ಗಿನ್ನಿಸ್ ದಾಖಲೆಯಾಗಲಿದೆ 9 ಗಂಟೆ ನಿರಂತರ ಗಾಯನ
Team Udayavani, Jul 17, 2017, 3:25 AM IST
ಹೊಸಪೇಟೆ: ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ನ ವಿವಿಧ ಭಜನಾ ಮಂಡಳಿಗಳ 1500 ಮಂದಿ ಆ. 20 ರಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಸತತ 9 ಗಂಟೆಗಳ ಕಾಲ ನಿರಂತರವಾಗಿ ಶ್ರೀ ಮುಖ್ಯ ಪ್ರಾಣದೇವರ ಹಾಡುಗಳನ್ನು ಹಾಡುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಾಣ ಮಾಡಲಿದ್ದಾರೆ ಎಂದು ಮಂತ್ರಾಲಯ
ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದರು. ನಗರದ ರಾಣಿಪೇಟೆಯ ಮಂತ್ರಾಲಯ ಶಾಖಾಮಠ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಚಾತುರ್ಮಾಸ ನಿಮಿತ್ತ ಸಾರ್ವಜನಿಕರಿಗೆ ತಪ್ತಮುದ್ರಾಧಾರಣೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಕಲಿಯುಗದ ಕಲ್ಪತರು ರಾಘವೇಂದ್ರ ಸ್ವಾಮಿಗಳ ಆರಾಧನೆ ಆ. 8, 9, 10ರಂದು ನಡೆಯಲಿದೆ.
ಈ ನಿಮಿತ್ತ ಮಂತ್ರಾಲಯದಲ್ಲಿ ಹಲವು ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂತ್ರಾಲಯ ದಾಸಸಾಹಿತ್ಯ ಪ್ರಾಜೆಕ್ಟ್ನಿಂದ ಜು.30ರಂದು ಹರಿಕಥಾಮೃತಸಾರ 32 ಸಂಧಿಗಳನ್ನು ಕಂಠಸ್ಥ ಒಪ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ. 28ರಂದು ಮಂತ್ರಾಲಯ ರಾಯರ ಸನ್ನಿಧಿಯಲ್ಲಿ 1000 ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ಸಾಮೂಹಿಕವಾಗಿ ಶ್ರೀ ವಾದಿರಾಜ ತೀರ್ಥರು ರಚಿಸಿರುವ ಲಕ್ಷ್ಮೀ ಶೋಭಾನ ಪಠಣ ಆಯೋಜಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…