ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ


Team Udayavani, Aug 19, 2017, 6:30 AM IST

Chief-Minister-Siddaramaiah.jpg

ವಿಜಯಪುರ: ರಾಜ್ಯದಲ್ಲಿ ಭೀಕರ ಬರ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹಕಾರಿ ಸಂಘಗಳಲ್ಲಿರುವ ರೈತರ 50 ಸಾವಿರ ರೂ. ವರೆಗಿನ ಕೃಷಿ ಸಾಲ ಮನ್ನಾ ಮಾಡಿದೆ. ಕೇಂದ್ರ ಸರ್ಕಾರ ಕೂಡಲೇ ರೈತರು ರಾಷ್ಟ್ರೀಕೃತ ಬ್ಯಾಂಕ್‌ ಗಳಲ್ಲಿ ಮಾಡಿರುವ ಸಾಲ ಮನ್ನಾ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ನಗರದಲ್ಲಿ ಮೂರು ದಿನಗಳಿಂದ ಆಯೋಜಿಸಿದ್ದ “ಬರಮುಕ್ತ ಭಾರತ’ ಕಲ್ಪನೆಯ ರಾಷ್ಟ್ರೀಯ ಜಲ ಸಮಾವೇಶದ ಸಮಾರೋಪದಲ್ಲಿ ಸಂಘಟಕರು ನದಿಗಳ ಸಂರಕ್ಷಣೆಗಾಗಿ ಸಂಗ್ರಹಿಸಿರುವ ದೇಶದ 101 ನದಿಗಳ ನೀರಿನ ಬಿಂದಿಗೆಗಳನ್ನು ಸ್ವೀಕರಿಸಿ ಮಾತನಾಡಿದರು. ಕಳೆದ 16 ವರ್ಷಗಳಲ್ಲಿ 13 ವರ್ಷ ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಇದರಲ್ಲಿ 7 ವರ್ಷ ಅತ್ಯಂತ ಗಂಭೀರ ಸ್ಥಿತಿ ಸೃಷ್ಟಿಸಿತ್ತು. ಹೀಗಾಗಿಯೇ ಸರಕಾರಕ್ಕೆ 8,165 ಕೋಟಿ ರೂ. ಹೊರೆಯಾದರೂ ರಾಜ್ಯದ ರೈತರ ಸಾಲ ಮನ್ನಾ ಮಾಡಿ, ರೈತರ ಬೆನ್ನಿಗೆ ನಿಂತಿದೆ ಎಂದರು.

ಚರ್ಚೆಯಾಗಲಿ: ಸಮಾವೇಶದಲ್ಲಿ ಅಂಗೀಕರಿಸಿರುವ ವಿಜಯಪುರ ಘೋಷಣೆ-2017 ಕುರಿತು ಸಂಸತ್‌ ಹಾಗೂ ಎಲ್ಲ ರಾಜ್ಯಗಳ ವಿಧಾನ ಮಂಡಲದಲ್ಲಿ ಚರ್ಚೆ ಆಗಬೇಕಿದೆ. ರಾಷ್ಟ್ರೀಯ ನೀತಿ ಆಯೋಗದಲ್ಲೂ ಈ ಕುರಿತು ಚರ್ಚೆ ನಡೆಯಬೇಕು. ದೇಶದ 125 ಕೋಟಿ ಜನರಿಗೆ ಜೀವ ಜಲ ಒದಗಿಸಲು, ಸಂವಿಧಾನಕ್ಕೆ ತಿದ್ದುಪಡಿ ತಂದಾದರೂ ನದಿಗಳ ಸಂರಕ್ಷಣೆಗೆ ರಾಷ್ಟ್ರೀಯ ನೀತಿ ರೂಪಿಸಬೇಕು. ನೀರಿನ ಬಳಕೆ ಹಾಗೂ ನಿರ್ವಹಣೆಯಲ್ಲಿ ಆಧುನಿಕ ಜಲ ತಂತ್ರಜ್ಞಾನ ಬಳಸಬೇಕು ಎಂದರು.

ಜಲಋಷಿ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯನವರು ಜಲ ಸಂರಕ್ಷಣೆ ಸಾಕ್ಷರತೆಗೆ ಶ್ರಮಿಸಿದ ವಿನೋದರಿಗೆ 1 ಲಕ್ಷ ರೂ. ನಗದು ಸಹಿತ ಜಲಋಷಿ ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಕ್ರಿಕೆಟ್‌ ತಾರೆ ರಾಜೇಶ್ವರಿ ಗಾಯಕವಾಡರನ್ನು ಸನ್ಮಾನಿಸಿದರು. ಸಮಾವೇಶದ ಸಂಘಟಕ ಡಾ.ರಾಜೇಂದ್ರ ಸಿಂಗ್‌ ಅವರು ಸಿಎಂ ಸಿದ್ದರಾಮಯ್ಯನವರಿಗೆ ದೇಶದ 101 ನದಿಗಳ ಜಲ ತುಂಬಿದ ಬೆಳ್ಳಿ ಬಿಂದಿಗೆ ಹಸ್ತಾಂತರಿಸಿದರು. ಜಲಸಂಪನ್ಮೂಲ ಸಚಿವ ಡಾ.ಎಂ.ಬಿ. ಪಾಟೀಲ ಅವರು ಡಾ.ರಾಜೇಂದ್ರಸಿಂಗ್‌ರಿಗೆ ಕೃಷ್ಣಾ ಜಲ ತುಂಬಿದ ಬೆಳ್ಳಿ ಬಿಂದಿಗೆ ನೀಡಿದರು. ಜಲತಜ್ಞ ರಾಜೇಂದ್ರಸಿಂಗ್‌, ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳು, ಮಮದಾಪುರದ ಮುರುಘೇಂದ್ರ ಶ್ರೀಗಳು, ಶಾಸಕರಾದ ಶಿವಾನಂದ ಪಾಟೀಲ,  ಬಿ.ಆರ್‌.ಪಾಟೀಲ ಆಳಂದ, ಯಶವಂತ ರಾಯಗೌಡ ಪಾಟೀಲ, ಡಾ.ಎಂ. ಎಸ್‌.ಬಾಗವಾನ, ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ, ಮೇಯರ್‌ ಸಂಗೀತಾ ಪೋಳ ವೇದಿಕೆಯಲ್ಲಿದ್ದರು.

ವ್ಯರ್ಥ ನೀರು ಸದ್ಬಳಕೆಗೆ ಯೋಜನೆ: ಸಿದ್ದರಾಮಯ್ಯ ಬೆಂಗಳೂರಿನಿಂದ ತಮಿಳುನಾಡಿಗೆ ಹರಿಯುತ್ತಿದ್ದ ನೀರನ್ನು ಶುದಿಟಛೀ ಕರಿಸುವ ಯೋಜನೆ ರೂಪಿಸಿ, 20 ಟಿಎಂಸಿ ಅಡಿ ನೀರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ಇದೇ ನೀರನ್ನು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದಕ್ಕಾಗಿ 2,500 ಕೋಟಿ ರೂ. ಯೋಜನೆ ರೂಪಿಸುವ ಮೂಲಕ ರಾಜ್ಯ ಸರ್ಕಾರ ರಾಜ್ಯದಲ್ಲಿ ಹನಿ ನೀರನ್ನೂ ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದೆ ಎಂದರು.

ದೇಶದ ಜೀವಸಂಕುಲಕ್ಕೆ ಆಧಾರವಾಗಿರುವ ನದಿ ಅಮೂಲ್ಯ ಸಂಪತ್ತು. ಇಂತಹ ನದಿಗಳನ್ನು ಈವರೆಗೆ ಪೂಜಿಸಿದ್ದು ಸಾಕು. ಇನ್ನು ಪ್ರೀತಿಯಿಂದ ಸಂರಕ್ಷಿಸುವ ಕೆಲಸವಾಗಬೇಕು. ಪ್ರಸಕ್ತ ಸಂದರ್ಭದಲ್ಲಿ ಅಂತಾರಾಜ್ಯ ಜಲ ವಿವಾದಗಳನ್ನು
ಸೌಹಾರ್ದಯುತ ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು. ಮತ್ತೂಂದೆಡೆ ಸಂವಿಧಾನ ತಿದ್ದುಪಡಿ ಮಾಡಿಯಾದರೂ ಸರಿ, ನದಿಗಳನ್ನು ರಾಷ್ಟ್ರೀಕರಣಗೊಳಿಸಬೇಕು.

 – ಬಸವ ಜಯ ಮೃತ್ಯುಂಜಯ ಶ್ರೀ, ಕೂಡಲಸಂಗಮದ ಪಂಚಮಸಾಲಿ ಜಗದ್ಗುರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.