಳಲ್ಲಿ ಪ್ರೌಢಶಿಕ್ಷಣ ನೀಡುತ್ತಿರುವುದರಿಂದ ಅವುಗಳ ಹೆಸರನ್ನು ಬದಲಾಯಿಸಲು ಇಲಾಖೆ ನಿರ್ಧರಿಸಿದೆ.

ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳ ಹೆಸರನ್ನು ಇಲಾಖೆ ಬದಲಾಯಿಸಿ ಇಂತಹ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ “ಸರ್ಕಾರಿ ಪ್ರೌಢಶಾಲೆ (ಆರ್‌.ಎಂ.ಎಸ್‌.ಎ. ಅಂದರೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ)’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.

ಬದಲಾವಣೆ ಏಕೆ?:
ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿದ ಆರಂಭದ ವರ್ಷ ಅಂದರೆ 2014-15ರಲ್ಲಿ 8ನೇ ತರಗತಿ ಆರಂಭಿಸಲಾಗಿತ್ತು. ಮುಂದಿನ ವರ್ಷಗಳಲ್ಲಿ ಇಲ್ಲಿಯೇ 9 ಹಾಗೂ 10ನೇ ತರಗತಿಯನ್ನೂ ಮುಂದುವರಿಸಿರುವುದರಿಂದ ಉನ್ನತೀಕರಿಸಿದ ಶಾಲೆಗಳು ಈಗ ಪೂರ್ಣ ಪ್ರಮಾಣದ ಪ್ರೌಢಶಾಲೆಗಳಾಗಿ ಮಾರ್ಪಟ್ಟಿವೆ.

ಪ್ರೌಢ ಶಿಕ್ಷಣ ನೀಡುವ ಇಂತಹ ಶಾಲೆಗಳೂ “ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ’ ಎಂಬ ಹೆಸರಿನಿಂದಲೇ ಕರೆಸಿಕೊಳ್ಳುತ್ತಿದ್ದವು.  ಪ್ರೌಢ ಶಿಕ್ಷಣ ನೀಡುವ ಶಾಲೆಗಳನ್ನು ಪ್ರಾಥಮಿಕ ಶಾಲೆಗಳೆಂದು ಕರೆಯುವುದರಿಂದ ಆಗುವ ಆಭಾಸವನ್ನು ತಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದಿಂದ ಇಂತಹ ಶಾಲೆಗಳನ್ನು ಸರ್ಕಾರಿ ಪ್ರೌಢಶಾಲೆಗಳೆಂದು ಹೆಸರಿಸಲು ಮುಂದಾಗಿದೆ.

ಫಲಕ ಬದಲಾಯಿಸಲು ಸೂಚನೆ:
ಈಗಾಗಲೇ ಇರುವ “ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ’ ಫಲಕವನ್ನು ತೆಗೆಯಿಸಿ ಹೊಸದಾಗಿ “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಬರೆಸಲು ಇಲಾಖೆ ರಾಜ್ಯದ ಎಲ್ಲ ಶಾಲೆಗಳಿಗೆ ನಿರ್ದೇಶಿಸಿದೆ. ಶಾಲೆ ಹೆಸರಿನ ನಾಮಫಲಕದ ಜತೆಗೆ ಶಾಲೆಯ ಮೊಹರು ಹಾಗೂ ಆಡಳಿತಾತ್ಮಕ ವಿಷಯದಲ್ಲಿ ಈ ಶಾಲೆಗಳನ್ನು “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಬದಲಾಯಿಸಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.
ಒಟ್ಟಾರೆ ರಾಜ್ಯದಲ್ಲಿರುವ 462 ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳು ಇನ್ನು ಮುಂದೆ “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಕರೆಸಿಕೊಳ್ಳಲಿವೆ.

ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳ ಹೆಸರನ್ನು “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಬದಲಾಯಿಸಿಕೊಳ್ಳಲು ಇಲಾಖೆಯಿಂದ ಆದೇಶ ಬಂದಿದ್ದು, ಎಲ್ಲ ಶಾಲೆಗಳಿಗೆ ಫಲಕ, ಮೊಹರು ಬದಲಾವಣೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಜತೆಗೆ ಆಡಳಿತಾತ್ಮಕ ವಿಷಯದಲ್ಲಿ “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ನಮೂದಿಸಲು ಸೂಚಿಸಲಾಗಿದೆ.
– ಶಿವನಗೌಡ ಪಾಟೀಲ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.

– ಎಚ್‌.ಕೆ. ನಟರಾಜ
 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.