ಒಂದೂವರೆ ತಿಂಗಳಾದರೂ ಸಮಿತಿ ಸದಸ್ಯರಿಗೇ ಗೊತ್ತಿರಲಿಲ್ಲ!


Team Udayavani, Jul 20, 2017, 5:50 AM IST

Kannada-Okkuta.gif

ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜವನ್ನು ರೂಪಿಸಿ, ಅದಕ್ಕೆ ಕಾನೂನು ಚೌಕಟ್ಟು ನೀಡಲು ಸರ್ಕಾರ ಸಮಿತಿ ರಚಿಸಿರುವುದು ಆ ಸಮಿತಿಯ ಹಲವು ಸದಸ್ಯರಿಗೇ ಒಂದೂವರೆ ತಿಂಗಳಾದರೂ ಈ ವಿಚಾರವೇ ಗೊತ್ತಿರಲಿಲ್ಲ! ಬಹುತೇಕ ಸದಸ್ಯರಿಗೆ ಈ ವಿಷಯ ತಿಳಿದದ್ದು  ಮಂಗಳವಾರ ಮಾಧ್ಯಮಗಳ ಮೂಲಕವಷ್ಟೇ!

ಹಿರಿಯ ಸಾಹಿತಿ ಡಾ.ಪಾಟೀಲ ಪುಟ್ಟಪ್ಪ ಹಾಗೂ ಸಮಾಜ ಸೇವಕ ಭೀಮಪ್ಪ ಗುಂಡಪ್ಪ ಗಡಾದ ಅವರು 2014ರಲ್ಲಿ ಸರ್ಕಾರಕ್ಕೆ ಪತ್ರ ಬರೆದು, ಕನ್ನಡ ನಾಡಿಗೆ ಪ್ರತ್ಯೇಕ ಧ್ವಜದ ವಿನ್ಯಾಸ ಸಿದ್ದಪಡಿಸಿ, ಅದಕ್ಕೆ ಕಾನೂನಿನ ಸ್ವರೂಪ ನೀಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮಕೈಗೊಂಡು 2017 ಜೂನ್‌ 6ರಂದು ಆದೇಶ ಹೊರಡಿಸಿತ್ತು. ಕನ್ನಡ ನಾಡಿಗೆ ಪ್ರತ್ಯೇಕ ಧ್ವಜ ವಿನ್ಯಾಸ ಸಿದ್ದಪಡಿಸಿ ಕಾನೂನಿನ ಸ್ವರೂಪ ನೀಡುವ ಕುರಿತು ವರದಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ ಮಾಡಿ ಆದೇಶಿಸಿತ್ತು.

ಜು.18ರಂದು ಈ ವಿಷಯ ಮಾಧ್ಯಮಗಳಲ್ಲಿ ಪ್ರಕಟಗೊಂಡು, ವಿವಾದ ಸ್ವರೂಪ ಪಡೆದುಕೊಳ್ಳುವವರೆಗೂ ಈ ಸಮಿತಿಯಲ್ಲಿದ್ದ ಬಹುತೇಕ ಸದಸ್ಯರಿಗೆ ತಾವು ಸರ್ಕಾರ ರಚಿಸಿರುವ ಇಂಥಹದ್ದೊಂದು ಸಮಿತಿಯಲ್ಲಿ ಸದಸ್ಯರಾಗಿದ್ದೇವೆ ಎನ್ನುವ ವಿಚಾರವೇ ಗೊತ್ತಿರಲಿಲ್ಲ ಎನ್ನುವುದೇ ವಿಶೇಷ.

ಸರ್ಕಾರದ ಆದೇಶದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅಧ್ಯಕ್ಷ), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗೃಹ ಇಲಾಖೆ, ಕಾನೂನು ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆಗಳ ಸರ್ಕಾರದ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕನ್ನಡ ವಿಶ್ವವಿದ್ಯಾಲಯದ ಕುಲಪತಿ (ಸದಸ್ಯರು) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರನ್ನು (ಸದಸ್ಯ ಕಾರ್ಯದರ್ಶಿ) ನೇಮಿಸಿದೆ.

ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ರೂಪಿಸಿ, ಕಾನೂನಿನ ಸ್ವರೂಪ ನೀಡುವ ಕುರಿತು ವರದಿ ಸಲ್ಲಿಸಲು ಒಂದೂವರೆ ತಿಂಗಳ ಹಿಂದೆಯೇ ಸಮಿತಿ ರಚಿಸಿದ್ದರೂ, ಇದುವರೆಗೂ ಒಂದು ಸಭೆಯೂ ನಡೆದಿಲ್ಲ. ಸಮಿತಿಯ ಸದಸ್ಯರ ಪೈಕಿ ಕೆಲವರು ಹೇಳುವಂತೆ ಸದಸ್ಯರೆಂದು ನಮಗೇ ಗೊತ್ತಿಲ್ಲದ್ದಿದ್ದ ಮೇಲೆ ಇನ್ನೂ ಸಭೆ ನಡೆಯುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಸಮಿತಿ ಕುರಿತು ಮಾಹಿತಿ ನೀಡುವ ಜವಾಬ್ದಾರಿಯನ್ನು ಸರ್ಕಾರ ಸರಿಯಾಗಿ ನಿರ್ವಹಿಸಬೇಕಿತ್ತು. ಜತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಧ್ಯಕ್ಷರಾಗಿದ್ದು, ಈ ವಿಚಾರ ಅವರ ಗಮನಕ್ಕೆ ಬಂದಿರುತ್ತದೆ. ಅವರಾದರೂ ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಆಹ್ವಾನಿಸಬೇಕಿತ್ತು. ಕೇವಲ ನಾಮಕಾವಸ್ಥೆಗೆ ಸಮಿತಿ ರಚಿಸಿ, ವಿವಾದ ಎಬ್ಬಿಸುವ ಅಗತ್ಯವಿರಲಿಲ್ಲ ಎಂಬ ಆರೋಪ ಕನ್ನಡ ಪರ ಸಂಘಟನೆಗಳಿಂದ ಕೇಳಿಬಂದಿದೆ.

ಸರ್ಕಾರದ ಆದೇಶ ಯಾವಾಗ ಬಂದಿತ್ತೋ ಗೊತ್ತಿಲ್ಲ. ಆದರೆ ನನಗೆ ಮಾಹಿತಿ ಕಳೆದ ಎರಡೂ¾ರು ದಿನಗಳ ಹಿಂದೆಯಷ್ಟೇ ಬಂದಿದೆ. ಇನ್ನೂ ಸಮಿತಿ ಸಭೆ ಸೇರಿಲ್ಲ. ಮೊದಲ ಸಭೆ ನಡೆದ ನಂತರ ಏನು ಮಾಡಬೇಕು ಎಂಬಿತ್ಯಾದಿ ವಿಚಾರಗಳು ಗೊತ್ತಾಗಲಿವೆ. ಇಷ್ಟೇ ದಿನದಲ್ಲಿ ವರದಿ ನೀಡಬೇಕು ಎಂಬ ಯಾವುದೇ ಗಡುವನ್ನು ಸರ್ಕಾರ ನೀಡಿಲ್ಲ.
– ಎಸ್‌.ಜಿ.ಸಿದ್ದರಾಮಯ್ಯ, ಅಧ್ಯಕ್ಷ, ಕನ್ನಡ ಅಭಿವೃದ್ಧಿ ಪ್ರಾಧಿಕಾರ.

ಇದುವರೆಗೂ ಆದೇಶ ಪ್ರತಿ ನನ್ನ ಕೈಸೇರಿಲ್ಲ. ನಾನು ಕೂಡ ಆ ಸಮಿತಿಯಲ್ಲಿ ಸದಸ್ಯನಿದ್ದೇನೆ ಅನ್ನೋದು ಸಹ ಮಾಧ್ಯಮಗಳ ಮೂಲಕ ಗೊತ್ತಾಯೆ¤à ಹೊರತು, ಅಧಿಕೃತವಾಗಿ ಯಾವುದೇ ಆದೇಶ ಸಿಕ್ಕಿಲ್ಲ.
– ಡಾ.ಮನುಬಳಿಗಾರ್‌, ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ತು.

ಸಮಿತಿ ರಚನೆ ಕುರಿತು ಆದೇಶ ಬಂದ ಕೂಡಲೇ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಹಾಗೂ ಇತರರಿಗೆ ಟಪಾಲನ್ನು ಅಧಿಕೃತವಾಗಿಯೇ ತಲುಪಿಸಿದ್ದೇವೆ. ಆಗಾಗ ಇಲಾಖೆಯಲ್ಲಿ ಅಧಿಕಾರಿಗಳು ಬದಲಾಗುವ ಪ್ರಕ್ರಿಯೆ ಸಾಮಾನ್ಯವಾಗಿದ್ದು, ಈ ಕಾರಣದಿಂದ ಈಗಿರುವವರಿಗೆ ಮಾಹಿತಿ ಸಿಕ್ಕದಿರಬಹುದು. ಮೊದಲ ಸಭೆ ಯಾವಾಗ ಎಂದು ನಿರ್ಧಾರವಾದಾಗ ವಿಷಯ ತನ್ನಿಂತಾನೆ ಗೊತ್ತಾಗುತ್ತಿತ್ತು.
– ರಘುಸ್ವಾಮಿ, ಉಪಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.

– ಸಂಪತ್‌ ತರೀಕೆರೆ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.