ಪಂಚಭೂತಗಳಲ್ಲಿ ಲೀನರಾದ ಏಣಗಿ ಬಾಳಪ್ಪ
Team Udayavani, Aug 20, 2017, 7:55 AM IST
ಬೆಳಗಾವಿ/ಸವದತ್ತಿ: ನಾಡೋಜ ಹಿರಿಯ ರಂಗಜೀವಿ, ನಾಟ್ಯಭೂಷಣ, ಕಲಾ ತಪಸ್ವಿ ಡಾ| ಏಣಗಿ ಬಾಳಪ್ಪ ಶನಿವಾರ
ಪಂಚಭೂತಗಳಲ್ಲಿ ಲೀನರಾದರು.
ಶುಕ್ರವಾರ ಬೆಳಗ್ಗೆ ವಿಧಿವಶರಾದ ಡಾ| ಏಣಗಿ ಬಾಳಪ್ಪನವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆಯಿಂದ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಕಲ ಸರಕಾರಿ ಗೌರವದೊಂದಿಗೆ ಜನ್ಮಸ್ಥಳ ಏಣಗಿ ಗ್ರಾಮದಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬಾಳಪ್ಪನವರ ನಿವಾಸದ ಆವರಣದಲ್ಲಿ ಗಾಳಿಯಲ್ಲಿ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು. ಗ್ರಾಮದ ಸಮೀಪದಲ್ಲಿ ಇರುವ ಜಮೀನಿನಲ್ಲಿ ಪತ್ನಿ ಸಾವಿತ್ರಮ್ಮ ಅವರ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬದ ಸದಸ್ಯರು ವಿಧಿವಿಧಾನಗಳನ್ನು ನೆರವೇರಿಸಿದರು. ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಳಪ್ಪನವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು.
ಡಾ| ಏಣಗಿ ಬಾಳಪ್ಪನವರ ಪಾರ್ಥಿವ ಶರೀರಕ್ಕೆ ಸಚಿವೆ ಉಮಾಶ್ರೀ ಅಂತಿಮ ನಮನ ಸಲ್ಲಿಸಿದರು. ಸಂಸದ ಸುರೇಶ
ಅಂಗಡಿ, ಶಾಸಕರಾದ ಆನಂದ ಮಾಮನಿ, ಡಾ| ವಿಶ್ವನಾಥ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಎನ್.ಆರ್. ವಿಶುಕುಮಾರ, ಜಿಲ್ಲಾಧಿಕಾರಿ ಜಿಯಾವುಲ್ಲಾ, ಎಸ್ಪಿ ಡಾ| ಬಿ.ಆರ್. ರವಿಕಾಂತೇಗೌಡ ಗೌರವ ಸಲ್ಲಿಸಿದರು. “ಬಾಳಪ್ಪನವರ ನಿಧನದಿಂದ ನಾಡಿನ
ಸಾಂಸ್ಕೃತಿಕ ಕೊಂಡಿ ಕಳಚಿದಂತಾಗಿದೆ.
ರಂಗಭೂಮಿಯ ಬಹುದೊಡ್ಡ ಕಲಾವಿದರಾದ ಅವರು ಶತಾಯುಷಿಯಾಗಿ ನಮ್ಮೊಂದಿಗೆ ಇದ್ದಿದ್ದು ನಮ್ಮೆಲ್ಲರ
ಭಾಗ್ಯ’ ಎಂದು ಸಚಿವೆ ಉಮಾಶ್ರೀ ಸ್ಮರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ