ಧರ್ಮ ರಾಜಕೀಯದ ಹಿಂದೆ ಮತಬೇಟೆ ತಂತ್ರ!


Team Udayavani, Jul 26, 2017, 7:40 AM IST

siddu.jpg

ಬೆಂಗಳೂರು: ಜಾತಿ ಜನಗಣತಿ, ಒಳ ಮೀಸಲಾತಿ ಹಾಗೂ ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆಯ ಸೂಕ್ಷ್ಮ ವಿಚಾರ ಮುಂದಿಟ್ಟು ಆಡಳಿತಾರೂಢ ಕಾಂಗ್ರೆಸ್‌ ಅದರಲ್ಲೂ ಸಿಎಂ ಸಿದ್ದರಾಮಯ್ಯ “ಜೇನುಗೂಡಿ’ಗೆ ಕಲ್ಲು ಹಾಕಿದ್ದು ಇದರ ಹಿಂದೆ ಪಕ್ಕಾ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವಿದೆ ಎಂಬ ವಾಖ್ಯಾನಗಳು
ಕೇಳಿಬರುತ್ತಿವೆ.

ಮೂರೂ ಸೂಕ್ಷ್ಮ ವಿಚಾರಗಳಾಗಿದ್ದು, ಮೇಲ್ನೋಟಕ್ಕೆ ಈ ಎಲ್ಲ ವಿಚಾರಗಳು ಮುಂದಿನ ವಿಧಾನಸಭೆ ಚುನಾವಣೆ ಕೇಂದ್ರೀಕೃತವಾಗಿರುವುದು ಹೌದು. ಯಾಕೆಂದರೆ, ಈ ವಿಚಾರದಲ್ಲಿ ಪರ-ವಿರೋಧ ಅಥವಾ ಬೇಕು-ಬೇಡಗಳ ಚರ್ಚೆ, ಹೋರಾಟದಿಂದ ವಿವಾದದ ಸ್ವರೂಪ ಪಡೆದು ಅಂತಿಮವಾಗಿ ಪ್ರಬಲ ಸಮುದಾಯದ ಮತ ಒಂದೇ ಪಕ್ಷದತ್ತ ವಾಲದಂತಹ ಸ್ಥಿತಿ ನಿರ್ಮಾಣವಾಗುತ್ತದೆ.

ಇದರಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಲಾಭವಾಗದಿದ್ದರೂ ದೊಡ್ಡ ಮಟ್ಟದ ನಷ್ಟವಂತೂ ಆಗುವುದಿಲ್ಲ. ಆದರೆ, ಒಂದು ಪಕ್ಷದತ್ತ ಹೋಗುವ ಮತ ತಡೆಯುವ ಪ್ರಯತ್ನವಂತೂ ಫ‌ಲಿಸಬಹುದು. ಅದು ಪರೋಕ್ಷವಾಗಿ ಲಾಭವೇ ಎಂಬ ಲೆಕ್ಕಾಚಾರ ಇದರ ಹಿಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವೀರಶೈವ ಮಹಾಸಭಾ ಹಾಗೂ ಕೆಲವು ಲಿಂಗಾಯತ-ವೀರಶೈವ ಮಠಾಧೀಶರ ಬೆಂಬಲ ಪಡೆದು ಕಾಂಗ್ರೆಸ್‌ನಲ್ಲಿರುವ ಲಿಂಗಾಯತ ಸಮುದಾಯದ ಎಲ್ಲ ಸಚಿವರು -ಮುಖಂಡರನ್ನು ಇದಕ್ಕಾಗಿ ಹೋರಾಟಕ್ಕೆ ಸಜ್ಜುಗೊಳಿಸಿರುವುದರ ಹಿಂದೆ “ಮತಬೇಟೆಯ ರಣತಂತ್ರ’ವಿದೆ. ಇದಕ್ಕೆ ಹೈಕಮಾಂಡ್‌ ಶ್ರೀರಕ್ಷೆಯೂ ಇದೆ ಎಂದು ಹೇಳಲಾಗಿದೆ.

ಜಾತಿ ಜನಗಣತಿ ವಿಚಾರದಲ್ಲಿ ದೊಡ್ಡ ಚರ್ಚೆ ನಡೆದು, ಗಣತಿ ನಂತರ ವರದಿ ಬಿಡುಗಡೆ ಕುತೂಹಲ ಘಟ್ಟಕ್ಕೆ ತಂದು ನಿಲ್ಲಿಸಲಾಗಿದೆ. ವರದಿಯಲ್ಲಿ ಯಾವ್ಯಾವ ಸಮುದಾಯದ ಎಷ್ಟೆಷ್ಟು ಜನಸಂಖ್ಯೆ ಹೊಂದಿದೆ ಎಂಬ ಮಾಹಿತಿ ಇದೆ. ಅದು
ಬಿಡುಗಡೆಯಾದರೆ ಚುನಾವಣೆ ವರ್ಷವಾದ್ದರಿಂದ ಆ ವರದಿಯಲ್ಲಿನ ಅಂಕಿ-ಅಂಶಗಳ ಆಧಾರದಲ್ಲೇ ರಾಜಕೀಯ ಪ್ರಾತಿನಿಧ್ಯ (ಟಿಕೆಟ್‌ ಹಂಚಿಕೆ) ನಡೆಯಬೇಕು ಎಂಬ ಕೂಗು ಕೇಳಿಬರುವುದಂತೂ ಸಹಜ. ಈಗಾಗಲೇ ಹೆಚ್ಚು ಸವಲತ್ತು,
ಮೀಸಲು ಪಡೆಯುತ್ತಿರುವ ವರ್ಗದ ಪಾಲು ಕಡಿಮೆಯಾಗಲಿದೆ. ಅದು ಪರ-ವಿರೋಧ ಹೋರಾಟಕ್ಕೂ ಕಾರಣವಾಗಬಹುದು.

ಒಳ ಮೀಸಲಾತಿ ದಲಿತ ಸಮುದಾಯದಲ್ಲಿ ದಶಕಗಳಿಂದ ನಡೆಯುತ್ತಿರುವ ಚರ್ಚೆ. ಈ ಬಗ್ಗೆ ನ್ಯಾ. ಸದಾಶಿವ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಎಸ್‌ಸಿ ಪಟ್ಟಿಯಲ್ಲಿರುವ 101 ಪಂಗಡಗಳಿಗೆ ಒಳ ಮೀಸಲಾತಿ ಕಲ್ಪಿಸುವ
ಪ್ರಸ್ತಾವನೆಯ ಈ ವರದಿ ಒಪ್ಪಬಾರದು ಮತ್ತು ಒಪ್ಪಬೇಕೆಂಬ ವಿಚಾರದಲ್ಲೂ ಹೋರಾಟ ನಡೆಯುತ್ತಿದೆ. ಇದರ ಬಗ್ಗೆ ಸರ್ಕಾರ ಏನೇ ತೀರ್ಮಾನ ಕೈಗೊಂಡರೂ ಜೇನುಗೂಡಿಗೆ ಕಲ್ಲು ಎಸೆದಂತೆಯೇ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.