ಕುತೂಹಲ ಮೂಡಿಸಿದ ಬಿಜೆಪಿ ಮೌನ
Team Udayavani, Jul 26, 2017, 7:40 AM IST
ಬೆಂಗಳೂರು: ವೀರಶೈವ- ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂಬ ಪ್ರಸ್ತಾಪದ ಬಗ್ಗೆ
ರಾಜ್ಯಾದ್ಯಂತ ಗಂಭೀರ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ ಮುಖಂಡರು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿರುವುದು
ಕುತೂಹಲ ಮೂಡಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಪ್ರಸ್ತಾಪದಿಂದ ತಕ್ಷಣ ಪ್ರಚೋದನೆಗೆ ಒಳಗಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವುದಕ್ಕಿಂತ ಸದ್ಯದ ಮಟ್ಟಿಗೆ ಮೌನವನ್ನೇ ಮುಂದುವರಿಸಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯಿಂದ ಪಕ್ಷ ಯಾವುದೇ ರೀತಿಯಿಂದಲೂ ಪ್ರಚೋದನೆಗೆ ಒಳಗಾಗಬಾರದು. ಈ ಬಗ್ಗೆ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡದಿರಲು ಬಿಜೆಪಿ ಹಿರಿಯ ಮುಖಂಡರು ನಿರ್ಧರಿಸಿದ್ದಾರೆ. ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪ್ರಸ್ತಾಪಿಸಿರುವ ಈ ತಂತ್ರಕ್ಕೆ ತೆರೆಮರೆಯಲ್ಲೇ ಪ್ರತಿತಂತ್ರ ಹಣೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಮಾನ್ಯವಾಗಿ ಆಡಳಿತಾರೂಢ ಕಾಂಗ್ರೆಸ್ ಏನಾದರೂ ವಿವಾದಾತ್ಮಕ ವಿಚಾರ ಪ್ರಸ್ತಾಪಿಸಿದಾಗ ಬಿಜೆಪಿ ಮುಗಿ
ಬೀಳುತ್ತಿತ್ತು. ಆ ಪಕ್ಷದ ಮುಖಂಡರು ಪೈಪೋಟಿಗೆ ಬಿದ್ದವರಂತೆ ಪ್ರತಿಕ್ರಿಯೆ, ಪ್ರತ್ಯಾರೋಪ ಮಾಡುತ್ತಿದ್ದರು. ಆದರೆ, ವೀರಶೈವ- ಲಿಂಗಾಯಿತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ವಿಚಾರ ರಾಜ್ಯದಲ್ಲಿ ಸಂಚಲನ ಮೂಡಿಸಿ, ಪರ- ವಿರೋಧ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡದಿರುವುದು ಅಚ್ಚರಿ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ