ರಾಷ್ಟ್ರಪತಿ ಚುನಾವಣೆ: ಜೆಡಿಎಸ್ ಮತದಾನ
Team Udayavani, Jul 18, 2017, 3:00 AM IST
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಎಸ್ನ ವೈ.ಎಸ್.ವಿ.ದತ್ತಾ ಹಾಗೂ ಭಿನ್ನಮತೀಯ ಶಾಸಕ ಚೆಲುವರಾಯಸ್ವಾಮಿ ಮತ ಚಲಾವಣೆ ಮಾಡಲಿಲ್ಲ. ದತ್ತಾ ಆರು ಮತದಾನಕ್ಕೆ ಹೊರಟಿದ್ದಾಗ ಮಾರ್ಗಮಧ್ಯೆ ಸಹೋದರಿ ನಿಧನ ಸುದ್ದಿ ಬಂದ ಹಿನ್ನೆಲೆಯಲ್ಲಿ ವಾಪಸ್ಸಾಗಿ ಮತದಾನಕ್ಕೆ ಗೈರು ಹಾಜರಾದರು. ಚೆಲುವರಾಯಸ್ವಾಮಿಯವರು ಅಮೆರಿಕ ಪ್ರವಾಸದಲ್ಲಿದ್ದ ಕಾರಣ ಮತದಾನಕ್ಕೆ ಗೈರು ಹಾಜರಾಗಿದ್ದರು.32 ಜೆಡಿಎಸ್ ಶಾಸಕರು, ಆರು ಮಂದಿ ಭಿನ್ನಮತೀಯ ಶಾಸಕರು ಮತದಾನದಲ್ಲಿ ಪಾಲ್ಗೊಂಡು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ಗೆ ಮತ ಚಲಾಯಿಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಸಂಸದ ಪುಟ್ಟರಾಜು ದೆಹಲಿಯಲ್ಲಿ ಮತ ಚಲಾವಣೆ ಮಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕರ ಜತೆಗೂಡಿ ಬಂದು ಮತದಾನ ಮಾಡಿದರು. ಜಮೀರ್ ಅಹಮದ್ ನೇತೃತ್ವದಲ್ಲಿ ಐವರು ಭಿನ್ನಮತೀಯ ಶಾಸಕರು ಮೊದಲಿಗೆ ಮತ ಚಲಾವಣೆ ಮಾಡಿದರು. ಅನಂತರ ಇಕ್ಬಾಲ್ ಅನ್ಸಾರಿ ವಿಳಂಬವಾಗಿ ಬಂದು ಮತದಾನ ಮಾಡಿದರು. ಮತದಾನ ಅನಂತರ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ನಿರ್ಣಯದಂತೆ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರಿಗೆ 32 ಶಾಸಕರು ಮತ ಚಲಾವಣೆ ಮಾಡಿದ್ದೇವೆ ಎಂದರು. ಸಿ.ಟಿ. ರವಿ, ಜೆಡಿಎಸ್ನ ಕೆಲವರು ಎನ್ಡಿಎ ಅಭ್ಯರ್ಥಿಗೆ ಮತ ಚಲಾಯಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆ ರೀತಿ ಯಾರೂ ಪಕ್ಷದ ತೀರ್ಮಾನ ಉಲ್ಲಂಘಿಸಿಲ್ಲ. ಪಕ್ಷದ ಶಾಸಕರು ದೇವೇಗೌಡರ ತೀರ್ಮಾನಕ್ಕೆ ಬದ್ಧರಾಗಿ ಸಹಮತದಿಂದಲೇ ಮೀರಾಕುಮಾರ್ ಅವರಿಗೆ ಮತ ಚಲಾವಣೆ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್