ಎಸಿಬಿ ತನಿಖಾ ಮಾಹಿತಿ ಬಹಿರಂಗಕ್ಕೆ ಬಿಜೆಪಿ ಸವಾಲು
Team Udayavani, Aug 22, 2017, 8:00 AM IST
ಬೆಂಗಳೂರು: ಯಾರೋ ನೀಡಿದ ಖಾಸಗಿ ದೂರು ದಾಖಲಿಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದಟಛಿ ಎಫ್ಐಆರ್ ದಾಖಲಿಸಿ ಸಮನ್ಸ್ ಜಾರಿ ಮಾಡಿರುವ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳ ವಿರುದಟಛಿ ಕಿಡಿ ಕಾರಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್, ಮುಖ್ಯಮಂತ್ರಿಗಳ ವಿರುದಟಛಿ ದಾಖಲಾಗಿರುವ ದೂರುಗಳು ಸೇರಿ ಕಳೆದ ಒಂದು ವರ್ಷದಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ವಿರುದಟಛಿ ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಮೇಲೆ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಎಸಿಬಿ ಮೂಲಕ ಯಡಿಯೂರಪ್ಪ
ವಿರುದಟಛಿ ಸುಳ್ಳು ಮೊಕದ್ದಮೆ ದಾಖಲಿಸಿ ರಾಜಕೀಯವಾಗಿ ತೊಂದರೆ ನೀಡಲಾಗುತ್ತಿದೆ.
ಕೇವಲ ಎಂಟು-ಹತ್ತು ದಿನಗಳಲ್ಲಿ ದೂರು ಸ್ವೀಕರಿಸಿ ಐದಾರು ದಿನಗಳಲ್ಲಿ ಎಫ್ಐಆರ್ ದಾಖಲಿಸಿ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಆರೋಪಿಸಿದರು.
ಸಿಎಂ ವಿರುದಟಛಿ 25ಕ್ಕೂ ಹೆಚ್ಚು ದೂರು: ಎಸಿಬಿಯಲ್ಲಿ ಮುಖ್ಯಮಂತ್ರಿಗಳ ವಿರುದಟಛಿ 25ಕ್ಕೂ ಹೆಚ್ಚು ದೂರುಗಳು
ದಾಖಲಾಗಿವೆ. ಅನೇಕ ಮಂತ್ರಿಗಳು, ಐಎಎಸ್ ಅಧಿಕಾರಿಗಳ ವಿರುದಟಛಿವೂ ದೂರು ದಾಖಲಾಗಿದೆ. ಆದರೆ, ಈ ದೂರುಗಳಿಗೆ ಸಂಬಂಧಿಸಿದಂತೆ ಯಾವುದೇ ಎಫ್ಐಆರ್ ದಾಖಲಿಸಿಲ್ಲ ಮತ್ತು ವಿಚಾರಣೆಯೂ ಆಗಿಲ್ಲ. ಆದ್ದರಿಂದ ಒಂದು ವರ್ಷದಲ್ಲಿ ಎಷ್ಟು ದೂರುಗಳು ದಾಖಲಾಗಿವೆ? ಎಷ್ಟು ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಲಾಗಿದೆ ಎಂಬುದನ್ನು ಎಸಿಬಿ ಅಧಿಕಾರಿಗಳು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಬಳಿಕ ಯಡಿಯೂರಪ್ಪ ಅವರು ಸ್ವಲ್ಪ ಭೂಮಿಯನ್ನು ಡಿನೋಟಿಫೈ ಮಾಡಿದ್ದರು. ಈ ಮಧ್ಯೆ 2014 ಮತ್ತು 2015ರಲ್ಲಿ ಹಾಗೂ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗಲೇ ಹೈಕೋರ್ಟ್ ಇಡೀ ಭೂಸ್ವಾಧೀನ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲೂ ಹೋಗದ ಕಾಂಗ್ರೆಸ್ ಸರ್ಕಾರ ಬಡಾವಣೆಗೆ ನಿಗದಿಪಡಿಸಿದ್ದ 3546 ಎಕರೆ ಜಮೀನನ್ನು ಹರಾಜು ಹಾಕಲು ಹೊರಟಿದೆ. ಈ ಪ್ರಕರಣದಲ್ಲಿ ನಿಜವಾಗಿಯೂ
ದೂರು ನೀಡುವುದಿದ್ದರೆ ಅದು ಸಿದ್ದರಾಮಯ್ಯ ಅವರ ಮೇಲೆ ನೀಡಬೇಕಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ