ರಾಷ್ಟ್ರಪತಿ ಚುನಾವಣೆ: ಶಾಸಕರಿಗೆ ಗುರುತಿನ ಚೀಟಿ ಕಡ್ಡಾಯ 


Team Udayavani, Jul 11, 2017, 3:00 AM IST

election-commition.jpg

ಬೆಂಗಳೂರು: ಜುಲೈ 17 ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ. ಇದು ಬೇರೆ ಚುನಾವಣೆಗಳಿಗಿಂತ ವಿಭಿನ್ನವಾಗಿದೆ. ಶಾಸಕರು ಸಣ್ಣ ತಪ್ಪು ಮಾಡಿದರೂ ದೊಡ್ಡ ಮೊತ್ತ ಹೊಂದಿರುವ ಮೌಲ್ಯದ ಮತ
ಅಸಿಂಧುವಾಗುವ ಅಪಾಯವಿದೆ. ಅಷ್ಟೇ ಅಲ್ಲ ಚುನಾವಣಾ ಆಯೋಗ ನೀಡುವ ಪೆನ್ನು ಬಿಟ್ಟು ಮೈಮರೆತು ಅಭ್ಯಾಸ ಬಲದಿಂದ ತಾವು ನಿತ್ಯ ಬಳಸುವ ಪೆನ್ನು ಬಳಸಿದರೂ ಮತ ಮೌಲ್ಯ ಕಳೆದುಕೊಳ್ಳುತ್ತದೆ. ಅಂಕಿ ಬಿಟ್ಟು ಅಕ್ಷರ ಬರೆದರೂ
ಅಸಿಂಧುವಾಗುತ್ತದೆ.

ಹೀಗಾಗಿ ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗೆ ಮತ ಹಾಕುವ ಪಾಠ ಹೇಳಿಕೊಡದಿದ್ದರೆ, ಮತ ಕೈ ತಪ್ಪಿ ಹೋಗಲಿವೆ. ಶಾಸಕರಿಗೆ ವಿಪ್‌ ಜಾರಿ ಮಾಡಿದರೂ, ಗೌಪ್ಯ ಮತದಾನ ವಾಗಿರುವುದರಿಂದ ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ಹೀಗಾಗಿ ರಾಜಕೀಯ ಪಕ್ಷಗಳಿಗೆ ತಮ್ಮ ಶಾಸಕರನ್ನು ಜತನದಿಂದ ಕಾಪಾಡಿಕೊಳ್ಳುವುದು ಕೂಡ ಅಷ್ಟೆ ಮಹತ್ವದ್ದಾಗಿದೆ. ರಾಷ್ಟ್ರಪತಿ ಚುನಾವಣೆಗೆ ಮತ ಹಾಕಲು ರಾಜ್ಯ ವಿಧಾನಸಭೆಯಿಂದ ಶಾಸಕರಿಗೆ ನೀಡಿರುವ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಶಾಸಕರ ಒಂದು ಮತ 131 ಅಂಶಗಳ ಮೌಲ್ಯ ಹೊಂದಿರುವುದರಿಂದ ಶಾಸಕರು ಸ್ವಲ್ಪ ನಿರ್ಲಕ್ಷ ಮಾಡಿದರೂ, ಅವರ ಮತ ಕಸದ ಡಬ್ಬಿ ಸೇರುವ ಸಾಧ್ಯತೆ ಇದೆ.  ಶಾಸಕರು ತಮ್ಮ ಆಯ್ಕೆಯ ಮತವನ್ನು ನಮೂದಿಸಲು ಚುನಾವಣಾ ಆಯೋಗ ನೀಡುವ ಅಧಿಕೃತ ಪೆನ್ನಿನಿಂದ ಮಾತ್ರ ಬರೆಯಬೇಕು. ಬೇರೆ
ಯಾವುದೇ ಪೆನ್ನು ಬಳಕೆ ಮಾಡಿದರೂ ಅಂತವರ ಮತ ಅಸಿಂಧುವಾಗುತ್ತದೆ.

ಅಂಕಿಯಲ್ಲೇ ಬರೆಯಬೇಕು: ರಾಷ್ಟ್ರಪತಿ ಚುನಾವಣೆಗೆ ಆದ್ಯತೆಯ ಮತ ಹಾಕಲು ಶಾಸಕರಿಗೆ ಅವಕಾಶ ಇದೆ. ಮೊದಲ ಆದ್ಯತೆಯ ಮತವನ್ನು ‘1’ ಅಂಕಿಯಲ್ಲಿಯೇ ಬರೆಯಬೇಕು. ಇಂಗ್ಲಿಷ್‌, ರೋಮನ್‌ ಅಥವಾ ಮಾನ್ಯತೆ ಪಡೆದ ಭಾರತೀಯ ಯಾವುದೇ ಭಾಷೆಯ ಅಂಕಿಯನ್ನು ನಮೂದಿಸಲು ಅವಕಾಸವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಅವಕಾಶವಿದೆ. ಆದರೆ, ಕಡ್ಡಾಯವಲ್ಲ. ಮತ ಚಲಾಯಿಸುವಾಗ ಅಂಕಿ ಬದಲು ಅಕ್ಷರ ಅಥವಾ
ಚಿನ್ಹೆ (ರೈಟ್‌ ಮಾರ್ಕ್‌) ಬಳಸಿದರೂ ಮತ ಮೌಲ್ಯ ಕಳೆದುಕೊಳ್ಳುತ್ತದೆ.

ಬೇರೆ ರಾಜ್ಯದವರಿಗೂ ಅವಕಾಶ: ರಾಷ್ಟ್ರಪತಿ ಚುನಾವಣೆಗೆ ದೇಶದ ಯಾವುದೇ ಭಾಗದ ಶಾಸಕ ಅಥವಾ ಸಂಸದರು ಯಾವುದೇ ರಾಜ್ಯದಲ್ಲಿ ಮತ ಚಲಾಯಿಸಲು ಅವಕಾಶವಿದೆ. ಶಾಸಕರು ಅಥವಾ ಸಂಸದರು ತಾವು ಯಾವ ರಾಜ್ಯದಲ್ಲಿ
ಮತ ಚಲಾಯಿಸಲು ಇಷ್ಟ ಪಡುತ್ತಾರೋ, ಆ ಬಗ್ಗೆ ಚುನಾವಣಾ ಆಯೋಗದಿಂದ ಅನುಮತಿ ಪಡೆದು ತಾವು ಮತ ಚಲಾಯಿಸಲು ಬಯಸುವ ರಾಜ್ಯ ವಿಧಾನಸಭಾ ಕಾರ್ಯದರ್ಶಿ ಅಥವಾ ಚುನಾವಣಾಧಿಕಾರಿಗೆ ನೀಡಿದರೆ, ಅಲ್ಲಿ
ಮತದಾನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ.

ಯಾವಾಗ ಅಸಿಂಧುವಾಗುತ್ತದೆ ?: ಶಾಸಕರು 1 ಅಂಕಿಯನ್ನು ಸರಿಯಾಗಿ ಬರೆಯದೇ ಇದ್ದರೆ, ಒಬ್ಬರು ಅಭ್ಯರ್ಥಿಗಿಂತ ಹೆಚ್ಚು ಅಭ್ಯರ್ಥಿಗಳ ಹೆಸರಿನ ಮುಂದೆ ‘1’ ಅಂಕಿಯನ್ನು ಬರೆದರೆ, ಒಬ್ಬರೇ ಅಭ್ಯರ್ಥಿ ಮುಂದೆ ಹೆಚ್ಚು ಅಂಕಿಯನ್ನು
ಬರೆದರೆ, ಯಾರಿಗೆ ಗುರುತು ಮಾಡಿದ್ದೀರಾ ಎನ್ನುವುದು ಸಂಶಯ ಬರುವಂತಿದ್ದರೆ, ಮತದಾರರ ಆದ್ಯತೆಗಳನ್ನು ಸಂಖ್ಯೆಗಳ ಬದಲಿಗೆ ಅಕ್ಷರಗಳಲ್ಲಿ ಬರೆದರೆ ಮತ್ತು ಮತದಾನ ಮಾಡಿರುವ ಅಭ್ಯರ್ಥಿಯ ಗೌಪ್ಯತೆಯನ್ನು ಬಹಿರಂಗ ಪಡಿಸಿದರೆ, ಅಂತಹ ಬ್ಯಾಲೆಟ್‌ ಅಸಿಂಧುವಾಗುತ್ತದೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.