58 ಗಂಟೆಯ ಪ್ರವಾಸ 50 ಗಂಟೆ ಕಾರ್ಯಕ್ರಮ
Team Udayavani, Aug 15, 2017, 10:06 AM IST
ಬೆಂಗಳೂರು: ಪಕ್ಷ ಸಂಘಟನೆ ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾಯಕರನ್ನು ಸಜ್ಜುಗೊಳಿಸುವ ಉದ್ದೇಶದಿಂದ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೋಮವಾರ ರಾತ್ರಿ ದೆಹಲಿಗೆ ವಾಪಸಾಗಿದ್ದಾರೆ.
ಶನಿವಾರ ಬೆಳಗ್ಗೆ 10.40ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ, ಸುಮಾರು 58 ಗಂಟೆಯ ರಾಜ್ಯ ಪ್ರವಾಸ ದಲ್ಲಿ ಸುಮಾರು 46 ಗಂಟೆ ಅವಧಿಯನ್ನು ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಚುನಾವಣಾ ಕಾರ್ಯತಂತ್ರ, ಸಮಾಲೋಚನೆಗೆ ಮೀಸಲಿಟ್ಟಿದ್ದು, ಸೋಮವಾರ ರಾತ್ರಿ 8.30ರ ವಿಮಾನದಲ್ಲಿ ದೆಹಲಿಗೆ ವಾಪಸಾದರು. ಅಮಿತ್ಶಾ ದೇಶಾದ್ಯಂತ ಪಕ್ಷ ಸಂಘಟನೆಯ ದೃಷ್ಟಿಯಿಂದ ದೇಶದ ದೊಡ್ಡ ರಾಜ್ಯಗಳಿಗೆ ಮೂರು ದಿನ, ಸಣ್ಣ ರಾಜ್ಯಗಳಿಗೆ ಎರಡು ದಿನ ಹಾಗೂ ಕೇಂದ್ರದಾಳಿತ ಪ್ರದೇಶಕ್ಕೆ ಒಂದು ದಿನದ ಪ್ರವಾಸ ಕೈಗೊಳ್ಳುತಿದ್ದು, ಎಲ್ಲಾ ಪ್ರವಾಸದಲ್ಲೂ ಪಕ್ಷ ಸಂಘಟನೆ ಹಾಗೂ ಪಕ್ಷವನ್ನು ಆ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ವಿಚಾರ ಹೋರತುಪಡಿಸಿ ಬೇರ್ಯಾವುದರ ಅನಗತ್ಯ ಚರ್ಚೆಗೆ ಅವಕಾಶವೇ ನೀಡಿಲ್ಲ. ಅದೇ ರೀತಿ ರಾಜ್ಯದಲ್ಲೂ ಮೂರು ದಿನದಲ್ಲಿ ಸಭೆ, ಸಮಾರಂಭ, ಚರ್ಚೆ, ಮಾತುಕತೆ ಸೇರಿ ಪಕ್ಷ ಸಂಘಟನೆಗೆ ಪೂರಕವಾಗುವ 25ಕ್ಕೂ ಅಧಿಕ ಕಾರ್ಯಕ್ರಮ ನಡೆಸಿದ್ದಾರೆ. ಕೆಲವು ವಿಚಾರವಾಗಿ ಪಕ್ಷದ ನಾಯಕರನ್ನು ಬೆಂಡೆತ್ತುವ ಜತೆಗೆ ಚುನಾವಣೆಗೆ ಸಿದ್ಧಪಡಿಸುವ ಕೆಲಸ ಮಾಡಿದ್ದಾರೆ.
ರಾಜ್ಯ ಪದಾಧಿಕಾರಿಗಳ ಬದಲಾವಣೆ?
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡುವ ಬಗ್ಗೆ ಅಮಿತ್ ಶಾ ಅವರು ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೆಲವರು ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಶಾ ಅವರು ಈ ಯೋಚನೆ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪಕ್ಷದ ರಾಜ್ಯ ಘಟಕದಿಂದ ಕೆಲವೊಂದು ವಿವರಣೆಗಳನ್ನು ಕೇಳಿದ್ದಾರೆ. ಅಲ್ಲದೆ, ಬದಲಾವಣೆ ಮಾಡುವುದಾದರೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಶಾ ಅವರು ದೆಹಲಿಗೆ ತೆರಳಿದ ಬಳಿಕ ಬದಲಾವಣೆ ಕುರಿತಂತೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ