ಹೈಕಮಾಂಡ್ ಸೂಚಿಸಿದರೆ ಮಂತ್ರಿ ಸ್ಥಾನ ತ್ಯಾಗಕ್ಕೆ ಸಿದ್ಧ
Team Udayavani, Aug 18, 2017, 7:00 AM IST
ಚಿತ್ರದುರ್ಗ: ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರೆ ಮಂತ್ರಿ ಸ್ಥಾನ ತ್ಯಜಿಸಿ ಪಕ್ಷ ಸಂಘಟನೆ ಮಾಡಲು ಸಿದ್ಧ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ,”ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಗಳ ಪರಮಾ ಧಿಕಾರ. ನನ್ನ ಖಾತೆಯಲ್ಲಿ ಬದಲಾವಣೆಯಾಗುತ್ತದೆ ಎಂದು ನನಗೆ ಯಾವತ್ತೂ ಅನಿಸಿಲ್ಲ. ಈ ವಿಷಯದಲ್ಲಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು
ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ‘ ಎಂದರು.