ಸಿಬ್ಬಂದಿ ಕಡಿತಕ್ಕೆ ಚಿಂತನೆ; ಬಹು ನಿರೀಕ್ಷಿತ ವೇತನ ಆಯೋಗ ಕಾರ್ಯಾರಂಭ


Team Udayavani, Jul 23, 2017, 6:30 AM IST

GOVT.gif

ಬೆಂಗಳೂರು: ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಂತೆ ರಾಜ್ಯ ಸರ್ಕಾರ ರಚಿಸಿರುವ ಆರನೇ ವೇತನ ಆಯೋಗ ನೌಕರರ ವೇತನ ವಿಚಾರದಲ್ಲಿ ಸರ್ಕಾರದ ಮೇಲಿನ ಹೊರೆ ಕಡಿಮೆ ಮಾಡುವತ್ತ ಗಮನಹರಿಸಿದೆ. ಆ ನಿಟ್ಟಿನಲ್ಲಿ ಸರ್ಕಾರಿ ನೌಕರರ ಸಂಖ್ಯೆ ಕಡಿತಗೊಳಿಸುವ ಮತ್ತು ಇಲಾಖೆಗಳ ಕೆಲವು ಸೇವೆಗಳನ್ನು ಹೊರಗುತ್ತಿಗೆ ನೀಡಲು ಸಾಧ್ಯವೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಂದಾಗಿದೆ.

ವೇತನ ಪರಿಷ್ಕರಣೆ ಕುರಿತಂತೆ ತನ್ನ ಕೆಲಸ ಆರಂಭಿಸಿರುವ ಆರನೇ ವೇತನ ಆಯೋಗ ಈ ಸಂಬಂಧ ಪ್ರಶ್ನಾವಳಿಗಳನ್ನು ಸಿದ್ಧಪಡಿಸಿದ್ದು, ಈ ಪೈಕಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳಿಗಾಗಿ ಸಿದ್ಧಪಡಿಸಿರುವ ಪ್ರಶ್ನೆಗಳಲ್ಲಿ ಸರ್ಕಾರಿ ನೌಕರರ ಹುದ್ದೆಗಳನ್ನು ಕಡಿಮೆ ಮಾಡುವುದು ಮತ್ತು ಇಲಾಖೆಯ ಕೆಲಸಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಕೊಡುವ ಬಗ್ಗೆ ಮಾಹಿತಿ ಕೇಳಲಾಗಿದೆ.

ನಿಮ್ಮ ಇಲಾಖೆಯಲ್ಲಿರುವ ವಿವಿಧ ವರ್ಗದ ಹುದ್ದೆಗಳನ್ನು ವಿಲೀನಗೊಳಿಸುವ ಅವಶ್ಯಕತೆಯಿದೆ ಎಂದು ತಾವು ಭಾವಿಸುವಿರಾ? ಹಾಗಿದ್ದಲ್ಲಿ, ಹುದ್ದೆಗಳ ಮತ್ತು ಅವುಗಳ ಕಾರ್ಯಸ್ವರೂಪದ ವಿವರಗಳೊಂದಿಗೆ ನಿಮ್ಮ ಅಭಿಪ್ರಾಯ ನೀಡಬೇಕು. ಅಲ್ಲದೆ, ನಿಮ್ಮ ದೃಷ್ಟಿಯಲ್ಲಿ ಇಲಾಖೆಯ ಕಾರ್ಯಕ್ಷಮತೆ ಮತ್ತು ಯೋಜನೆಗಳ ಅನುಷ್ಠಾನಗಳಿಗೆ ಯಾವುದೇ ರೀತಿಯ ಪ್ರತಿಕೂಲ ಪರಿಣಾಮ ಬೀರದಂತೆ ವಿವಿಧ ಹಂತದ ಹುದ್ದೆಗಳಲ್ಲಿನ ಹಾಲಿ ಇರುವ ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸಲು ಸಾಧ್ಯವಿದೆಯೇ ಎಂಬ ಪ್ರಶ್ನೆಯನ್ನು ಅಧಿಕಾರಿಗಳಿಗೆ ಕೇಳಲಾಗಿದೆ.

ಜತೆಗೆ ಸೇವಾ ಗುತ್ತಿಗೆ ವಿಚಾರವನ್ನೂ ಪ್ರಸ್ತಾಪಿಸಲಾಗಿದ್ದು, ನಿಮ್ಮ ಇಲಾಖೆಯ ಯಾವ ಚಟುವಟಿಕೆಗಳನ್ನು ಸೇವಾ ಗುತ್ತಿಗೆ ಮುಂತಾದ ವಿಧಾನಗಳಿಂದ ನಿರ್ವಹಿಸಬಹುದು? ಇದರಿಂದ ಸಾಧಿಸಬಹುದಾದ ಉಳಿತಾಯದ ಅಥವಾ ಇತರ ಅನುಕೂಲಗಳನ್ನು ವಿವರಿಸಬೇಕು ಎಂದು ಕೋರಲಾಗಿದೆ. ವೇತನ ಪರಿಷ್ಕಣೆಗೆ ಸಂಬಂಧಿಸಿದಂತೆ ಆಯೋಗವು ತನ್ನ ಶಿಫಾರಸುಗಳನ್ನು ಮಾಡುವಾಗ ರಾಜ್ಯದ ಸಂಪನ್ಮೂಲ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು, ಯೋಜನೆಗಳ ಕುರಿತಾಗಿ ಸರ್ಕಾರಕ್ಕಿರುವ ಹೊಣೆಗಳು, ಶಾಸನಬದ್ಧ ಮತ್ತು ಕ್ರಮಬದ್ಧ ಕೆಲಸಗಳು, ಋಣಸೇವಾ ನಿರ್ವಹಣೆಗಳು, ಇತರೆ ಅಭಿವೃದ್ಧಿಯೇತರ ಕಾರ್ಯಗಳು, ವಿತ್ತೀಯ ಹೊಣೆಗಾರಿಕೆ ಅಧಿನಿಯಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸರ್ಕಾರ ನಿಬಂಧನೆ ವಿಧಿಸಿದೆ. ಈ ರೀತಿಯ ನಿಬಂಧನೆ ಇರುವಾಗ ಹಾಲಿ ಇರುವ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಬೇಕಾದರೆ ಹುದ್ದೆಗಳ ಕಡಿತ ಅಥವಾ ಹೊರಗುತ್ತಿಗೆ ಪದ್ಧತಿ ಹೆಚ್ಚಿಸುವ ನಿರ್ಧಾರ ಕೈಗೊಳ್ಳಬಹುದು ಎಂಬ ಅನುಮಾನ ಕಾಡುತ್ತಿದೆ.

ವೇತನ ಆಯೋಗವು ವರದಿ ನೀಡುವಾಗ, ಸರ್ಕಾರಿ ನೌಕರರ ವೇತನ ಹೆಚ್ಚಳದ ಜತೆಗೆ ಆಡಳಿತ ಸುಧಾರಣೆ ಬಗ್ಗೆಯೂ ಶಿಫಾರಸುಗಳನ್ನು ಮಾಡುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ಬೊಕ್ಕಸಕ್ಕೆ ಆಗುವ ಹೊರೆ ತಪ್ಪಿಸಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆಯೂ ಗಮನಹರಿಸುತ್ತದೆ. ಆ ನಿಟ್ಟಿನಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿರಬಹುದು. ಅಂತಿಮವಾಗಿ ಇಲಾಖಾ ಮುಖ್ಯಸ್ಥರು ನೀಡುವ ವರದಿ ಆಧರಿಸಿ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಹೀಗಾಗಿ ಹುದ್ದೆಗಳ ಕಡಿತ, ಹೊರಗುತ್ತಿಗೆ ವಿಚಾರದಲ್ಲಿ ಈಗ ಏನೂ ಹೇಳಲು ಸಾಧ್ಯವಿಲ್ಲ.
– ಬಿ.ಪಿ.ಮಂಜೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.