ಪ್ರತ್ಯೇಕ ಧರ್ಮಕ್ಕಾಗಿ ಈಗ ಮಾನ್ಯತೆ ಅಸ್ತ್ರ​​​​​​​; ರೆಡ್ಡಿ ಪ್ರವಾಸ


Team Udayavani, Jul 25, 2017, 6:00 AM IST

dfghjkl;.jpg

ಬೆಂಗಳೂರು: ಲಿಂಗಾಯತ ಸಮುದಾಯದ ನಾಯಕರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ರಾಜಕೀಯವಾಗಿ “ಟಾಂಗ್‌’ ನೀಡಲು ಹೊರಟಿರುವ ಕಾಂಗ್ರೆಸ್‌, ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ “ಅಸ್ತ್ರ’ ಪ್ರಯೋಗಕ್ಕೆ  ಮುಂದಾಗಿದೆ.

ಅಷ್ಟೇ ಅಲ್ಲ, ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿದರೆ ಮುಸ್ಲಿಂ, ಸಿಖ್‌, ಬೌದ್ಧ, ಜೈನರಂತೆ ಅಲ್ಪಸಂಖ್ಯಾತರ ಸ್ಥಾನಮಾನ ಸಿಗುತ್ತದೆ. ಸರ್ಕಾರದ ಸವಲತ್ತು, ಮೀಸಲಾತಿಯೂ ಲಭ್ಯವಾಗುತ್ತದೆ ಎಂಬ “ಆಸೆ’ ತೋರಿಸಲಾಗುತ್ತಿದೆ.

ಇದರ ಮುಂದಾಳತ್ವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ವಹಿಸಿಕೊಂಡಿದ್ದು, ಎಸ್‌.ಎಸ್‌.ಮಲ್ಲಿಕಾರ್ಜುನ್‌, ಡಾ.ಶರಣ್‌ಪ್ರಕಾಶ್‌ ಪಾಟೀಲ್‌, ವಿನಯ ಕುಲಕರ್ಣಿ, ಈಶ್ವರ್‌ಖಂಡ್ರೆ ಅವರನ್ನು ಜತೆಗೂಡಿಸಿಕೊಂಡು ರಾಜ್ಯಪ್ರವಾಸಕ್ಕೂ ರೂಪು-ರೇಷೆ ಸಿದ್ಧವಾಗಿದೆ.ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ಆಗ್ರಹಿಸಿ ಆಗಸ್ಟ್‌ 22 ರಂದು ಬೆಳಗಾವಿ ಚಲೋ, ಸೆಪ್ಟೆಂಬರ್‌ 3 ಕ್ಕೆ ಲಾತೂರ್‌ ಚಲೋ ಸಹ ಹಮ್ಮಿಕೊಳ್ಳಲಾಗಿದೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವರಾಜ ರಾಯರೆಡ್ಡಿ, ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಹಿಂದುತ್ವ ವ್ಯಾಪ್ತಿಗೆ ಲಿಂಗಾಯತ ಸಮುದಾಯ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರೊಬ್ಬ ಆರ್‌ಎಸ್‌ಎಸ್‌ ನಾಯಕರಾಗಿ ಮನುಸ್ಮತಿ ಒಪ್ಪಿ ಅದನ್ನೇ ಪ್ರತಿಪಾದಿಸುತ್ತಾರೆ. ಆದರೆ, ವೀರಶೈವ-ಲಿಂಗಾಯತರ ಆಚಾರ ವಿಚಾರಕ್ಕೂ, ಹಿಂದುತ್ವಕ್ಕೂ ವ್ಯತ್ಯಾಸವಿದೆ. ಹೀಗಾಗಿ, ಈ ಬಗ್ಗೆ ಜಾಗೃತಿ ಮೂಡಿಸಲು ನಾವು ನಾಲ್ವರು ಸಚಿವರು ರಾಜ್ಯ ಪ್ರವಾಸ ಕೈಗೊಳ್ಳುತ್ತೇವೆ ಎಂದು ಹೇಳಿದರು.

ವೀರಶೈವ ಮಹಾಸಭಾ ಹಾಗೂ ಹಲವಾರು ಮಠಾಧೀಶರು ನಮ್ಮ ಜತೆಗೂಡಲಿದ್ದಾರೆ. ಇದೊಂದು ಜಾಗೃತಿ ಮೂಡಿಸುವ ವಿಚಾರವೂ ಆಗಲಿದೆ ಎಂದು ತಿಳಿಸಿದರು.

ಖಾಸಗಿ ಪ್ರವಾಸ: ರಾಜ್ಯ ಸರ್ಕಾರದ ಸಚಿವರಾಗಿ ಒಂದು ಸಮುದಾಯದ ಪರ ಪ್ರವಾಸ ಮಾಡುವುದು ಸರಿಯೇ ಎಂದಾಗ ನಾವು ಸಚಿವರಾಗಿ ಅಲ್ಲ ಸಮುದಾಯದ ನಾಯಕರಾಗಿ ವೀರಶೈವ ಮಹಾಸಭಾದ ಮುಂದಾಳತ್ವದಲ್ಲೇ ಖಾಸಗಿಯಾಗಿ ಪ್ರವಾಸ ಕೈಗೊಳ್ಳುತ್ತೇವೆ ಎಂದು ತೇಲಿಸಿದರು.

ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ದೊರೆತರೆ ಅಲ್ಪಸಂಖ್ಯಾತ ಸ್ಥಾನಮಾನವೂ ದೊರೆಯುತ್ತದೆ. ಇದು ಒಂದು ರೀತಿಯಲ್ಲಿ ಸಾಮಾಜಿಕ ನ್ಯಾಯದ ಪ್ರತಿಪಾದನೆ ಹಾಗೂ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ವ್ಯಾಖ್ಯಾನಿಸಿದರು.

ರಂಭಾಪುರಿ ಶ್ರೀಗಳು ಪ್ರತ್ಯೇಕ ಧರ್ಮದ ಮಾನ್ಯತೆಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರಶ್ನಿಸಿದಾಗ, ವಿಚಾರ ಗೊತ್ತಿಲ್ಲದೆ ಮಾತನಾಡುತ್ತಿದ್ದಾರೆ. ಹೀಗಾಗಿ, ನಾವು ಪ್ರವಾಸ ಕೈಗೊಂಡು ಎಲ್ಲರ ಜತೆ ಚರ್ಚೆ ಮಾಡಿ ಸಹಮತ ಮೂಡಿಸುತ್ತೇವೆ ಎಂದು ಹೇಳಿದರು.

ಹಿಂದೂಧರ್ಮ ಸ್ಥಾಪನೆಯ ಮೂಲ ಗೊತ್ತಿಲ್ಲ
ಹಿಂದೂಧರ್ಮ ಸ್ಥಾಪನೆಯ ಮೂಲ ಯಾರು ಎಂಬುದೇ ಗೊತ್ತಿಲ್ಲ ಎಂದು ಪ್ರತಿಪಾದಿಸಿದ ಬಸವರಾಜ ರಾಯರೆಡ್ಡಿ,  ಇಸ್ಲಾಂ, ಕ್ರಿಶ್ಚಿಯನ್‌, ಸಿಖ್‌, ಬೌದ್ಧ, ಜೈನ ಹೀಗೆ ಎಲ್ಲ ಧರ್ಮಗಳ ಸ್ಥಾಪನೆಯ ಮೂಲ ಗೊತ್ತಿದೆ. ಹಿಂದೂಧರ್ಮ ಸ್ಥಾಪಿಸಿದ್ದು ಯಾರು ಎಂಬುದೇ ಗೊತ್ತಿಲ್ಲ. ಹಿಂದೂಧರ್ಮದ ಭಾಗ ಎಂಬ ಹೆಸರಿನಲ್ಲಿ ಹಿಂದುತ್ವದಡಿ ಲಿಂಗಾಯತರನ್ನು ಸೆಳೆಯುವ ಕೆಲಸ ಯಡಿಯೂರಪ್ಪ ಮಾಡುತ್ತಿದ್ದಾರೆ.  ಅವರಿಗೆ ಲಿಂಗಾಯತರ ವಿಚಾರವೇ ಗೊತ್ತಿಲ್ಲ. ವೀರಶೈವ-ಲಿಂಗಾಯತ ಸಮಾಜ ವಿಚಾರದಲ್ಲಿ ಪ್ರತ್ಯೇಕ ಧರ್ಮವಾಗಿ ಗುರುತಿಸಬೇಕು ಎಂಬ ಚರ್ಚೆಯಿದೆ. ಆದರೆ, ಇದರ ಬಗ್ಗೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ,  ಈ ರೀತಿಯ ಬೇಡಿಕೆ ಇಟ್ಟಿರುವುದು ಸಮುದಾಯದ ಮುಖಂಡರ ನಿಯೋಗ. ಅದರಲ್ಲಿ ನಾನೂ ಇದ್ದೆ. ಯಡಿಯೂರಪ್ಪ ಇದನ್ನು ಅರ್ಥಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಎಂದೂ ಜಾತಿ ಮಾಡಿಲ್ಲ. ಮೂರು ದಶಕಗಳಿಂದ ಅವರನ್ನು ಬಲ್ಲೆ, ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು ಎಂದು ಹೇಳಿದರು.

*ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಹಾಕುವುದಕ್ಕೂ ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಕೇಳುತ್ತಿರುವುದಕ್ಕೂ, ಮುಂದಿನ ವಿಧಾನಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ವಿಚಾರದ ಬಗ್ಗೆ ಜಾಗೃತಿ ಮೂಡಿಸುವುದಷ್ಟೇ ನಮ್ಮ ಉದ್ದೇಶ. ಲಿಂಗಾಯತ ಸಮುದಾಯ ಒಂದು ಪಕ್ಷದ ಆಸ್ತಿಯೂ ಅಲ್ಲ.
-ಬಸವರಾಜ ರಾಯರೆಡ್ಡಿ, ಉನ್ನತ ಶಿಕ್ಷಣ ಸಚಿವ

ಟಾಪ್ ನ್ಯೂಸ್

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.