ಬಡ್ತಿ ಮೀಸಲು ಪರಾಮರ್ಶೆಗೆ ಉಪ ಸಮಿತಿ
Team Udayavani, Jul 27, 2017, 7:50 AM IST
ಬೆಂಗಳೂರು: ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಬಡ್ತಿ ಮೀಸಲಾತಿ ವಿಚಾರದಲ್ಲಿ
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ನೀಡಿರುವ ವರದಿ ಒಪ್ಪಬೇಕೇ, ಬೇಡವೇ ಎಂಬ ಜಿಜ್ಞಾಸೆಯಲ್ಲಿರುವ ಸರ್ಕಾರ, ಪರಾಮರ್ಶೆಗಾಗಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಸಮಸ್ಯೆಯ ಪರಿಹಾರಕ್ಕಾಗಿ ಅಗತ್ಯವಾದರೆ ಸುಗ್ರೀವಾಜ್ಞೆ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಡ್ತಿ ಮೀಸಲಾತಿ ವಿಚಾರ ಸುದೀರ್ಘ ಚರ್ಚೆಗೊಳಗಾಗಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀಡಿರುವ ವರದಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಮುನ್ನ ಪರಾಮರ್ಶೆ ಮಾಡುವುದು ಅಗತ್ಯ ಎಂಬ ನಿರ್ಧಾರಕ್ಕೆ ಬರಲಾಯಿತು. ಬಡ್ತಿ ಮೀಸಲಾತಿ ಕುರಿತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವರದಿ ಜತೆಗೆ ನ್ಯಾ.ಠಾಕೂರ್ ಹಾಗೂ ಗೋಪಾಲಗೌಡರ ವರದಿ ಹಾಗೂ ಅಡ್ವೊಕೇಟ್ ಜನರಲ್ ವರದಿ ಸಹ ಪರಿಶೀಲಿಸಿ ನಂತರ ತೀರ್ಮಾನಕ್ಕೆ ಬರುವುದು. ತೀರಾ ಅನಿವಾರ್ಯ ಎಂದಾದರೆ ಸುಗ್ರೀವಾಜ್ಞೆ ಬಗ್ಗೆ ಯೋಚಿಸುವುದು. ಆದರೆ, ಕಾನೂನು ತಜ್ಞರ ಜತೆ ಆ ಬಗ್ಗೆ ಚರ್ಚಿಸಿ ಸಲಹೆ-ಅಭಿಪ್ರಾಯ ಪಡೆಯುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, “ಬಡ್ತಿ ಮೀಸಲಾತಿ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀಡಿರುವ ವರದಿ ಬಗ್ಗೆ ಪರಾಮರ್ಶೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಸಮಿತಿಯು ಆದಷ್ಟು ಬೇಗ ಪರಾಮರ್ಶೆ
ನಡೆಸಲಿದೆ’ ಎಂದು ಹೇಳಿದರು.
“ಆಗಸ್ಟ್ 9ರ ಒಳಗೆ ತೀರ್ಪು ಪಾಲನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಇದರ ನಡುವೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದೆ. ಆ ಅರ್ಜಿ ವಿಚಾರಣೆಗೆ ಬಂದಿಲ್ಲ. ಹೀಗಾಗಿ ಗಡುವಿನ ಒಳಗೆ ವಿಚಾರ ಇತ್ಯರ್ಥಕ್ಕ ಸರ್ಕಾರ ಪ್ರಯತ್ನಿಸಲಿದೆ’ ಎಂದು ತಿಳಿಸಿದರು.
ವರದಿಯಲ್ಲಿ ಏನಿದೆ? ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಸರ್ಕಾರಕ್ಕೆ ಕೊಟ್ಟಿರುವ ವರದಿಯಲ್ಲಿ ಹಿಂದುಳಿದಿರುವಿಕೆ ಮಾನದಂಡದಲ್ಲೇ ಬಡ್ತಿ ನೀಡಲಾಗಿದೆ. ಇದರಿಂದ ಕಾರ್ಯದಕ್ಷತೆಗೆ ಯಾವುದೇ ಹೊಡೆತ ಬಿದ್ದಿಲ್ಲ. ಲೋಕೋಪಯೋಗಿ ಹಾಗೂ ಕೆಪಿಸಿಎಲ್ ಹೊರತುಪಡಿಸಿದರೆ ಬೇರೆ ಇಲಾಖೆಗಳಲ್ಲಿ ಮೀಸಲಾತಿ ಪ್ರಮಾಣ ಪೂರ್ಣ ಪ್ರಮಾಣದಲ್ಲಿ ಕೊಟ್ಟಿಲ್ಲ. ಇನ್ನೂ ಬಾಕಿಯಿದೆ ಎಂದು ತಿಳಿಸಲಾಗಿದೆ.
ತೀರ್ಪು ಏನು? ಬಡ್ತಿ ಮೀಸಲಾತಿಯಿಂದಾಗಿ ಇತರ ವರ್ಗದರಿಗೆ ಅನ್ಯಾಯ ಆಗಿದ್ದು, ಅನ್ಯಾಯ ಸರಿಪಡಿಸಿ ಎಂದು ಸುಪ್ರೀಂಕೋರ್ಟ್ ಫೆಬ್ರವರಿ 9 ರಂದು ತೀರ್ಪು ನೀಡಿತ್ತು. ಹಿಂದುಳಿದಿರುವಿಕೆ ಮಾನದಂಡ ಹಾಗೂ ಕಾರ್ಯದಕ್ಷತೆ ಮೇಲೆ ಪರಿಣಾಮದ ಬಗ್ಗೆ ಮಾಹಿತಿ ನೀಡದ ರಾಜ್ಯ ಸರ್ಕಾರದ ಬಗ್ಗೆ ಆಕ್ಷೇಪಣೆ ಸಹ ವ್ಯಕ್ತಪಡಿಸಿತ್ತು. ಮೂರು ತಿಂಗಳಲ್ಲಿ ಪರಿಷ್ಕೃತ ಸೇವಾ ಜೇಷ್ಠತೆ ಪಟ್ಟಿ ಸಿದಟಛಿಪಡಿಸಿ. ನಂತರದ ಮೂರು ತಿಂಗಳಲ್ಲಿ ಬಡ್ತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಿ ಎಂದು ಗಡುವು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ