40 ಅಂಶದ “ಬೆಂಗಳೂರು ಡಿಕ್ಲರೇಷನ್‌’


Team Udayavani, Jul 24, 2017, 7:25 AM IST

siddaramaiah.gif

ಬೆಂಗಳೂರು: ಎಸ್‌ಸಿ-ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಹಾಗೂ ಮಹಿಳೆಯರಿಗೆ ಇಂಗ್ಲಿಷ್‌ ಶಿಕ್ಷಣ ನೀಡುವುದು, ಜಾತಿ ಮತ್ತು ಸಾಮಾಜಿಕ ಗಣತಿ ಶೀಘ್ರ ಬಿಡುಗಡೆ ಮಾಡುವುದು, ದಲಿತ ಸಮುದಾಯದ ಎಲ್ಲ ಒಳ ಸಮುದಾಯಗಳಿಗೆ ಸಮಾನವಾಗಿ ಒಳ ಮೀಸಲಾತಿ ಕಲ್ಪಿಸುವುದು, ದಲಿತರಿಗೆ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀಡುವುದು ಸೇರಿ 40 ಅಂಶದ “ಬೆಂಗಳೂರು ಡಿಕ್ಲರೇಷನ್‌’ ಹೆಸರಿನಲ್ಲಿ ಡಾ.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ  ನಿರ್ಣಯಗಳನ್ನು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪವಾಚಿಸಿದರು.

ಪ್ರಮುಖ ಅಂಶಗಳು:
*ಎಸ್ಸಿ, ಎಸ್ಟಿ ಸಮುದಾಯದ ಭೂ ಒಡೆತನವನ್ನು ಖಾತ್ರಿ ಪಡಿಸಲು ಹೊಸ ಕಾನೂನು ಹಾಗೂ ಅವುಗಳ ಕಠಿಣ ಜಾರಿ ಆಗಬೇಕು.
*ಎಸ್ಟಿ ಸಮುದಾಯದಿಂದ ಇತರರು ಪಡೆದಿರುವ ಜಮೀನನ್ನು ಹಿಂಪಡೆಯಲು ಕ್ರಮ ವಹಿಸಬೇಕು.
*ನವೋದಯ ವಿದ್ಯಾಲಯ ಮಾದರಿಯಲ್ಲಿ ಎಸ್ಸಿ, ಎಸ್‌ಟಿ ಸಮುದಾಯಗಳಿಗೆ ಶಾಲೆ ನಿರ್ಮಿಸಬೇಕು.
*ಎಸ್ಸಿ, ಎಸ್ಟಿ ಸಮುದಾಯಗಳಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ನೀಡಬೇಕು.
*ಎಸ್ಸಿ, ಎಸ್ಟಿ ಸಮುದಾಯಗಳಿಗೆ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಬಡ್ತಿ ಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು.
*ಮಾಧ್ಯಮಗಳ ಮೇಲಿನ ಹಾಗೂ ಪತ್ರಕರ್ತರ ಮೇಲಿನ ದಾಳಿ ತಡೆಯಲು ಕಠಿಣ ಕಾನೂನು ಜಾರಿಯಾಗಬೇಕು.
*ಮಾಧ್ಯಮ ಸಂಸ್ಥೆಗಳಲ್ಲಿ ಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳ ಪ್ರಾತಿನಿಧ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
*ಕರ್ನಾಟಕದಲ್ಲಿ 50 ಲಕ್ಷ ರೂ.ವರೆಗಿನ ಟೆಂಡರ್ನಲ್ಲಿ ದಲಿತರಿಗೆ ನೀಡಿರುವಂತೆ ದೇಶಾದ್ಯಂತ 100 ಲಕ್ಷದ ವರೆಗಿನ ಕಾಮಗಾರಿಯಲ್ಲಿ ಮೀಸಲಾತಿ ನೀಡಬೇಕು.
*ಕರ್ನಾಟಕದಲ್ಲಿ ಜಾರಿಗೆ ತಂದಿರುವಂತೆ ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು.
*ಎಸ್ಸಿ, ಎಸ್ಟಿ ಗಳಿಗೆ ಭೂಮಿ ಸುರಕ್ಷತೆ ನೀಡಲು ಲ್ಯಾಂಡ್‌ ಬ್ಯಾಂಕ್‌ ಮಾಡಬೇಕು.
*ಹಿಂಸೆಗಳಲ್ಲಿ ತೊಡಗುವವರ ವಿರುದ್ಧ ಮತ, ಜಾತಿ ಭೇದವಿಲ್ಲದೆ ಕ್ರಮ ಕೈಗೊಳ್ಳಬೇಕು.
*ಪೊಲೀಸ್‌ ವ್ಯವಸ್ಥೆ ರಾಜಕೀಯದಿಂದ ಸಂಪೂರ್ಣ ಮುಕ್ತವಾಗಿಸಿ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕು.
*ರಾಜಕೀಯ ಪಕ್ಷಗಳು ಸಂವಿಧಾನದ ಅಂಶಗಳನ್ನು ಎತ್ತಿ ಹಿಡಿಯಲು ಚುನಾವಣಾ ಆಯೋಗಕ್ಕೆ ವಿಸ್ತೃತ ನಿಯಂತ್ರಣ ಶಕ್ತಿ ನೀಡಬೇಕು.
*ಚುನಾವಣಾ ಸ್ಪರ್ಧೆಯಲ್ಲಿ ಮೀಸಲಾತಿಗೆ ಸಾಂವಿಧಾನಿಕ ಮಾನ್ಯತೆ ನೀಡಬೇಕು.
*ಉನ್ನತ ನ್ಯಾಯಾಂಗ ಹು¨ªೆಗಳಲ್ಲಿ ಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳು ಸೂಕ್ತ ಪ್ರಾತಿನಿಧ್ಯ ಗಳಿಸಲು ಕ್ರಮ ಕೈಗೊಳ್ಳಬೇಕು.
*ಎಸ್ಸಿ, ಎಸ್ಟಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆಯರಿಗೆ ಸಮಾನ ಅವಕಾಶ ಸಿಗುವಂತೆ ಕ್ರಮ ಕೈಗೊಳ್ಳಲು ಸಮಾನ ಅವಕಾಶಗಳ ಆಯೋಗವನ್ನು ಸ್ಥಾಪಿಸಬೇಕು.
*ಶಾಲಾ ಪಠ್ಯದಲ್ಲಿ ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಸಾವಿತ್ರಿ ಬಾ ಪುಲೆ ಅವರ ಕುರಿತು ಪಠ್ಯ ಅಳವಡಿಸಬೇಕು.
*ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿಗಳಿಗೆ ಮೀಸಲಾತಿ ನೀಡಬೇಕು.
*ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದ ಭೂಮಿ ಸಂಪೂರ್ಣ ನೀರಾವರಿ ವ್ಯಾಪ್ತಿಗೆ ಒಳಪಡಿಸಬೇಕು.
*ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರನ್ನು ಹೊರಗುತ್ತಿಗೆ ಬದಲಿಗೆ ಖಾಯಂ ಮಾಡಬೇಕು.
*ಜಾತಿ ಆಧಾರಿತ ಉದ್ಯಮಗಳನ್ನು ಆಧುನಿಕ ಕಾಲಕ್ಕೆ ಅನುಗುಣವಾಗಿ ಬಲಪಡಿಸಬೇಕು.
*ಜಾತಿ ಮತ್ತು ಸಾಮಾಜಿಕ ಜನಗಣತಿಯನ್ನು ಬಹಿರಂಗಪಡಿಸಬೇಕು.
*ಅನ್ನದಾತರ ಆದಾಯ ಖಾತ್ರಿಪಡಿಸಲು ರೈತರ ಆದಾಯ ಆಯೋಗ ಸ್ಥಾಪಿಸಬೇಕು.
*ರಾಜ್ಯ ಜಿಡಿಪಿಯ ಶೇ.6 ಪಾಲು ಶಿಕ್ಷಣ,ಶೇ.3 ಪಾಲು ಆರೋಗ್ಯಕ್ಕೆ ಮೀಸಲಿಡಬೇಕು.
*ಸರ್ಕಾರಿ ಯೋಜನೆಗಳ ಸಾಮಾಜಿಕ ಮೌಲ್ಯಮಾಪನ ನಡೆಯಬೇಕು.
*ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಬೇಕು.
*ಅಸಂಘಟಿತ ಕಾರ್ಮಿಕರಿಗೆ ಜೀವಿಸಲು ವೇತನ(ಲಿವಿಂಗ್‌ ವೇಜ…)ನೀಡಬೇಕು.
*ಎಲ್ಲ ಖಾಸಗಿ ವಸತಿ ಬಡಾವಣೆಗಳಲ್ಲಿ  ಶೇ.20ನ್ನು ಕಡಿಮೆ ದರದ ಮನೆಗಳನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಿಡಬೇಕು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.