ಕೊಡಗು: ತಗ್ಗದ ಪ್ರವಾಹ; ಹೆದ್ದಾರಿ ಕುಸಿತ
Team Udayavani, Jul 21, 2017, 7:50 AM IST
ಮಡಿಕೇರಿ: ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯೊಂದಿಗೆ ನದಿತೊರೆಗಳು ತುಂಬಿ ಹರಿದ ಕೊಡಗು ಜಿಲ್ಲೆಯಲ್ಲಿ ಗುರುವಾರ ಮಳೆ ಕಡಿಮೆಯಾಗಿದೆ. ಆದರೆ ನದಿಗಳಲ್ಲಿ ನೀರಿನ ಪ್ರವಾಹ ಕಡಿಮೆಯಾಗಿಲ್ಲ. ಕರ್ನಾಟಕ-ಕೇರಳ ಹೆದ್ದಾರಿ ಕುಸಿದಿದ್ದು, ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.
ಎರಡು ದಿನ ಸುರಿದ ಭಾರೀ ಗಾಳಿ, ಮಳೆ ಮುಂದುವರಿಯುವ ನಿರೀಕ್ಷೆ ಇತ್ತಾದರೂ ಗುರುವಾರ ಮಳೆ ಶಾಂತ ವಾಗಿ ತಿಳಿ ಬಿಸಿಲಿನ ವಾತಾವರಣ ಮೂಡಿತ್ತು. ಆದರೆ ದಕ್ಷಿಣ ಕೊಡಗಿನಲ್ಲಿ ಮಧ್ಯಾಹ್ನದ ವರೆಗೂ ಭಾರೀ ಮಳೆಯಾಗಿ ನದಿತೊರೆಗಳು ಪ್ರವಾಹದ ಭೀತಿಯಲ್ಲೇ ತುಂಬಿ ಹರಿದವು.
ಅತೀ ಹೆಚ್ಚು ಮಳೆಯಾಗುತ್ತಿದ್ದ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕೂಡ ಮಳೆ ಕಡಿಮೆಯಾಗಿದೆ. ಆದರೆ ರಸ್ತೆಗಳನ್ನು ಆವರಿಸಿರುವ ನೀರಿನ ಮಟ್ಟ ಕಡಿಮೆಯಾಗಿಲ್ಲ. ಭಾರೀ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಇಳಿಕೆಯಾಗಿಲ್ಲ. ಮಡಿಕೇರಿಯಲ್ಲಿ ಬೆಳಗ್ಗೆ ಮೋಡ ಕವಿದಿತ್ತಾದರೂ ಅನಂತರ ಬಿಸಿಲಿನ ವಾತಾವರಣ ಮೂಡಿತ್ತು.
ವಿರಾಜಪೇಟೆ ವ್ಯಾಪ್ತಿಯಲ್ಲಿ ಬುಧ ವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗಿನ ಜಾವ ಸುರಿದ ಧಾರಾಕಾರ ಮಳೆಗೆ ಕರ್ನಾಟಕ-ಕೇರಳ ಅಂತಾ ರಾಜ್ಯ ಹೆದ್ದಾರಿ ಪೆರಂಬಾಡಿಯಲ್ಲಿ ಕುಸಿತಗೊಂಡಿತು. ಪರಿಣಾಮ ಜಿಲ್ಲೆಗೆ ಕೇರಳ ದೊಂದಿಗಿನ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ರಸ್ತೆಯ ಎಡಭಾಗದಲ್ಲಿರುವ ಕೆರೆಯಿಂದ ನೀರು ರಭಸ ವಾಗಿ ಹರಿಯುತ್ತಿರುವುದರಿಂದ ಇನ್ನಷ್ಟು ಮಣ್ಣು ಕುಸಿಯುವ ಸಂಭವವಿದೆ ಎಂದು ಸ್ಥಳ ಪರಿಶೀಲನೆ ನಡೆಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ