ಶಾ, ರಾಹುಲ್ ಯಾರೇ ಬಂದ್ರೂ ಭಯವಿಲ್ಲ: HDD
Team Udayavani, Aug 21, 2017, 8:24 AM IST
ವಿಜಯಪುರ: ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾರೇ ಬಂದು ಹೋದರೂ ನಮಗೇನೂ ಭಯವಿಲ್ಲ. ಅವರ ಭೇಟಿಯಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮವಾಗದು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಾಡಿಗೆ ನಾವು ಪಕ್ಷದ ಸಂಘಟನೆ ನಡೆಸಿದ್ದು 120 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿದ್ದೇವೆ. ನಮ್ಮನ್ನು ಕಡೆಗಣಿಸಿದವರಿಗೆ ವಿಧಾನಸಭೆಯ ಕಳೆದ ಎರಡು ಚುನಾವಣೆಯಲ್ಲೇ ರಾಜ್ಯದ ಜನ ಉತ್ತರಿಸಿದ್ದಾರೆ ಎಂದರು. ಪಕ್ಷದ ಸಂಘಟನೆಗಾಗಿ ಈಗಾಗಲೇ ತಲಾ ಐದು ಜಿಲ್ಲೆಗಳ ಹೊಣೆ ನೀಡಿ ಆರು ತಂಡಗಳನ್ನು ರಚಿಸಿದ್ದು, ಹಾಸನ, ರಾಮನಗರ ನಮ್ಮ ಕುಟುಂಬಕ್ಕೆ
ರಾಜಕೀಯ ಜೀವನ ನೀಡಿದ ನೆಲೆಗಳು. ಈ ಹಿಂದೆ ಎರಡು ಕ್ಷೇತ್ರಗಳಲ್ಲಿ ಸ್ಪ ರ್ಧಿಸಿ ಸೋಲು ಅನುಭವಿಸಿದ ಕಹಿ ಅನುಭವ ನನಗಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆಗೆ ಸ್ಪರ್ಧಿಸುವ ಕುರಿತು ಚಿಂತನೆ, ಚರ್ಚೆ ನಡೆದಿದ್ದರೂ ರಾಮನಗರ ಕ್ಷೇತ್ರ
ತೊರೆಯಲು ಅಲ್ಲಿನ ಜನರಿಗೆ ಕಾರಣ ಕೊಡಬೇಕಾಗುತ್ತದೆ ಎನ್ನುವ ಮೂಲಕ ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದ ಸ್ಪರ್ಧೆಯನ್ನು ಅಲ್ಲಗಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ