ರಾಜ್ಯದ 4 ನಗರಗಳಿಗೆ “ಕ್ರಿಟಿಕಲಿ ಪೊಲ್ಯೂಟೆಡ್‌’ ಪಟ್ಟ!


Team Udayavani, Jun 25, 2017, 3:45 AM IST

Ban25061706Medn.jpg

ರಾಯಚೂರು: ಕೈಗಾರಿಕೆಗಳ ಹೇರಳ ಬೆಳವಣಿಗೆಯಿಂದ ರಾಜ್ಯದ ನಾಲ್ಕು ನಗರಗಳನ್ನು “ಕ್ರಿಟಿಕಲಿ ಪೊಲ್ಯೂಟೆಡ್‌’
ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಗುರುತಿಸಿದ್ದು, ಪರಿಸರಕ್ಕೆ ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದರ
ಕುರಿತಾಗಿ ಅಧ್ಯಯನ ನಡೆಸುತ್ತಿದೆ.

ಕೆಲ ವರ್ಷಗಳ ಹಿಂದೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನದಲ್ಲಿ ರಾಜ್ಯದ ಪೀಣ್ಯ,
ಮಂಗಳೂರು, ಭದ್ರಾವತಿ ಹಾಗೂ ರಾಯಚೂರಿಗೆ ಮಾಲಿನ್ಯದಲ್ಲಿ ಹೆಚ್ಚಿನ ರೇಟಿಂಗ್‌ ದೊರೆತಿತ್ತು. ಇಲ್ಲೆಲ್ಲ
ಕೈಗಾರಿಕೆಗಳು ಶರವೇಗದಲ್ಲಿ ಬೆಳೆಯುತ್ತಿದ್ದು, ಪರಿಸರ ಹಾನಿಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮಂಡಳಿ ಏನೆಲ್ಲ
ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ವಿವರ ನೀಡುವುದರ ಜತೆಗೆ, ಸದ್ಯದ ಪರಿಸ್ಥಿತಿ ಬಗ್ಗೆ ಸಮೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಸಮೀಕ್ಷೆಗೆ 8 ಸ್ಥಳಗಳ ಆಯ್ಕೆ: ರಾಯಚೂರು ಜಿಲ್ಲೆಯಲ್ಲೂ ಇತ್ತೀಚೆಗೆ ಸಾಕಷ್ಟು ಪ್ರಮಾಣದ ಕಾರ್ಖಾನೆಗಳು ತಲೆ ಎತ್ತಿವೆ. ಈತ್ತೀಚೆಗೆ ವೈಟಿಪಿಎಸ್‌ ಲೋಕಾರ್ಪಣೆಗೊಂಡಿದೆ. ರೈಸ್‌ ಮಿಲ್‌ಗ‌ಳು, ರಸಗೊಬ್ಬರ, ಕೆಮಿಕಲ್‌ ಕಾರ್ಖಾನೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಜಿಲ್ಲೆಯ ವಾತಾವರಣ ಹದಗೆಡುತ್ತಿದೆ. ಅದರ ಜತೆಗೆ ಬಿಸಿಲಿನ ಪ್ರಮಾಣವೂ ಹೆಚ್ಚಾಗಿದೆ. ಇನ್ನುಳಿದ ನಗರಗಳಲ್ಲೂ ಇದೇ ಪರಿಸ್ಥಿತಿ ಇದೆ. ಬೆಂಗಳೂರು ಮೂಲದ ಎನ್ವಿರಾನ್‌ಮೆಂಟ್‌ ಹೆಲ್ತ್‌ ಆ್ಯಂಡ್‌ ಸೇμr ರಿಸರ್ಚ್‌ ಡೆವಲಪ್‌ಮೆಂಟ್‌ ಸೆಂಟರ್‌ ಎಂಬ ಸಂಸ್ಥೆ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಎಂಟು ಸ್ಥಳಗಳನ್ನು ಗುರುತಿಸಿದ್ದು, ಪ್ರತಿ ಕೇಂದ್ರದಲ್ಲಿ ಮೂರು ದಿನ ಸಮೀಕ್ಷೆ ನಡೆಸಿ ವರದಿತಯಾರಿಸಲಾಗುತ್ತಿದೆ. ಪ್ರತಿ ಐದರಿಂದ ಆರು ಕಿ.ಮೀ. ಅಂತರದಲ್ಲಿ ಯಂತ್ರ ಅಳವಡಿಸಲಾಗುತ್ತಿದೆ. ಕಣ್ಣಿಗೆ ಕಾಣುವ ಧೂಳು, ಕಾಣದಂಥ ಸೂಕ್ಷ್ಮ ವಸ್ತುಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಸಂಸ್ಥೆಯ ಪ್ರತಿನಿ ಧಿಗಳು ವಿವರಿಸಿದರು. ಅಂತಿಮ ವರದಿಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಿದ ನಂತರ ಮುಂದಿನ ನಿರ್ದೇಶನಗಳನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ನಿಯಂತ್ರಣ ಮಂಡಳಿ ಅ ಧಿಕಾರಿಗಳು ತಿಳಿಸಿದ್ದಾರೆ.

ಹಸಿರೀಕರಣಕ್ಕಿಲ್ಲ ಒತ್ತು
ಕೈಗಾರಿಕೆಗಳು ಹೇರಳವಾಗಿ ಬೆಳೆಯುತ್ತಿವೆಯಾದರೂ ಜಿಲ್ಲೆಯಲ್ಲಿ ಹಸಿರೀಕರಣಕ್ಕೆ ಮಾತ್ರ ಒತ್ತು ನೀಡುತ್ತಿಲ್ಲ. ಸಾರ್ವಜನಿಕ ಹೊಣೆಗಾರಿಕೆ ನಿಭಾಯಿಸಬೇಕಿದ್ದರೂ ಬಹುತೇಕ ಕೈಗಾರಿಕೆಗಳು ಇದರಿಂದ ದೂರ ಉಳಿಯುತ್ತಿವೆ. ಬೇಸಿಗೆ ಬಂದರೆ ಬಿಸಿಲಿನ ಪ್ರಮಾಣ ತೀವ್ರವಾಗುತ್ತದೆ.

ಈ ವರ್ಷ ಸತತ 20 ದಿನಗಳ ಕಾಲ 44ಕ್ಕೂ ಅ ಧಿಕ ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿತ್ತು. ಇದಕ್ಕೆಲ್ಲ ಕೈಗಾರಿಕೆಗಳೇ ಕಾರಣ ಎನ್ನುವುದು ಪರಿಸರವಾದಿಗಳ ಆರೋಪ. ಮಾಲಿನ್ಯ ನಿಯಂತ್ರಣ ಮಂಡಳಿ ಇನ್ನಾದರೂ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಲಿ ಎನ್ನುವುದು ಜಿಲ್ಲೆಯ ಜನರ ಒತ್ತಾಸೆ.

ಕೈಗಾರಿಕೆಗಳಿಂದ ಪರಿಸರದ ಮೇಲೆ ಎಷ್ಟರ ಮಟ್ಟಿಗೆ ಹಾನಿಯಾಗುತ್ತಿದೆ ಎಂಬ ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಒಂದು ಸ್ಥಳದಲ್ಲಿ ಮೂರು ದಿನ ಸಮೀಕ್ಷೆ ನಡೆಸಲಾಗುವುದು. ಮಂಡಳಿ ಕೇಂದ್ರ ಕಚೇರಿಗೆ ವರದಿ ಸಲ್ಲಿಸುವುದು ನಮ್ಮ ಕೆಲಸ. ಮುಂದಿನ ಕ್ರಮ ಅವರೇ ಕೈಗೊಳ್ಳುತ್ತಾರೆ.
– ಕಾಶಿನಾಥ, ಫೀಲ್ಡ್‌ ಟೆಕ್ನಿಶಿಯನ್‌, ಇಎಚ್‌ಎಸ್‌ಆರ್‌ಡಿಸಿ

– ಸಿದ್ಧಯ್ಯಸ್ವಾಮಿ ಕುಕುನಾರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.