ಇಳಕಲ್ಲ ಬಸ್ ನಿಲ್ದಾಣದ ಶೌಚಗೃಹದಲ್ಲೇ ಜನನ!
Team Udayavani, Jul 17, 2017, 4:00 AM IST
ಇಳಕಲ್ಲ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೂಲತಃ ವಿಜಯಪುರ ಜಿಲ್ಲೆಯ ಗಣಿ ಗ್ರಾಮದ ಸಿದ್ದೇಶ ನಗರದ ನಿರ್ಮಲಾ ರಾಮಲಿಂಗಪ್ಪ ಹಡಪದ ದಂಪತಿ ಕೂಲಿ ಕೆಲಸ ಮಾಡಿಕೊಂಡು ಗೋವಾದಲ್ಲಿ ನೆಲೆಸಿದ್ದಾರೆ. ನಿರ್ಮಲಾ 7 ತಿಂಗಳ ಗರ್ಭಿಣಿಯಾಗಿದ್ದು, ಹೆರಿಗೆಗಾಗಿ ತವರುಮನೆಗೆ ಬಸ್ನಲ್ಲಿ ಶನಿವಾರ ರಾತ್ರಿ ಪ್ರಯಾಣ ಬೆಳೆಸಿದ್ದಾರೆ. ಭಾನುವಾರ ಬೆಳಗ್ಗೆ 6.30ರ ಸುಮಾರಿಗೆ ನಗರಕ್ಕೆ ಬಂದಿಳಿದಿದ್ದರು. ಈ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋದ ನಿರ್ಮಲಾಗೆ ಹೆರಿಗೆ ನೋವು ಕಾಣಿಸಿಕೊಂಡು, ಅಲ್ಲೇ ಗಂಡು ಮಗುವಿಗೆ ಜನ್ಮ ನೀಡಿದಳು. ಇದನ್ನು ಗಮನಿಸಿದ ಮಹಿಳೆಯರು ಸಹಾಯಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದ ನಿಲ್ದಾಣದ ಸಾರಿಗೆ ನಿಯಂತ್ರಣಾಧಿಕಾರಿ ಆ್ಯಂಬುಲೆನ್ಸ್ಗೆ ಕರೆ ಮಾಡಿ, ನಂತರ ಮಗು ಮತ್ತು ತಾಯಿಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಬಳಿಕ ಬಾಣಂತಿ ಹಾಗು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ