ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಕಹಳೆ


Team Udayavani, Aug 23, 2017, 6:30 AM IST

lingayuta.jpg

ಬೆಳಗಾವಿ : ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡುವ ವಿಚಾರವಾಗಿ ಸರ್ವೋತ್ಛ ನ್ಯಾಯಾಲಯ ನೀಡಿದ ತೀರ್ಪನ್ನು ಮನ್ನಿಸಿ ಯಾವುದೇ ವಿಳಂಬಕ್ಕೆ ಆವಕಾಶ ಕೊಡದೆ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಬೇಕು ಎಂಬ ಒಂದೇ ನಿರ್ಣಯದ ಮೂಲಕ ಲಿಂಗಾಯತ ಸಮಾಜದ ಜನರು ಮತ್ತೂಮ್ಮೆ ಕೇಂದ್ರ ಹಾಗೂ ರಾಜ್ಯ ಸರಕಾರದ ಮುಂದೆ ಹಕ್ಕೊತ್ತಾಯ ಮಂಡಿಸಿದರು.

ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ಬೆಳಗಾವಿಯ ನೆಲದಲ್ಲಿ ಮಂಗಳವಾರ ಸೇರಿದ್ದ ಲಕ್ಷಾಂತರ ಜನರ ಸಮ್ಮುಖದಲ್ಲಿ ನಾಡಿನ ವಿವಿಧೆಡೆಗಳಿಂದ ಬಂದಿದ್ದ 50ಕ್ಕೂ ಹೆಚ್ಚು ಮಠಾಧೀಶರು, ಮಾತೆಯರು ಹಾಗೂ ರಾಜಕೀಯ ಮುಖಂಡರು ಈ ಒತ್ತಾಯ ಮಾಡಿದರಲ್ಲದೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು. ಈ ಸಮಾವೇಶದಲ್ಲಿ ಭಾಗಿಯಾಗಿದ್ದ ಮಠಾಧೀಶರು ವೀರಶೈವ ಮಠಾಧೀಶರ ವಿರುದಟಛಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಖೀಲ ಭಾರತ ಲಿಂಗಾಯತ  ಮಹಾಸಭಾ ಸ್ಥಾಪಿಸುವ ಹಾಗೂ ಬಸವ ಸೇನೆ ಕಟ್ಟುವ ಘೋಷಣೆ ಮಾಡಿದರು. ಇನ್ನು ಒಂದು ಸಾಲಿನ ನಿರ್ಣಯ ಮಂಡಿಸಿದ ಶಾಸಕ ಬಸವರಾಜ ಹೊರಟ್ಟಿ ಲಿಂಗಾಯತ ಧರ್ಮವು ಹಿಂದೂ ಸಮಾಜದಿಂದ ಭಿನ್ನವಾದ ಹಾಗೂ ಸ್ವತಂತ್ರ ಧರ್ಮವಾಗಿದೆ.

ಆದಕಾರಣ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸರ್ವೋತ್ಛ ನ್ಯಾಯಾಲಯದ ತೀರ್ಪು ಮನ್ನಿಸಿ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಎಲ್ಲ ಮಠಾಧೀಶರು ಹಾಗೂ ಆಪಾರ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮ ಕರತಾಡನದ ಮೂಲಕ ಆನುಮೋದನೆ ನೀಡಿತು.

ಎರಡನೇ ಕ್ರಾಂತಿ: ಇದಕ್ಕೂ ಮುನ್ನ ಮಾತನಾಡಿದ ಮಠಾಧೀಶರು ಹಾಗೂ ರಾಜಕೀಯ ನಾಯಕರು, ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಕಲ್ಯಾಣ ಕ್ರಾಂತಿ ಮಾಡಿದರು. ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಿದರೆ ಹಿಂದೂ ಧರ್ಮಕ್ಕೆ ಯಾವುದೇ ನಷ್ಟ ಆಗುವುದಿಲ್ಲ. ಇದರ ಬಗ್ಗೆ ಆತಂಕ ವ್ಯಕ್ತಪಡಿಸಿದವರ ಬಗ್ಗೆ ನಮಗೆ ಕಳಕಳಿ ಇದೆ. ಆದರೆ ನಮ್ಮ ವಿಷಯದಲ್ಲಿ ಮೂಗು ತೂರಿಸುವದು ಬೇಡ ಎಂದು ಬಹುತೇಕ ಮಠಾಧೀಶರು ಆರ್‌ಎಸ್‌ಎಸ್‌ ಪ್ರಮುಖ ಮೋಹನ್‌ ಭಾಗವತ್‌ಗೆ ಸಂದೇಶ ರವಾನಿಸಿದರು.

ವೀರಶೈವರು ನಮ್ಮ ಜೊತೆ ಬಂದರೆ ಅವರನ್ನು ಆಪ್ಪಿಕೊಳ್ಳುತ್ತೇವೆ. ಇಲ್ಲದಿದ್ದರೆ ಗಾಂಧೀಜಿ ಬ್ರಿಟಿಷರ ವಿರುದ್ದ ಭಾರತ ಬಿಟ್ಟು ತೊಲಗಿ ಚಳವಳಿ ಮಾಡಿದಂತೆ ವೀರಶೈವರ ವಿರುದಟಛಿ ಚಳವಳಿ ಮಾಡಬೇಕಾಗುತ್ತದೆ ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮಿಗಳು ಎಚ್ಚರಿಸಿದರು. ಮಾತೆ ಮಹಾದೇವಿ ಮಾತನಾಡಿ, ಲಿಂಗಾಯತ ಸ್ವತಂತ್ರ ಧರ್ಮ ಎಂದು ಘೋಷಿಸಿದ ನಂತರವೂ ಹಿಂದೂ ಧರ್ಮವನ್ನು ವಿರೋಧಿಸುವುದಿಲ್ಲ. ಇದನ್ನು ಕೇಂದ್ರ ಅರ್ಥ ಮಾಡಿಕೊಳ್ಳಬೇಕು ಎಂದರು. ಲಿಂಗಾಯತ ಧರ್ಮದ ವಿಚಾರದಿಂದ ದೂರ ಉಳಿದ ಬಿಜೆಪಿ ನಾಯಕರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮುರುಘಾ ಶರಣರು ಮಾತನಾಡಿ, ಸಾವಿರಾರು ವಿರಕ್ತಮಠದ ಮಠಾಧೀಶರು ಈ ಸಮಾವೇಶಕ್ಕೆ ಬರ ಬೇಕಿತ್ತು. ಆದರೆ ಗೈರು ಹಾಜರಾದ ಮಠಾಧೀಶರ ಹೃದಯ ಪರಿವರ್ತನೆ ಮಾಡಬೇಕಿದೆ ಎಂದರು.

ಬಿಜೆಪಿ ನಾಯಕರು ಗೈರು: ಸಮಾವೇಶದಲ್ಲಿ ಬಿಜೆಪಿ ನಾಯಕರ ಗೈರು ಎದ್ದುಕಂಡಿತು. ಕೆಲ ಮಠಾಧೀಶರು ಈ ಬಗ್ಗೆ ಅಸಮಾಧಾನವನ್ನೂ ಹೊರ ಹಾಕಿದರು. ಕಾಂಗ್ರೆಸ್‌ ಮುಖಂಡರಾದ ಆಶೋಕ ಪಟ್ಟಣ, ವೀರಣ್ಣ ಮತ್ತಿಕಟ್ಟಿ, ಗಣೇಶ ಹುಕ್ಕೇರಿ, ಲಕ್ಷ್ಮಿ ಹೆಬ್ಟಾಳಕರ ಪಾಲ್ಗೊಂಡಿದ್ದರು. ಸಮಾವೇಶದ ನಂತರ ಮಠಾಧೀಶರು, ಲಿಂಗಾಯತ ಸಮಾಜದ ಮುಖಂಡರು, ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ರ್ಯಾಲಿಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.