ಜೆನರಿಕ್ ಔಷಧ ಮಳಿಗೆ ಉದ್ಘಾಟಿಸದೆ ವಾಪಸ್
Team Udayavani, Aug 17, 2017, 5:55 AM IST
ಚಿಕ್ಕಮಗಳೂರು: ರಾಜ್ಯ ಸರಕಾರದ ಕ್ರಮ ಖಂಡಿಸಿ ಸಂಸದೆ ಹಾಗೂ ಶಾಸಕರು ಜೆನರಿಕ್ ಔಷಧ ಮಳಿಗೆಯನ್ನು ಉದ್ಘಾಟಿ
ಸದೆ ವಾಪಸ್ಸಾದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.
ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಜೆನರಿಕ್ ಔಷಧ ಮಳಿಗೆ ಉದ್ಘಾಟಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಳಿಗೆ ಉದ್ಘಾಟಿ ಸಲು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಸಿ.ಟಿ.ರವಿ ಆಸ್ಪತ್ರೆ ಆವರಣಕ್ಕೆ ಬಂದಿದ್ದರು. ಆದರೆ, ಜೆನರಿಕ್ ಔಷಧ ಮಳಿಗೆ ಬದಲು ರಾಜ್ಯ ಸರ್ಕಾರದ ಸ್ನೇಹ ಸಂಜೀವಿನಿ ಔಷಧ ಮಳಿಗೆ ಎಂಬ ನಾಮಫಲಕ ನೋಡಿದ ತಕ್ಷಣ ಒಮ್ಮೆಲೆ ಸಿಡಿಮಿಡಿಗೊಂಡು ಇದನ್ನು ಉದ್ಘಾಟಿಸಲು ಸಾಧ್ಯವಿಲ್ಲವೆಂದು ವಾಪಸ್ ತೆರಳಿದರು.
ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ದಾರಿ ತಪ್ಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ದೂರಿದರು. ಶಾಸಕ ಸಿ.ಟಿ.ರವಿ ಮಾತನಾಡಿ, ಖಾಸಗಿ ಎನ್ಜಿಒದೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡು ಸ್ನೇಹ ಸಂಜೀವಿನಿ ಔಷಧ ಮಳಿಗೆ ಆರಂಭಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…