ಸಭೆಯಲ್ಲಿ ಶಾ ಕ್ಲಾಸ್, UP ಮಾದರಿಯಲ್ಲೇ ಕರ್ನಾಟಕದಲ್ಲೂ ಚುನಾವಣೆ!
Team Udayavani, Aug 12, 2017, 5:23 PM IST
ಬೆಂಗಳೂರು: ಹಿಂದೂಗಳ ಮತ ಕ್ರೋಡೀಕರಣಕ್ಕೆ ಆದ್ಯತೆ ನೀಡಬೇಕು. ಒಗ್ಗಟ್ಟಿನಿಂದ ಎಲ್ಲರೂ ಚುನಾವಣೆಗೆ ಹೋಗಬೇಕು. ಚುನಾವಣೆ ವೇಳೆ ಖುದ್ದಾಗಿ ರಾಜ್ಯಕ್ಕೆ ಬಂದು ತಂತ್ರಗಾರಿಕೆ ರೂಪಿಸುತ್ತೇನೆ…ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಜೆಪಿ ಸಭೆಯಲ್ಲಿ ಶಾಸಕರು, ಎಂಎಲ್ ಸಿಗಳಿಗೆ ಹೇಳಿದ ಮಾತು.
ಶನಿವಾರದಿಂದ ರಾಜ್ಯಕ್ಕೆ 3 ದಿನಗಳ ಭೇಟಿಗಾಗಿ ಆಗಮಿಸಿರುವ ಶಾ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು, ಸಂಸದರು ಹಾಗೂ ಎಂಎಲ್ ಸಿಗಳ ಜೊತೆ ಮಾತುಕತೆ ನಡೆಸಿದರು. ಉತ್ತರಪ್ರದೇಶದ ಮಾದರಿಯಲ್ಲೇ ಕರ್ನಾಟಕದಲ್ಲೂ ಚುನಾವಣೆ ಎದುರಿಸುವುದಾಗಿ ತಿಳಿಸಿದರು.
ಮುಂದಿನ ಚುನಾವಣೆಗಾಗಿ ಪ್ರತಿಯೊಬ್ಬರು ಬೂತ್ ಮಟ್ಟದಲ್ಲಿ ಕಾರ್ಯತಂತ್ರ ರೂಪಿಸಬೇಕು. ಶಾಸಕರು, ಸಂಸದರೇ ಬೂತ್ ಮಟ್ಟದ ಕೆಲಸಕ್ಕೆ ಹೊಣೆಗಾರರು. ಯಾವುದೇ ಅಸಮಾಧಾನಕ್ಕೆ ಅವಕಾಶ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕೆಂದು ಶಾ ಖಡಕ್ ಸಂದೇಶ ರವಾನಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬಿಜೆಪಿ ಶಾಸಕರು, ಎಂಎಲ್ ಸಿಗಳಿಗೆ ಶಾ ಕ್ಲಾಸ್:
ಸಭೆಯಲ್ಲಿ ಶಾ ಮಾತನಾಡಲು ಆರಂಭಿಸುತ್ತಿದ್ದಂತೆಯೇ, ಪೆನ್ನು, ನೋಟ್ ಪ್ಯಾಡ್ ಇದೆಯಾ ಎಂದು ಶಾಸಕರು, ಎಂಎಲ್ ಸಿಗಳನ್ನು ಪ್ರಶ್ನಿಸಿದ್ದರು, ಪೆನ್ನು, ನೋಟ್ ಪ್ಯಾಡ್ ಇಲ್ಲದವರು ಕೂಡಲೇ ತರುವಂತೆ ಸೂಚಿಸಿದ್ದರು. ನಾನು ಹೇಳೋದನ್ನು ಗಮನವಿಟ್ಟು ಕೇಳಿಸಿಕೊಂಡು ಬರೆದಿಟ್ಟುಕೊಳ್ಳಿ ಎಂದು ಹೇಳಿದ್ದರು. ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ಶಾ ಮಾತನಾಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ