ಸಭೆಯಲ್ಲಿ ಶಾ ಕ್ಲಾಸ್, UP ಮಾದರಿಯಲ್ಲೇ ಕರ್ನಾಟಕದಲ್ಲೂ ಚುನಾವಣೆ!
Team Udayavani, Aug 12, 2017, 5:23 PM IST
ಬೆಂಗಳೂರು: ಹಿಂದೂಗಳ ಮತ ಕ್ರೋಡೀಕರಣಕ್ಕೆ ಆದ್ಯತೆ ನೀಡಬೇಕು. ಒಗ್ಗಟ್ಟಿನಿಂದ ಎಲ್ಲರೂ ಚುನಾವಣೆಗೆ ಹೋಗಬೇಕು. ಚುನಾವಣೆ ವೇಳೆ ಖುದ್ದಾಗಿ ರಾಜ್ಯಕ್ಕೆ ಬಂದು ತಂತ್ರಗಾರಿಕೆ ರೂಪಿಸುತ್ತೇನೆ…ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಜೆಪಿ ಸಭೆಯಲ್ಲಿ ಶಾಸಕರು, ಎಂಎಲ್ ಸಿಗಳಿಗೆ ಹೇಳಿದ ಮಾತು.
ಶನಿವಾರದಿಂದ ರಾಜ್ಯಕ್ಕೆ 3 ದಿನಗಳ ಭೇಟಿಗಾಗಿ ಆಗಮಿಸಿರುವ ಶಾ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು, ಸಂಸದರು ಹಾಗೂ ಎಂಎಲ್ ಸಿಗಳ ಜೊತೆ ಮಾತುಕತೆ ನಡೆಸಿದರು. ಉತ್ತರಪ್ರದೇಶದ ಮಾದರಿಯಲ್ಲೇ ಕರ್ನಾಟಕದಲ್ಲೂ ಚುನಾವಣೆ ಎದುರಿಸುವುದಾಗಿ ತಿಳಿಸಿದರು.
ಮುಂದಿನ ಚುನಾವಣೆಗಾಗಿ ಪ್ರತಿಯೊಬ್ಬರು ಬೂತ್ ಮಟ್ಟದಲ್ಲಿ ಕಾರ್ಯತಂತ್ರ ರೂಪಿಸಬೇಕು. ಶಾಸಕರು, ಸಂಸದರೇ ಬೂತ್ ಮಟ್ಟದ ಕೆಲಸಕ್ಕೆ ಹೊಣೆಗಾರರು. ಯಾವುದೇ ಅಸಮಾಧಾನಕ್ಕೆ ಅವಕಾಶ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕೆಂದು ಶಾ ಖಡಕ್ ಸಂದೇಶ ರವಾನಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬಿಜೆಪಿ ಶಾಸಕರು, ಎಂಎಲ್ ಸಿಗಳಿಗೆ ಶಾ ಕ್ಲಾಸ್:
ಸಭೆಯಲ್ಲಿ ಶಾ ಮಾತನಾಡಲು ಆರಂಭಿಸುತ್ತಿದ್ದಂತೆಯೇ, ಪೆನ್ನು, ನೋಟ್ ಪ್ಯಾಡ್ ಇದೆಯಾ ಎಂದು ಶಾಸಕರು, ಎಂಎಲ್ ಸಿಗಳನ್ನು ಪ್ರಶ್ನಿಸಿದ್ದರು, ಪೆನ್ನು, ನೋಟ್ ಪ್ಯಾಡ್ ಇಲ್ಲದವರು ಕೂಡಲೇ ತರುವಂತೆ ಸೂಚಿಸಿದ್ದರು. ನಾನು ಹೇಳೋದನ್ನು ಗಮನವಿಟ್ಟು ಕೇಳಿಸಿಕೊಂಡು ಬರೆದಿಟ್ಟುಕೊಳ್ಳಿ ಎಂದು ಹೇಳಿದ್ದರು. ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ಶಾ ಮಾತನಾಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ