ನಾಡೋಜ ಏಣಗಿ ಬಾಳಪ್ಪ ಚಿರಸ್ಥಾಯಿ ಇಂದು ಅಂತ್ಯಕ್ರಿಯೆ


Team Udayavani, Aug 19, 2017, 5:55 AM IST

Enagi-Balappa.jpg

ಬೆಳಗಾವಿ/ಸವದತ್ತಿ: ಹಿರಿಯ ರಂಗಭೂಮಿ ಕಲಾವಿದ, ನಾಡೋಜ, ನಾಟ್ಯಭೂಷಣ ಶತಾಯುಷಿ ಏಣಗಿ ಬಾಳಪ್ಪ(104) ಅವರು ಶುಕ್ರವಾರ ಸ್ವಗ್ರಾಮ ಸವದತ್ತಿ ತಾಲೂಕಿನ ಏಣಗಿಯಲ್ಲಿ ವಿಧಿ ವಶರಾದರು.

ವೃತ್ತಿ ರಂಗಭೂಮಿಯಲ್ಲಿ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ “ಏಣಗಿ ಬಾಳಪ್ಪ’ ಎಂದೇ ಖ್ಯಾತರಾಗಿದ್ದ ಅವರು, ಕಳೆದ ನಾಲ್ಕು ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಬೆಳಗ್ಗೆ 11 ಗಂಟೆಗೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ದಿ. ಪತ್ನಿ ಸಾವಿತ್ರಮ್ಮ ಅವರ ಸಮಾಧಿ  ಪಕ್ಕ ಅಂತ್ಯಕ್ರಿಯೆ ನೆರವೇರಲಿದೆ.

ಕರಿಬಸಪ್ಪ-ಬಾಳಮ್ಮ ಲೋಕೂರ ದಂಪತಿಯ ಪುತ್ರರಾಗಿ ಅವರು ಜನಿಸಿದಾಗ ಕುಟುಂಬ ಆರ್ಥಿಕವಾಗಿ ಸದೃಢವಾಗಿರಲಿಲ್ಲ. ಒಕ್ಕಲುತನ ಮನೆತನದ ಉದ್ಯೋಗವಾಗಿತ್ತು. ಚಿಕ್ಕ ವಯಸ್ಸಿನಲ್ಲಿಯೇ ಬಾಳಪ್ಪ ತಂದೆಯನ್ನು ಕಳೆದುಕೊಂಡರು. ಆದರೆ ಬಡತನ ಅವರ ಸಾಧನೆಗೆ ಅಡ್ಡಿಯಾಗಲಿಲ್ಲ. ಬದಲಾಗಿ ನಟನೆ ಅವರ ಬಾಲ್ಯದ ನಂಟಾಯಿತು.

ಎಂಟರ ಹರೆಯದಲ್ಲೇ ಆಕಸ್ಮಿಕವಾಗಿ ಸಿಕ್ಕ ಅವಕಾಶ ಬಳಸಿಕೊಂಡ ಅವರು ಗಣಪತಿಯ ಪಾತ್ರ ನಿರ್ವಹಿಸುವ ಮೂಲಕ ರಂಗಭೂಮಿ ಪ್ರವೇಶಿಸಿದ್ದರು. ಅಂದಿನಿಂದ ಒಂಭತ್ತು ದಶಕಗಳ ಕಾಲ ಹಿಂತಿರುಗಿ ನೋಡಿದ್ದೇ ಇಲ್ಲ. ನಡೆದಾಡುವ ರಂಗಭೂಮಿ ಎಂದೇ ಹೆಸರಾಗಿದ್ದ ಬಾಳಪ್ಪನವರು ನಟರಾಗಿ, ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಮೊದಲಿಗೆ ಇತರರ ತಂಡಗಳಲ್ಲಿ ನಾಟಕ ಕಲಾವಿದರಾಗಿದ್ದ  ಅವರು ನಂತರ ತಮ್ಮದೇ ಆದ ಸ್ವತಂತ್ರ ತಂಡ ರಚಿಸಿ ಬೆಳೆಸಿದರು. ನೂರಾರು ನಾಟಕ ರಚಿಸಿದರೂ ಅದರಲ್ಲಿ ಜಗಜ್ಯೋತಿ ಬಸವೇಶ್ವರ ನಾಟಕದ ಬಸವೇಶ್ವರರ ಪಾತ್ರದಿಂದ ಕನ್ನಡ ಜನಮಾನಸದಲ್ಲಿ ಪ್ರಸಿದ್ಧರಾಗಿದ್ದರು.

ಬಾಳಪ್ಪನವರು 432ಕ್ಕೂ ಅಧಿಕ ನಾಟಕ 123 ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು. ಜಾನಪದ, ವೃತ್ತಿ, ಹವ್ಯಾಸಿ ಈ ಮೂರು ನೆಲೆಗಳ ರಂಗಭೂಮಿಯಲ್ಲಿ ತನ್ನದೇ ಛಾಪು ಮೂಡಿಸಿರುವ ಬಾಳಪ್ಪ ಇಡೀ ವೃತ್ತಿ ರಂಗಭೂಮಿಗೆ ಚಾರಿತ್ರಿಕ ಮಹತ್ವ ತಂದು ಕೊಡಲು ಶ್ರಮಿಸಿದ್ದರು. ಸಾವಿತ್ರಮ್ಮ, ಲಕ್ಷ್ಮೀದೇವಿ ಸೇರಿದಂತೆ ಇಬ್ಬರು ಪತ್ನಿಯರು, ಐವರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಹೊಂದಿದ್ದ ಬಾಳಪ್ಪ ನಾಲ್ಕೈದು ವರ್ಷಗಳಿಂದ ಏಣಗಿಯಲ್ಲಿಯೇ ವಾಸವಾಗಿದ್ದರು. ಪತ್ನಿ ಸಾವಿತ್ರಮ್ಮ ಮತ್ತು ಮಗ ಖ್ಯಾತ ಕಲಾವಿದ ಏಣಗಿ ನಟರಾಜ ಈಗಾಗಲೇ ನಿಧನ ಹೊಂದಿದ್ದಾರೆ. ಶತಾಯುಷಿ ಅಜ್ಜನನ್ನು ಕಳೆದುಕೊಂಡಿರುವ ಏಣಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.