ಬೀದರ್‌ನಲ್ಲಿ ಬೃಹತ್‌ ಲಿಂಗಾಯತ ಮಹಾ ಜಾಥಾ


Team Udayavani, Jul 20, 2017, 5:40 AM IST

Bidar.gif

ಬೀದರ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಲಿಂಗಾಯತ ಧರ್ಮ ಸಮನ್ವಯ ಸಮಿತಿ ನಗರದಲ್ಲಿ ಬುಧವಾರ ಬೃಹತ್‌ ಲಿಂಗಾಯತ ಮಹಾರ್ಯಾಲಿ ನಡೆಸಿತು.

ರಾಜ್ಯ ಮಾತ್ರವಲ್ಲದೆ, ಮಹಾರಾಷ್ಟ್ರ, ತೆಲಂಗಾಣದಿಂದ ಸಹಸ್ರಾರು ಸಂಖ್ಯೆಯಲ್ಲಿ ಬಸವಾನುಯಾಯಿಗಳು ಭಾಗವಹಿಸಿದ್ದರು. ಕೂಡಲಸಂಗಮದ ಶ್ರೀ ಮಾತೆ ಮಹಾದೇವಿ, ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಬೃಹತ್‌ ಪಥ ಸಂಚಲನ ನಡೆಸಲಾಯಿತು.

ರ್ಯಾಲಿಗೂ ಮುನ್ನ ನೆಹರು ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ನಡೆಯಿತು. ನಾಡಿನ ಹಲವು ಮಠಾಧಿಧೀಶರು, ಸ್ವಾಮೀಜಿಗಳು ಮತ್ತು ಜಿಲ್ಲೆಯ ಶಾಸಕರು ಸಾಕ್ಷಿಯಾದರು. ರ್ಯಾಲಿ ಬಳಿಕ ಬಳಿಕ ಸ್ವಾಮೀಜಿಗಳು, ಮುಖಂಡರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು. ಅಂದಾಜು ಲಕ್ಷ
ಸಂಖ್ಯೆಯಲ್ಲಿ ಜನರು ಜಾಥಾದಲ್ಲಿ ಹೆಜ್ಜೆ ಹಾಕಿದರು.

ಲಿಂಗಾಯತ ಸ್ವತಂತ್ರ ಧರ್ಮ :
ಮಾತೆ ಮಹಾದೇವಿ
ಬೀದರ:
“ಲಿಂಗಾಯತ ಮತ್ತು ವೀರಶೈವ ಎರಡೂ ಪದಗಳು ಬೇರೆ. ಲಿಂಗಾಯತ 12ನೇ ಶತಮಾನದಲ್ಲಿ ಬಸವಣ್ಣನಿಂದ ಹುಟ್ಟಿದ ಸ್ವತಂತ್ರ ಧರ್ಮ. ಈ ಕುರಿತು ಯಾರೇ ಸ್ವಾಮೀಜಿ, ಸಂಶೋಧಕರು ವೇದಿಕೆ ಏರ್ಪಡಿಸಿದರೆ ಸಾಬೀತು ಮಾಡಿ ತೋರಿಸುತ್ತೇನೆ’ ಎಂದು ಕೂಡಲಸಂಗಮದ ಶ್ರೀ ಮಾತೆ ಮಹಾದೇವಿ ಸವಾಲು ಹಾಕಿದರು.

ಲಿಂಗಾಯತ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಲಿಂಗಾಯತ ಒಂದು ಜಾತಿ, ಪಂಥವಲ್ಲ, ಅದು ಸ್ವತಂತ್ರ ಧರ್ಮ. ಲಿಂಗಾಯತ ಜತೆಗೆ ವೀರಶೈವ ಪದ ಸೇರಿಸುವುದು ಅಪರಾಧ. ಹಿರಿಯ ಚಿಂತಕ ಚಿದಾನಂದ ಮೂರ್ತಿ ವೀರಶೈವ ಪದವೇ ಸತ್ಯ ಎಂದು ವಾದಿಸುತ್ತಿದ್ದರೆ ನಮ್ಮದು ತಕರಾರಿಲ್ಲ. ಒಂದೇ ಮನೆಯಲ್ಲಿ ಇಬ್ಬರು ಜಗಳ ಆಡುವುದು ಬೇಡ. ನೀವು (ವೀರಶೈವರು) ಪಕ್ಕದ ಮನೆಯವರಾಗಿಯೇ ಇರಿ. ಲಿಂಗಾಯತ ಧರ್ಮದಲ್ಲಿ ಬಂದು ಕಲುಷಿತ ಮಾಡಬೇಡಿ ಎಂದು ಹೇಳಿದರು.

ಅವಿವೇಕದ ನಿಲುವು: ಡಾ.ಚಿಮೂ
ಬೆಂಗಳೂರು
: ವೀರಶೈವ ಧರ್ಮವು ಸ್ವತಂತ್ರ ಧರ್ಮವೇ ಹೊರತು ಹಿಂದೂ ಧರ್ಮದ ಭಾಗವಲ್ಲ ಎಂಬ ನಿಲುವು ಮತ್ತು ಬಸವಣ್ಣ ಲಿಂಗಾಯತ ಧರ್ಮದ ಸ್ಥಾಪಕ ಎಂಬುದು ಅಪ್ಪಟ ಅವಿವೇಕ ಎಂದು ಸಂಶೋಧಕ ಎಂ.ಚಿದಾನಂದಮೂರ್ತಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಅಂಕಿತ “ಕೂಡಲಸಂಗ ದೇವ’ ಅಲ್ಲವೆಂದು “ಲಿಂಗದೇವ’ ಎಂಬುದೇ ಅವರ ಅಂಕಿತವೆಂದೂ ಪ್ರತಿಪಾದಿಸಿರುವ ಮಾತೆ ಮಹಾದೇವಿ ತಮ್ಮ ಅವಿವೇಕದ ನಿಲುವನ್ನೇ ಮತ್ತೆ ಮುಂದುವರಿಸಿದ್ದಾರೆ. 12ನೇ ಶತಮಾನದ ಬಸವಣ್ಣನೇ ಲಿಂಗಾ ಯತ ಧರ್ಮದ ಸ್ಥಾಪಕನೆಂದೂ ಅವನು ಸ್ಥಾಪಿಸಿದ್ದು, ವೀರಶೈವ ಅಲ್ಲವೆಂದೂ ಹೇಳಿ ಪ್ರಚಾರ ಮಾಡುತ್ತಿದ್ದಾರೆ. ಜತೆಗೆ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವೆಂದು ಕೇಂದ್ರ ಘೋಷಿಸಬೇಕೆಂದು ಒತ್ತಾಯಿಸಿರುವುದು ಅವಿವೇಕತನದಿಂದ ಕೂಡಿದೆ ಎಂದು ದೂರಿದರು. ಮಾತೆ ಮಹಾದೇವಿ ಅವರು ಮೂಲ ದಾಖಲೆಗಳನ್ನು ಅಲಕ್ಷಿಸಿದ್ದಾರೆ ಎಂಬುದು ಸ್ಪಷ್ಟ. ವೀರಶೈವ ಧರ್ಮವು ಸ್ವತಂತ್ರ ಧರ್ಮವೇ ಹೊರತು ಹಿಂದೂಧರ್ಮದ ಭಾಗವಲ್ಲ ಎಂಬ ನಿಲುವು ಕೂಡ ಮತ್ತೂಂದು ಅವಿವೇಕ ಎಂದಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.