ಬಿಎಸ್ವೈ ಸಿಎಂ ಮಾಡಲು ಬಿಜೆಪಿಯಲ್ಲೇ ಇರುವೆ
Team Udayavani, Jul 21, 2017, 10:38 AM IST
ಬೆಂಗಳೂರು: ಬಿಜೆಪಿಯಲ್ಲಿಯೇ ಇರುತ್ತೇನೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಗುರುವಾರ ತಮ್ಮ 67ನೇ ಹುಟ್ಟುಹಬ್ಬ ಆಚರಿಸಿಕೊಂಡ ವಿ. ಸೋಮಣ್ಣ ಅವರು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ತಮ್ಮ ಬೆಂಬಲಿಗರಿಗೆ ಮನವಿ ಮಾಡಿದರು. ವಿಜಯನಗರದ ತಮ್ಮ ನಿವಾಸದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ
ಮಾತನಾಡಿದ ಅವರು, ಕೆಲವರು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯಲು
ಯತ್ನಿಸುತ್ತಿದ್ದಾರೆ. ತಾವು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಚಾಮರಾಜನಗರ ಜಿಲ್ಲೆಗೆ ಏನಾದರೂ ಮಾಡಬೇಕೆಂಬ
ಬಯಕೆ ಇದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಶ್ರಮಿಸುವುದಾಗಿ ಸೋಮಣ್ಣ ಹೇಳಿದರು. ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅವರು ಸೋಮಣ್ಣಗೆ ಶುಭ ಕೋರಿ ಮಾತನಾಡಿ, ಸೋಮಣ್ಣ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸಿ ವಿಧಾನಸಭೆಯಲ್ಲಿ ಇರುತ್ತಾರೆ.
ಕಾಂಗ್ರೆಸ್ ಮುಖಂಡರನ್ನು ಬಿಜೆಪಿಗೆ ಕರೆ ತರುತ್ತಿರುವವರೇ ಸೋಮಣ್ಣ. ಕೆ.ಪಿ.ನಂಜುಂಡಿಯನ್ನು ಪಕ್ಷಕ್ಕೆ ಸೇರಿಸಿದವರೇ ಸೋಮಣ್ಣ. ಹೀಗಾಗಿ, ಅವರು ಬೇರೆ ಪಕ್ಷಕ್ಕೆ ಹೋಗುತ್ತಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು. ಆದರೆ, ಸೋಮಣ್ಣ ಅವರು ಕಾಂಗ್ರೆಸ್ ಸೇರಲು ಬಯಸಿದರೆ, ಸ್ವಾಗತಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. “ಸೋಮಣ್ಣ ಮೊದಲು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದವರು, ಕಾಂಗ್ರೆಸ್ ಅವರಿಗೆ ಹೊಸತೇನಲ್ಲ. ಅವರು ಪಕ್ಷ ಸೇರುವುದಾದರೆ ನಮ್ಮದೇನೂ
ಅಭ್ಯಂತರವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ