ರಮಾನಾಥ ರೈ ಅವರಿಗೆ ರಾಜ್ಯ ಗೃಹ ಸಚಿವ ಪಟ್ಟ
Team Udayavani, Jul 25, 2017, 10:59 PM IST
ಬೆಂಗಳೂರು: ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿರುವ ಡಾ.ಜಿ. ಪರಮೇಶ್ವರ್ ಅವರು ತೆರವುಗೊಳಿಸಿದ್ದ ಗೃಹ ಖಾತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅರಣ್ಯ ಸಚಿವ ರಮಾನಾಥ ರೈ ಅವರಿಗೆ ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮಂಗಳವಾರ ಈ ಸಂಬಂಧ ಸಚಿವ ರಮಾನಾಥ ರೈ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಗೃಹ ಖಾತೆಯ ಜವಾಬ್ದಾರಿ ನೀಡುವ ಕುರಿತಂತೆ ಅವರೊಂದಿಗೆ ಚರ್ಚಿಸಿದರು. ಅಷ್ಟೇ ಅಲ್ಲ ಹೈಕಮಾಂಡ್ ಸೂಚನೆಯನ್ನೂ ರೈ ಅವರಿಗೆ ಮನವರಿಕೆ ಮಾಡಿಕೊಟ್ಟರು. ಚರ್ಚೆಯ ಬಳಿಕ ರಮಾನಾಥ ರೈ ಗೃಹ ಖಾತೆಯ ಜವಾಬ್ದಾರಿ ಹೊರಲು ಸಹಮತಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.