ಬಿಜೆಪಿ ಮೀಸಲಾತಿ ವಿರೋಧಿ: ಮುಖ್ಯಮಂತ್ರಿ


Team Udayavani, Aug 21, 2017, 12:03 PM IST

21-STATE-15.jpg

ಬೆಂಗಳೂರು: ಕೇಂದ್ರ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮಸೂದೆಗೆ ತಿದ್ದುಪಡಿ ತರಲು ಹೊರಟಿದ್ದು, ಇದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಮೀಸಲಾತಿ ವಿರೋಧಿಗಳು ಎಂದು ಟೀಕಿಸಿದ್ದಾರೆ.

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ ಭಾನುವಾರ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಮಂತ್ರಿ ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಗುಂಪಿಗೆ ಯಾವ ಸಮುದಾಯ ಸೇರಿಸಬೇಕೆಂಬ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರಬೇಕು. ಆದರೆ ಈಗ ಕೇಂದ್ರ ಸರ್ಕಾರ ಈ ಅಧಿಕಾರವನ್ನೇ ಕಿತ್ತುಕೊಳ್ಳಲು ಹೊರಟಿದೆ. ಅದನ್ನು
ನಾವು ವಿರೋಧಿಸಿದ್ದೇವೆ. ಆದರೆ, ಅಮಿತ್‌ ಶಾ ನಾವು ಮೀಸಲಾತಿ ವಿರೋಧಿಗಳು ಎಂದು ಹೇಳುತ್ತಿದ್ದಾರೆ ಎಂದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಜಾರಿಗೊಳಿಸುವ ಮೂಲಕ ಆಯೋಗದ ಅಧಿಕಾರ ಕಿತ್ತುಕೊಳ್ಳುವ ಹುನ್ನಾರವನ್ನು ಬಿಜೆಪಿ ನಡೆಸುತ್ತಿದೆ. ಈಶ್ವರಪ್ಪ ಹಿಂದುಳಿದ ವರ್ಗಗಳಿಗೆ ರಾಯಣ್ಣ ಬ್ರಿಗೇಡ್‌ ಅಂತ ಮಾಡಿದರು. ಆದರೆ, ಹಿಂದುಳಿದ ವರ್ಗಗಳಿಗೆ ಯಾವುದೇ ಸಹಾಯ ಮಾಡಲಿಲ್ಲ. ಬಿಜೆಪಿಯವರು ಮೀಸಲಾತಿ ವಿರೋಧಿಗಳು ಎಂದ ಅವರು, ಒಂದು ಕಡೆ ಮೀಸಲಾತಿ ವಿರೋಧಿಸುವ ಬಿಜೆಪಿಯವರು, ಇನ್ನೊಂದು ಕಡೆ ದಲಿತರ ಮನೆಗೆ ಊಟಕ್ಕೆ ಹೋಗುತ್ತಾರೆ. ದಲಿತರ ಮನೆಗೆ ಊಟಕ್ಕೆ ಹೋದ ಮೇಲೆ ಅವರ  ಮನೆಯ ಊಟ ಮಾಡ್ಬೇಕಲ್ವಾ? ಹೋಟೆಲ್‌ ಊಟ
ತರಿಸಿಕೊಂಡು ಊಟ ಮಾಡುತ್ತಾರೆ. “ದಲಿತರ ಮನೆಯ ಹೆಣ್ಣು ಮಕ್ಕಳನ್ನು ನಿಮ್ಮ ಗಂಡು ಮಕ್ಕಳಿಗೆ ಮದುವೆ ಮಾಡಿ ಅಂದೆ. ಅಂದಿನಿಂದ ಬಿಜೆಪಿಯವರು ದಲಿತರ ಮನೆಗಳಿಗೆ ಊಟಕ್ಕೆ ಹೋಗುವುದನ್ನೇ ಬಿಟ್ಟುಬಿಟ್ಟರು’ ಎಂದು ನಗೆ ಚಟಾಕಿ ಹಾರಿಸಿದರು.

ಹಿಂದುಳಿದ, ಶೋಷಿತ ಜನರಿಗೆ ನ್ಯಾಯ ಸಿಗುವಂತೆ ಮಾಡಿದ್ದ ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರ. ಹಿಂದುಳಿದವರು, ಶೋಷಿತರು, ದಲಿತರಿಗೆ ಸಾಮಾಜಿಕ ನ್ಯಾಯ ನೀಡಿದ್ದರು. ಎಷ್ಟೇ ಅಡೆತಡೆ ಬಂದರೂ ಹಲವು ಕ್ರಾಂತಿಕಾರಕ ಬದಲಾವಣೆಗಳನ್ನು ತಂದರು. ಅವರೊಬ್ಬ ಅಪರೂಪದ ಧೀಮಂತ ರಾಜಕಾರಣಿ ಎಂದರು. ಮೀಸಲಾತಿ ವಿರೋಧಿಗಳು: ಮಾಜಿ ರಾಜ್ಯಪಾಲರಾದ ನ್ಯಾ.ರಾಮಾಜೋಯಿಸ್‌ ಸುಪ್ರೀಂ ಕೋರ್ಟಿನಲ್ಲಿ ಮೀಸಲಾತಿ ಬೇಡವೆಂದು ಅರ್ಜಿ ಹಾಕಿದ್ದರು. ಅದೃಷ್ಟವಶಾತ್‌ ರಾಮಾಜೋಯಿಸ್‌ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿತು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ತುಂಬಾ ಅನ್ಯಾಯವಾಗುತ್ತಿತ್ತು. ಬಿಜೆಪಿಯವರಿಗೆ ಹಿಂದುಳಿದ ವರ್ಗಗಳ ಹೆಸರು ಹೇಳುವ ನೈತಿಕತೆಯಿಲ್ಲ. ಹಿಂದುಳಿದ ವರ್ಗಗಳು ಬಿಜೆಪಿ ಕಡೆಗೆ ತಲೆ ಹಾಕಿಯೂ ಮಲಗಬಾರದು ಎಂದರು.

ರಾಜೀವ್‌ ಗಾಂಧಿ ಅವರು ಯುವ ಶಕ್ತಿಯ ಮೇಲೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಅದಕ್ಕಾಗಿಯೇ ಅವರು ಮತದಾನ ಮಾಡಲು ಇದ್ದ 21 ವರ್ಷ ವಯೋಮಿತಿಯನ್ನು 18ಕ್ಕೆ ಇಳಿಸಿದರು. ಆ ಮೂಲಕ ಯುವಕರಿಗೆ ಮತದಾನದ ಹಕ್ಕು ನೀಡಿ ದೇಶವನ್ನು ಆಳುವ ನಾಯಕರನ್ನು ಆಯ್ಕೆ ಮಾಡುವ ಅಧಿಕಾರ ನೀಡಿದರು ಎಂದು ನೆನಪಿಸಿಕೊಂಡರು.

ಎಚ್ಚರಿಕೆಯಿಂದ ನೋಡಿಕೊಳ್ಳಿ..
ಮುಂದಿನ ಸಲ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರು ಏನೇ ತಿಪ್ಪರಲಾಗ ಹಾಕಿದರೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಚುನಾವಣೆ ಬಂತಲ್ಲ ಅಂತ ಬಿಜೆಪಿಯವರು ಏನೇನೋ ಆರೋಪ ಮಾಡ್ತಿದ್ದಾರೆ. ಬಹಳ ಎಚ್ಚರಿಕೆಯಿಂದ ಇಂದಿರಾ ಕ್ಯಾಂಟೀನ್‌ ನೋಡಿಕೊಳ್ಳಿ ಎಂದು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.