ರಾಷ್ಟ್ರೀಯ ನದಿ ಸಂರಕ್ಷಣೆಗೆ ಜಲ ಸಂಸತ್‌ ರಚನೆ


Team Udayavani, Aug 18, 2017, 7:55 AM IST

Ban18081707Medn.jpg

ವಿಜಯಪುರ: ದೇಶದ ನದಿಗಳ ಸಂರಕ್ಷಣೆಗಾಗಿ ಜಲ ನಾಯಕ-ಕಾರ್ಯಕರ್ತರನ್ನು ಒಳಗೊಂಡ 21 ಜಲ ಸಂಸತ್‌ಗಳನ್ನು ರಚಿಸಲಾಗಿದೆ. ನದಿಗಳ ನೈಸರ್ಗಿಕ ಹರಿವು ಸುಗಮಕ್ಕಾಗಿ ಆಯಾ ನದಿ ಪಾತ್ರದ ಜಲ ಕಾರ್ಯಕರ್ತರನ್ನೇ ಸಂಸತ್‌ಗೆ ನೇಮಿಸಿದೆ.

ನಗರದಲ್ಲಿ ನಡೆಯುತ್ತಿರುವ “ಬರಮುಕ್ತ ಭಾರತಕ್ಕಾಗಿ ರಾಷ್ಟ್ರೀಯ ಜಲ ಸಮಾವೇಶ’ದ ಸಂದರ್ಭದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಜಲಗಾಂಧಿ ಡಾ| ರಾಜೇಂದ್ರಸಿಂಗ್‌ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಡಿ.ಪಿ.ಬಿರಾದಾರ, ಗಂಗಾ, ಮಹದಾಯಿ, ಕಾವೇರಿ, ಕೃಷ್ಣಾ, ಗೋದಾವರಿ, ಮಂದಾಕಿನಿ, ಮಹೇಶ್ವರ ನದಿ ಸೇರಿ ದೇಶದ ಎಲ್ಲ ನದಿಗಳ ಸಂರಕ್ಷಣೆಗಾಗಿ ಈ ಸಂಸತ್‌ ಸಮಿತಿ ನೆರವಾಗಲಿದೆ ಎಂದರು.

ನಗರೀಕರಣ, ಕೈಗಾರಿಕೀಕರಣದಂತಹ ವ್ಯವಸ್ಥೆ ನದಿಗಳ ಜೀವಕ್ಕೆ ಆಪತ್ತು ತಂದಿದೆ. ಇದರಿಂದ ಮನು ಸಂಕುಲಕ್ಕೂ ಸಂಚಕಾರ ಬಂದಿದೆ. ನದಿಗಳ ನೈಸರ್ಗಿಕ ಹರಿವಿನ ಪ್ರದೇಶಕ್ಕೂ ಸಂಚಕಾರ ತಂದಿದ್ದು  ನದಿಯ ಹಕ್ಕಿಗೂ ಚ್ಯುತಿ ಬಂದಿದೆ. ಇದರಿಂದ ನದಿ ಪಾತ್ರದಲ್ಲಿನ ನಾಗರಿಕತೆ, ಸಂಸ್ಕೃತಿಗಳೂ ಅವಸಾನ ಗೊಳ್ಳುತ್ತಿವೆ. ಹೀಗಾಗಿ ನದಿಗಳ ಹಕ್ಕು ರಕ್ಷಣೆಗಾಗಿ ಜಲ ಸಂಸತ್‌ ರಚಿಸಲಾಗಿದೆ ಎಂದರು. ಜಲ ಸಮಾವೇಶದಲ್ಲಿ ರಚಿಸಲಾಗಿರುವ ಜಲ ಸಂಸತ್‌ ಗಳು ಆಯಾ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳ ಜೊತೆ ನದಿಗಳ ಸಂರಕ್ಷಣೆ ಕಾರ್ಯಕ್ರಮ ರೂಪಿಸಿ, ಅನುಷ್ಠಾನಕ್ಕೆ ತರಲಿವೆ. ನದಿ ಮಾಲಿನ್ಯ ತಡೆಗೆ ಅಗತ್ಯ ಕಠಿಣ ಕಾನೂನು ರೂಪಿಸಲು ಆಡಳಿತ ವ್ಯವಸ್ಥೆ ಮೇಲೆ ಒತ್ತಡ ಹೇರಲಿದೆ ಎಂದು ಜಲ ಸಂಸತ್‌ ರಚನೆಯ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟರು.

ಅವೈಜ್ಞಾನಿಕ ನೀರು ಬಳಕೆಗೆ ಕಡಿವಾಣ ಹಾಕಿ: ಮೋದಿ: ಉತ್ತರ ಪ್ರದೇಶದ ಐಪಿಎಸ್‌ ಅಧಿ ಕಾರಿ ಮಹೇಂದ್ರ ಮೋದಿ ಮಾತನಾಡಿ, ಆಧುನಿಕತೆಯ ಭರಾಟೆಯ ನೆಪದಲ್ಲಿ ಮನುಷ್ಯ ನೀರಿನ ಅವೈಜ್ಞಾನಿಕ ಬಳಕೆಗೆ ಮುಂದಾಗಿರುವುದು ಹಾಗೂ
ಜಲಮೂಲಗಳಿಗೆ ಧಕ್ಕೆ ತರುತ್ತಿರುವುದು ಜಲ ಸಮಸ್ಯೆಗೆ ಕಾರಣವಾಗುತ್ತಿದೆ. ತಕ್ಷಣ ಎಚ್ಚೆತ್ತುಕೊಂಡು ನೀರಿನ ಅವೈಜ್ಞಾನಿಕ ಬಳಕೆಗೆ ಕಡಿವಾಣ ಹಾಕದಿದ್ದರೆ ಭವಿಷ್ಯಕ್ಕೆ ಜಲ ಸಮಸ್ಯೆ ಇನ್ನೂ ಮಾರಕವಾಗಲಿದೆ ಎಂದು ಹೇಳಿದರು. ಜಲ ಸಮಾವೇಶದ ಎರಡನೇ ದಿನವಾದ ಗುರುವಾರ “ತಾಂತ್ರಿಕ ಗೋಷ್ಠಿ’ಯಲ್ಲಿ ಅವರು ವಿಷಯ ಮಂಡಿಸಿದರು. ಆಧುನಿಕತೆ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನ ಬಳಸಿಕೊಂಡು ಜಲ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ ಎಂದರು.

ಸತತವಾಗಿ ಮೂರು ದಶಕಗಳಿಂದ ಉತ್ತರಖಂಡದ ನದಿಗಳಲ್ಲಿ ಜೀವ ತುಂಬುವ ಕಾರ್ಯವನ್ನು ವಾರಣಾಸಿಯ ಗಂಗಾ ಮಹಾಸಭೆ ಮಾಡುತ್ತಿದೆ. ಅಷ್ಟೇ ಅಲ್ಲದೆ ಪ್ರತಿ 10 ಕಿ.ಮೀ.ಅಂತರದಲ್ಲಿ ಗಂಗೆಯ ನೀರನ್ನು ಪರಿಶೀಲಿಸುವ ಕುರಿತು ಅಧ್ಯಯನ ಕೈಗೊಳ್ಳಲಾಗಿದೆ. ಉತ್ತರಖಂಡ, ಹಿಮಾಚಲ ಪ್ರದೇಶ, ನಾಗಲ್ಯಾಂಡ್‌ ಮತ್ತು ಸಿಕ್ಕಿಂ ರಾಜ್ಯಗಳಲ್ಲಿನ ರೈತರ ಜೊತೆಗೆ ನಿರಂತರ ನದಿಗಳನ್ನು ಉಳಿಸುವ ಕೆಲಸ ಮಾಡಲಾಗುತ್ತಿದೆ. ಗಂಗಾ ನದಿಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ.
– ಬಸವರಾಜ ಪಾಟೀಲ, ರಾಷ್ಟ್ರೀಯ
ಸ್ವಾಭಿಮಾನ ಆಂದೋಲನ ಕಾರ್ಯದರ್ಶಿ.

ಪರಸ್ಪರ ಸೌಹಾರ್ದ ಮೂಲಕ ಅಂತಾರಾಜ್ಯ ಜಲ ವಿವಾದಗಳನ್ನು ಇತ್ಯರ್ಥ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಜಲ ಸಂಪತ್ತಿದ್ದರೂ ಸದ್ಬಳಕೆ ಮಾಡಿಕೊಳ್ಳಲಾಗದೆ ಭಾರತದ ಅಭಿವೃದ್ಧಿಗೆ ಹಿನ್ನಡೆ ಆಗಲಿದೆ.
– ಆನಂದ ಘೋಸಾವಳಿ, ಮಹಾರಾಷ್ಟ್ರದ
ಜಲ ಸಾಕ್ಷಾತ್‌ ಕೇಂದ್ರದ ಮುಖ್ಯಸ್ಥ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.