ಬಿಸಿಲೂರಲ್ಲಿ ದೇವದಾಸಿಯರಿಗೆ ಪ್ರತ್ಯೇಕ ಸಹಕಾರ ಸಂಘ


Team Udayavani, Jul 26, 2017, 7:20 AM IST

devadasi.jpg

ರಾಯಚೂರು: ಸಮಾಜದಿಂದ ಅವಗಣನೆಗೆ ತುತ್ತಾದ ದೇವದಾಸಿಯರ ಕಲ್ಯಾಣಕ್ಕೆ ಸರ್ಕಾರ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಆದರೆ, ಜಿಲ್ಲೆಯಲ್ಲಿ ಮಾತ್ರ ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಪ್ರತ್ಯೇಕ ಸಹಕಾರ ಸಂಘಗಳನ್ನು
ಆರಂಭಿಸುವ ಮೂಲಕ ದೇವದಾಸಿಯರ ಅಭ್ಯುದಯಕ್ಕೆ ವಿಶೇಷ ಒತ್ತು ನೀಡಲಾಗಿದೆ. ಸಮಾಜದಿಂದ ತಿರಸ್ಕೃತಗೊಂಡ
ದೇವದಾಸಿಯರು ಚಿಂತಾಜನಕ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಸರ್ಕಾರ ನಿವೇಶನ, ಎರಡು ಎಕರೆ ಜಮೀನು, ಮಾಸಾಶನ ಸೇರಿ ವಿವಿಧ ಸೌಕರ್ಯ ನೀಡುತ್ತಿದ್ದರೂ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಇಂಥ ವೇಳೆ ಅವರ ನೆರವಿಗೆ ಸಹಕಾರ ಸಂಘಗಳು ಧಾವಿಸಿದ್ದು, ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕರಿಸುತ್ತಿವೆ.

ಜಿಲ್ಲೆಯಲ್ಲಿ ಕಳೆದ ವರ್ಷವೇ ಎರಡು ಸಂಘಗಳು ಆರಂಭಗೊಂಡಿದ್ದು, ಈ ವರ್ಷ ಇನ್ನೆರಡು ಸಂಘಗಳ ಆರಂಭಕ್ಕೆ ಪ್ರಕ್ರಿಯೆ ನಡೆದಿದೆ. ಸಹಕಾರ ಸಂಘಗಳ ಉಪನಿಬಂಧಕರು ಇಂಥ ಹೊಸ ಯೋಜನೆ ಆರಂಭಿಸುವ ಮುಖ್ಯ ಪಾತ್ರ ವಹಿಸಿದ್ದಾರೆ. ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ಇದ್ದು, ಸಹಕಾರ ಸಂಘಗಳ ನಿಬಂಧಕರ ಕಚೇರಿಯಿಂದ ಸಂಘದ ಎಲ್ಲ ಸದಸ್ಯರ ಷೇರಿನ ಮೊತ್ತ 500 ರೂ. ಪಾವತಿಸಲಾಗಿದೆ. ಉಳಿದಂತೆ ಸದಸ್ಯರು ಹಣ ಜಮಾ ಮಾಡಿ ಸಂಘಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಸರ್ಕಾರದಿಂದಲೇ ಷೇರು ಪಾವತಿ: 2017ರ ಮಾರ್ಚ್‌ನಲ್ಲಿ ಸಿಂಧನೂರು ತಾಲೂಕಿನಲ್ಲಿ ಜ್ಞಾನಜ್ಯೋತಿ, ಮಾನ್ವಿ ತಾಲೂಕಿನಲ್ಲಿ ಹೊಂಬೆಳಕು ಹೆಸರಿನಲ್ಲಿ ಸಂಘಗಳನ್ನು ಸ್ಥಾಪಿಸಲಾಯಿತು. ಸಿಂಧನೂರಿನಲ್ಲಿ 250 ಸದಸ್ಯರಿದ್ದು, ಮಾನ್ವಿಯಲ್ಲಿ 300 ಸದಸ್ಯರಿದ್ದಾರೆ. ಲಿಂಗಸುಗೂರು ಮತ್ತು ರಾಯಚೂರಿನಲ್ಲೂ ಸಂಘ ಸ್ಥಾಪಿಸಲು ಸರ್ಕಾರಕ್ಕೆ
ಪ್ರಸ್ತಾವನೆ ಸಲ್ಲಿಸಿದ್ದು, ಪರವಾನಗಿ ಸಿಕ್ಕಿದೆ. ರಾಯಚೂರಿನಲ್ಲಿ 350, ಲಿಂಗಸುಗೂರಿನಲ್ಲಿ 80 ಸದಸ್ಯರನ್ನೊಳಗೊಂಡ ಸಂಘಗಳ ನೋಂದಣಿ ಕಾರ್ಯ ಇನ್ನೆರಡು ತಿಂಗಳಲ್ಲಿ ಮುಗಿಯಲಿದೆ. ಎಲ್ಲ ಸಂಘಗಳ ಒಟ್ಟು 980 ಸದಸ್ಯರಿಗೆ ತಲಾ
500 ರೂ.ನಂತೆ 4.9 ಲಕ್ಷ ರೂ. ಷೇರು ಹಣವನ್ನು ಸರ್ಕಾರವೇ ಪಾವತಿಸಲಿದೆ.

ದೇವದಾಸಿಯರದ್ದೇ ಪಾರುಪತ್ಯ:
ದೇವದಾಸಿಯರಿಗೆ ಸಂಘದಲ್ಲಿ ಹೆಚ್ಚಿನ ಅಧಿಕಾರ ನೀಡಲಾಗಿದೆ. ಸಂಘದ ಸಂಪೂರ್ಣ ಹೊಣೆಯನ್ನು ಅವರೇ ನಿರ್ವಹಿಸಬೇಕು. ಹಿಂದುಳಿದ ವರ್ಗಗಳಲ್ಲದೇ ಬೇರೆ ಸಮುದಾಯದ ಮಹಿಳೆಯರು ಸದಸ್ಯತ್ವ ಪಡೆಯಬಹುದಾದರೂ, ಹೆಚ್ಚಿನ ಅಧಿಕಾರ ಮಾತ್ರ ಹಿಂದುಳಿದ ವರ್ಗಗಳಿಗೆ ಸಿಗಲಿದೆ. ಹೆಚ್ಚು ತುಳಿತಕ್ಕೆ ಒಳಗಾದ ಸಮಾಜ ಎಂಬ ಕಾರಣಕ್ಕೆ ಅವರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತಿದೆ. ಸಂಘದಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲು ಬೇಕಾದ ಸಂಖ್ಯಾಬಲ ದೇವದಾಸಿಯರದ್ದಾಗಿರುತ್ತದೆ.

ಹೇಗೆ ಕಾರ್ಯ ನಿರ್ವಹಣೆ?: ಸಹಕಾರ ಸಂಘಗಳ ಉಪನಿಬಂಧಕರು ಸಂಘ ರಚಿಸಿ, ನೋಂದಣಿ ಮಾಡಿಸುವರು. ಸರ್ಕಾರ ಸದಸ್ಯರ ಸಂಖ್ಯೆಗನುಗುಣವಾಗಿ ಷೇರು ಹಣ ಸಂದಾಯ ಮಾಡಲಿದೆ. ಸದಸ್ಯರು ಒಗ್ಗೂಡಿ ಕಚೇರಿ ಸ್ಥಾಪಿಸಬೇಕು. ಒಮ್ಮತದಿಂದ ಒಬ್ಬ ಕಾರ್ಯದರ್ಶಿಯನ್ನು ನೇಮಿಸಬೇಕು. ಮೂರು ತಿಂಗಳಿಗೊಮ್ಮೆ ಲೆಕ್ಕಪತ್ರ ಪರಿಶೋಧನೆ ಮಾಡಿ ಇಲಾಖೆಗೆ ವಿವರ ನೀಡಬೇಕು. ಆದ್ಯತಾನುಸಾರ ಸಾಲ ಸೌಲಭ್ಯಗಳನ್ನು ಪಡೆದು ಕಾಲಕಾಲಕ್ಕೆ
ಮರುಪಾವತಿಯಾಗುವಂತೆ ನೋಡಿಕೊಳ್ಳುವ ಹೊಣೆ ಸಂಘದ ಆಡಳಿತ ಮಂಡಳಿಯದ್ದು. ಆಡಳಿತ ಮಂಡಳಿಯನ್ನು ಕೂಡ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.