ಕೊಡಗಿನಲ್ಲಿ ಭಾರೀ ಮಳೆ ಇಂದು ಶಾಲಾ, ಕಾಲೇಜುಗಳಿಗೆ ರಜೆ
Team Udayavani, Jul 20, 2017, 7:40 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜೀವನದಿ ಕಾವೇರಿ ಮೈದುಂಬಿಕೊಂಡಿದ್ದು, ಪ್ರಸಕ್ತ ಸಾಲಿನ ಪ್ರಥಮ ಪ್ರವಾಹ ಕಾಣಿಸಿಕೊಂಡಿದೆ. ಭಾಗ ಮಂಡಲ ಜಲಾವೃತಗೊಂಡು ದ್ವೀಪವಾಗಿ ಪರಿಣಮಿಸಿದೆ.
ವರ್ಷಾಧಾರೆಯ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರು ಜು. 20ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೆೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲಾ ಕೇಂದ್ರ ಮಡಿಕೆೇರಿ ಸೇರಿದಂತೆ ಕಾವೇರಿ, ಲಕ್ಷ್ಮಣತೀರ್ಥ ನದಿ ಪಾತ್ರದ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾಗಮಂಡಲ ಸೇರಿದಂತೆ ದಕ್ಷಿಣ ಕೊಡಗಿನ ಹಲವೆಡೆಗಳಲ್ಲಿ ನದಿಯ ಪ್ರವಾಹದಿಂದ ರಸ್ತೆಗಳು ಮುಳುಗಡೆಯಾಗಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಕೆಲವೆಡೆ ಬರೆಕುಸಿತ ಸಂಭವಿಸಿದೆ.
ಬುಧವಾರ ಬೆಳಗ್ಗೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ ಉಕ್ಕಿ ಹರಿಯುವ ಮೂಲಕ ಪ್ರವಾಹ ವೇರ್ಪಟ್ಟಿತು. ಇದರಿಂದ ಅಲ್ಲಿನ ಭಾಗ ಮಂಡಲ ಮತ್ತು ಅಯ್ಯಂಗೇರಿ ರಸ್ತೆಗಳ ಮೇಲೆ 3ರಿಂದ 4 ಅಡಿಗಳಷ್ಟು ಪ್ರವಾಹದ ನೀರು ಆವರಿಸಿ ಕೊಂಡು ಭಾಗಮಂಡಲ ಅಕ್ಷರಶಃ ದ್ವೀಪವಾಗಿ ಮಾರ್ಪಟ್ಟು ಗ್ರಾಮಸ್ಥರು ಸಂಚಾರಕ್ಕೆ ಸಂಕಷ್ಟವನ್ನು ಎದುರಿಸುವಂತಾಯಿತು.
ಬೋಟ್ ವ್ಯವಸ್ಥೆ
ಭಾಗಮಂಡಲದಲ್ಲಿ ಪ್ರವಾಹವೇರ್ಪಟ್ಟ ಹಿನ್ನೆಲೆ ಯಲ್ಲಿ ಗ್ರಾಮಸ್ಥರ ಸಂಚಾರಕ್ಕೆ ಜಿಲ್ಲಾಡಳಿತ ಬೋಟ್ ವ್ಯವಸ್ಥೆ ಕಲ್ಪಿಸಿದೆ. ಎರಡನೇ ದಿನವೂ ಮಳೆೆಯ ಆರ್ಭಟ ಮುಂದುವರಿದಿದೆ. ಕಾವೇರಿ ನದಿ ಪಾತ್ರದ ನಾಪೊàಕ್ಲು, ಬಲಮುರಿ, ಸಿದ್ದಾಪುರ, ಕುಶಾಲನಗರ ವ್ಯಾಪ್ತಿಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ.
ಸೇತುವೆ ಮುಳುಗಡೆ
ಭಾರೀ ಮಳೆೆಯಿಂದ ಮೂರ್ನಾಡು ಸಮೀಪದ ಬಲಮುರಿಯಲ್ಲಿ ಕಿರು ಸೇತುವೆ ಮುಳುಗಡೆಗೊಂಡಿದೆ. ಸೇತುವೆ ಮೇಲೆ ಸುಮಾರು 6 ಅಡಿಯಷ್ಟು ನೀರು ಹರಿಯುತ್ತಿದೆ. ಎತ್ತರದ ಪ್ರದೇಶದಲ್ಲಿ ಮತ್ತೂಂದು ಸೇತುವೆ ಇರುವುದರಿಂದ ಜನ ಸಂಚಾರಕ್ಕೆ ತೊಡಕುಂಟಾಗಿಲ್ಲ.
ಉಕ್ಕಿ ಹರಿಯುತ್ತಿರುವ ಲಕ್ಷ್ಮಣತೀರ್ಥ
ದಕ್ಷಿಣ ಕೊಡಗಿನ ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿದ್ದು, ನದಿ ಪಾತ್ರದ ಗದ್ದೆಬಯಲುಗಳಲ್ಲಿ ಪ್ರವಾಹದ ನೀರು ಆವರಿಸಿಕೊಂಡಿದೆ. ಹಲವೆಡೆಗಳಲ್ಲಿ ಸಂಚಾರ ಕಡಿತಗೊಳ್ಳುವ ಅಪಾಯ ಎದುರಾಗಿದೆ.
ಮೈಕೊರೆಯುವ ಚಳಿಗಾಳಿ
ಜಿಲ್ಲಾ ಕೇಂದ್ರ ಮಡಿಕೇರಿ ವ್ಯಾಪ್ತಿಯಲ್ಲಿ ಚಳಿ ಸಹಿತ ಭಾರೀ ಗಾಳಿ ಮಳೆೆಯಾಗುತ್ತಿದ್ದು, ನಗರದ ಕೆಲವೆಡೆ ಸಣ್ಣಪುಟ್ಟ ಹಾನಿಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ